ಅತಿ ಮೋಹದಿಂದ ಅವಸಾನ ಖಚಿತ

ಅಂತರಂಗ ಶುದ್ಧವಿಲ್ಲದವರ ಸಂಗ ವಿಷವೆಂಬುದರ ಅರಿವು ಅಗತ್ಯ: ಡಾ| ಪಂಡಿತಾರಾಧ್ಯ ಶಿವಾಚಾರ್ಯ ಶ್ರೀ

Team Udayavani, Aug 26, 2021, 6:46 PM IST

26-15

ಹೊಸದುರ್ಗ: ತನು, ಮನ, ಧನವನ್ನು ಗುರು, ಲಿಂಗ, ಜಂಗಮಕ್ಕೆ ಅರ್ಪಿಸಬೇಕು. ಬದಲಾಗಿ ತನು, ಮನ, ಧನಗಳ ಮೋಹಕ್ಕೆ ಒಳಗಾದರೆ ಕೇಡು ತಪ್ಪಿದ್ದಲ್ಲ. ಇಂಥವರನ್ನು ಶರಣರು ಭವಿಗಳು ಎನ್ನುವರು.

ಇಂಥವರು ಸಮಾಜದಲ್ಲಿ ಬೇಕಾದಷ್ಟು ಜನರಿದ್ದಾರೆ. ಇವರ ಒಡನಾಟ ಸಲ್ಲದು ಎಂದು ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಶ್ರೀ ತರಳಬಾಳು ಜಗದ್ಗುರು ಶಾಖಾ ಮಠ ಆಯೋಜಿಸಿರುವ “ಮತ್ತೆ ಕಲ್ಯಾಣ’ ಅಂತರ್ಜಾಲ ಉಪನ್ಯಾಸ ಮಾಲಿಕೆಯ 25ನೇ ದಿನದ ಕಾರ್ಯಕ್ರಮದಲ್ಲಿ ಶ್ರೀಗಳು ಆಶೀರ್ವಚನ ನೀಡಿದರು. ಸಜ್ಜನರ ಒಡನಾಟ ಹೆಜ್ಜೆàನು ಸವಿದಂತೆ. ಅಂತರಂಗ ಶುದ್ಧವಿಲ್ಲದವರ ಸಂಗ ವಿಷ. ವ್ಯಕ್ತಿ ಬಡವನಾದರೂ ಮನಸ್ಸಿನಿಂದ ಶ್ರೀಮಂತನಾಗಬೇಕು. ಆಗ ಬದುಕು ಭವ್ಯವಾಗುವುದು ಎಂದರು.

ಬಸವ ಸಂದೇಶ ಕಾಲಾತೀತ, ದೇಶಾತೀತ. ಕನ್ನಡ ನಾಡಿನ ದಾರ್ಶನಿಕ ಪರಂಪರೆಯಲ್ಲಿ 12ನೇ ಶತಮಾನದ ಶರಣ ಪರಂಪರೆ ಬಹು ದೊಡ್ಡದು. ಅಲ್ಲಿ ಅನುಭಾವಿಗಳ ಸಮೂಹವೇ ಇತ್ತು. ಇವರೆಲ್ಲರೂ ಸಂಸಾರದಲ್ಲಿದ್ದುಕೊಂಡೇ ಆಧ್ಯಾತ್ಮದ ಅನುಭೂತಿ ಪಡೆದರು. ಇದಕ್ಕೆ ಕಾರಣ ಬಸವಣ್ಣನವರು ಹಾಕಿಕೊಟ್ಟ ಕಾಯಕ-ದಾಸೋಹ ತತ್ವ. ಶರಣರೆಲ್ಲರೂ ಕಾಯಕವೇ ಕೈಲಾಸವೆಂದು ದುಡಿಮೆಯಲ್ಲಿಯೇ ದೇವರನ್ನು ಕಂಡವರು.

ಈ ಎಲ್ಲ ಶರಣರ ಬದುಕಿಗೆ ಬೆಳಕನ್ನು ಕರುಣಿಸಿದವರು ಬಸವಣ್ಣ. ಅವರ ಹೆಸರೇ ಮಂತ್ರ ಸದೃಶವಾದುದು ಎಂದು ಬಣ್ಣಿಸಿದರು. ಉಪನ್ಯಾಸ ಮಾಲಿಕೆಯಲ್ಲಿ “ಅನಿವಾಸಿ ಭಾರತೀಯರಿಗೆ ಬಸವ ತತ್ವದ ಪ್ರಸ್ತುತತೆ’ ಕುರಿತು ಇಂಗ್ಲೆಂಡ್‌ನ‌ ನ್ಯಾಷನಲ್‌ ಹೆಲ್ತ್‌ ಸರ್ವಿಸ್‌ನ ತಜ್ಞ ವೈದ್ಯ ಡಾ| ಜಿ.ಎಸ್‌. ಶಿವಪ್ರಸಾದ್‌ ಮಾತನಾಡಿ, ವೃತ್ತಿ ಆಶಯ, ವೈಯುಕ್ತಿಕ, ಆರ್ಥಿಕ ಉನ್ನತಿ ಮುಂತಾದ ಕಾರಣದಿಂದ ಅನೇಕ ಭಾರತೀಯರು ವಲಸೆ ಬಂದಿದ್ದಾರೆ. ಇಲ್ಲಿಗೆ ಬಂದ ಅನಿವಾಸಿಗಳಿಗೆ ಭಾಷೆ, ಸಂಸ್ಕೃತಿ, ಆಧ್ಯಾತ್ಮ ತೃಷೆ, ತಾಯ್ನಾಡಿನ ತುಡಿತ, ಮಕ್ಕಳು, ಮೊಮ್ಮಕ್ಕಳು ಮೂಲ ಬೇರುಗಳನ್ನು ಕಳೆದುಕೊಳ್ಳುವುದರ ಬಗ್ಗೆ ಆತಂಕವಿರುವುದು ಸಹಜ. ಈ ಆತಂಕ ನಿವಾರಣೆಗೆ ಕನ್ನಡ ಸಂಘಗಳನ್ನು ಕಟ್ಟಿಕೊಂಡು ಭಾಷೆಯನ್ನು ಬೆಳೆಸುವ, ಉಳಿಸುವ ಕೆಲಸ ಯಶಸ್ವಿಯಾಗಿ ನಡೆದಿದೆ.

ಈ ಹಿನ್ನೆಲೆಯಲ್ಲಿ ಇಂಗ್ಲೆಂಡಿನಲ್ಲಿ ಬಸವ ತತ್ವದ ಪರಿಕಲ್ಪನೆಯಡಿ ಜಾತ್ಯತೀತವಾಗಿ ವೀರಶೈವ ಸಮಾಜ ಎನ್ನುವ ಸಂಸ್ಥೆಯ ಮೂಲಕ ಕಾಲ ಕಾಲಕ್ಕೆ ಶರಣರ ಬದುಕು-ಬರಹ ಕುರಿತಂತೆ ಕಾರ್ಯಕ್ರಮಗಳನ್ನು ಆಯೋಜಿಸುತ್ತ ಬಂದಿದ್ದೇವೆ. ಥೇಮ್ಸ್‌ ನದಿಯ ದಡದಲ್ಲಿ ಸ್ಥಾಪಿಸಿರುವ ಬಸವೇಶ್ವರರ ಪ್ರತಿಮೆಯನ್ನು ಭಾರತದ ಪ್ರಧಾನಿ ಮೋದಿಯವರು ಅನಾವರಣಗೊಳಿಸಿದ್ದು ಬಸವ ತತ್ವದ ಅರಿವು ಮತ್ತು ಪ್ರಸ್ತುತಿಗೆ ಸಾಕ್ಷಿಯಾಗಿದೆ ಎಂದು ತಿಳಿಸಿದರು. ಅಸಹಾಯಕರಿಗೆ, ಅನಾಥಾಶ್ರಮಗಳಿಗೆ, ಕೊರೊನಾ ಸೋಂಕಿತರಿಗೆ ಆರ್ಥಿಕ ಸಹಾಯ ಮಾಡುವ ಮೂಲಕ ಇಲ್ಲಿನ ವೀರಶೈವ ಸಮಾಜ ಮತ್ತು ಕನ್ನಡ ಬಳಗ ಬಸವ ತತ್ವಗಳಲ್ಲಿ ಒಂದಾದ “ದಾಸೋಹ ತತ್ವ’ಕ್ಕೆ ವಿಶೇಷವಾದ ಅರ್ಥ ನೀಡಿದೆ. ಆರ್ಥಿಕವಾಗಿ ಅನುಕೂಲವಾಗಿರುವ ಅನಿವಾಸಿ ಭಾರತೀಯರು ಪಡೆಯುವುದಕ್ಕಿಂತ ಕೊಡುವುದರಲ್ಲಿಯೇ ಸಾರ್ಥಕತೆಯಿದೆ ಎನ್ನುವುದನ್ನು ಅರಿತಿದ್ದಾರೆ.

ಇಲ್ಲಿನ ಎಷ್ಟೋ ದಾನಿಗಳು ಆನ್‌ಲೈನ್‌ ಮೂಲಕ ಡೊನೇಷನ್‌ ಕೊಡುವಾಗ ತಮ್ಮ ಹೆಸರನ್ನು ಪ್ರಕಟಿಸಬಾರದು ಎಂದು ಹೇಳುವುದು “ಮಾಡಿ ಮಾಡಿ ಕೆಟ್ಟರು ಮನವಿಲ್ಲದೆ, ನೀಡಿ ನೀಡಿ ಕೆಟ್ಟರು ನಿಜವಿಲ್ಲದೆ’ ಎನ್ನುವ ಬಸವಣ್ಣನವರ ವಚನವವನ್ನು ನೆನಪಿಸುತ್ತದೆ ಎಂದರು. ಇಟಲಿಯ ಹೇಮೇಗೌಡ ರುದ್ರಪ್ಪ ಸ್ವಾಗತಿಸಿದರು.

ಶಿವಸಂಚಾರದ ಕೆ. ಜ್ಯೋತಿ, ಕೆ. ದಾûಾಯಣಿ, ಎಚ್‌. ಎಸ್‌. ನಾಗರಾಜ್‌ ವಚನಗೀತೆಗಳನ್ನು ಹಾಡಿದರು. ಶಿವಮೊಗ್ಗದ ಸಹಚೇತನ ನಾಟ್ಯಾಲಯ ಕೇಂದ್ರದ ಕಲಾವಿದರು ವಚನ ನೃತ್ಯ ಪ್ರದರ್ಶಿಸಿದರು.

ಟಾಪ್ ನ್ಯೂಸ್

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

18

Road mishap: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.