ಅಧಿಕಾರ ಹೆಗಲ ಮೇಲಿದ್ದರೆ ಜವಾಬ್ಧಾರಿ ಹೆಚ್ಚಳ


Team Udayavani, Feb 10, 2020, 2:35 PM IST

10-February-28

ಚಿತ್ರದುರ್ಗ: ಅಧಿಕಾರ ತಲೆಗೆ ಹೋದರೆ ಅಹಂಕಾರ ಬರುತ್ತೆ. ಆದರೆ, ಹೆಗಲಲ್ಲಿಟ್ಟುಕೊಂಡರೆ ಜವಾಬ್ದಾರಿಯಾಗುತ್ತದೆ. ಅದರ ಭಾರದ ಅರಿವಿರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌ ಹೇಳಿದರು.

ನಗರದ ಕಾಟಮ್ಮ ಪಟೇಲ್‌ ವೀರನಾಗಪ್ಪ ಸಮುದಾಯ ಭವನದಲ್ಲಿ ಭಾನುವಾರ ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಎ. ಮುರುಳಿ ಅವರ ಪದಗ್ರಹಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ಪಕ್ಷದಲ್ಲಿ ಅಧ್ಯಕ್ಷ ಸ್ಥಾನ ಒಂದು ಅಧಿಕಾರ ಅಲ್ಲ. ಅದೊಂದು ಜವಾಬ್ದಾರಿ. ಪಕ್ಷದಲ್ಲಿ ಎಲ್ಲರನ್ನೂ ಪ್ರೀತಿ, ವಿಶ್ವಾಸದಿಂದ ಒಟ್ಟಿಗೆ ಕರೆದೊಯ್ಯುವ ಜವಾಬ್ದಾರಿ. ಪಕ್ಷಕ್ಕೆ ಕಳಂಕ ಬಾರದಂತೆ ಜಿಲ್ಲೆ, ಮಂಡಲ ಹಾಗೂ ಬೂತ್‌ ಅಧ್ಯಕ್ಷರು ಮುಂದಿನ ಮೂರು ವರ್ಷ ಪಕ್ಷ ಸಂಘಟನೆ ಮಾಡಬೇಕು. ಪಕ್ಷದ ಕೆಲಸವನ್ನು ಜವಾಬ್ದಾರಿ ಎಂದು ತಿಳಿದು ಹೆಗಲ ಮೇಲೆ ಹೊತ್ತು ಸಾಗುವವರು ಬೇಕು. ನೇತಾಡುವವರು ನಮಗೆ ಬೇಡ. ನನ್ನ ಅವಧಿಯಲ್ಲಿ ನೇತಾಡುವವರಿಗೆ ಅವಕಾಶ ಇಲ್ಲ. ಕೆಲಸ, ಶ್ರಮ ಹಾಗೂ ಸಮಯ ಕೊಡುವವರನ್ನು ನಾವು ಎಂದೂ ಬಿಟ್ಟು ಕೊಡುವುದಿಲ್ಲ ಎಂದು ಹೇಳಿದರು.

ದೇಶ ವಿಭಜನೆಯಾದಾಗ ಪಾಕಿಸ್ತಾನದಲ್ಲಿ ಶೇ.27ರಷ್ಟಿದ್ದ ಅಲ್ಪ ಸಂಖ್ಯಾತರು ಈಗ ಶೇ.3ಕ್ಕೆ ಬಂದಿದ್ದಾರೆ. ಉಳಿದವರು ಎಲ್ಲಿ ಹೋದರು ಎಂದು ಕಾಂಗ್ರೆಸ್ಸಿನವರನ್ನು ಪ್ರಶ್ನೆ ಮಾಡಿ. ಪಾಕಿಸ್ತಾನದಿಂದ ಬರುವ ಅಲ್ಪ ಸಂಖ್ಯಾತರಿಗೆ ಭಾರತದ ಪೌರತ್ವ ನೀಡಿ ಎಂದು ಹಿಂದೆ ಗಾಂಧೀಜಿ ಹೇಳಿದ್ದರು. ಆದರೆ, ಅವರ ಟೋಪಿ
ಹಾಕಿಕೊಂಡಿರುವ ಕಾಂಗ್ರೆಸ್‌ ವಿಚಾರಗಳಿಗೆ ತಿಲಾಂಜಲಿ ಇಟ್ಟಿದೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಗಾಂಧೀಜಿ ಹೇಳಿದ ಕೆಲಸ ಮಾಡುತ್ತಿದ್ದಾರೆ ಎಂದರು.

ನೂತನ ಬಿಜೆಪಿ ಜಿಲ್ಲಾಧ್ಯಕ್ಷ ಎ. ಮುರುಳಿ ಮಾತನಾಡಿ, ಕುಗ್ರಾಮದಿಂದ ಬಂದ ಸಾಮಾನ್ಯ ಕಾರ್ಯಕರ್ತನನ್ನು ಜಗತ್ತಿನ ಅತೀ ದೊಡ್ಡ ಪಕ್ಷದ ಜಿಲ್ಲಾಧ್ಯಕ್ಷನನ್ನಾಗಿ ಮಾಡಿರುವುದು ನನ್ನ ಸೌಭಾಗ್ಯ. ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿ ಜಿಲ್ಲೆಯ 1648 ಬೂತ್‌ಗಳಲ್ಲೂ ಪಕ್ಷವನ್ನು ಸದೃಢಗೊಳಿಸುತ್ತೇನೆ ಎಂದರು.

ಸದ್ಯದಲ್ಲೇ ಕಾರ್ಯಕರ್ತರ ಚುನಾವಣೆ ಎಂದೇ ಹೆಸರಾಗಿರುವ ಗ್ರಾಮ ಪಂಚಾಯಿತಿ ಚುನಾವಣೆ ಇದೆ. ಅದರಲ್ಲಿ ನಮ್ಮ ಕಾರ್ಯಕರ್ತರು ಹೆಚ್ಚು ಹೆಚ್ಚು ಗೆಲ್ಲಬೇಕು. ಪಂಚಾಯಿತಿಯಿಂದ ಪಾರ್ಲಿಮೆಂಟ್‌ವರೆಗೆ ನಮ್ಮ ಪಕ್ಷ ಅಧಿಕಾರದಲ್ಲಿರಬೇಕು ಎಂಬ ಪಕ್ಷದ ವರಿಷ್ಟರ ಮಾತಿನಂತೆ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುತ್ತೇವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಭಾಗ ಪ್ರಭಾರಿ ಜಿ.ಎಂ. ಸುರೇಶ್‌ ಮಾತನಾಡಿದರು. ಮಾಜಿ ಶಾಸಕರಾದ ಪಿ. ರಾಮಯ್ಯ, ಪಿ. ರಮೇಶ್‌, ಮುಖಂಡರಾದ ಸಿದ್ದೇಶ್‌ ಯಾದವ್‌, ಬದರೀನಾಥ್‌, ಲಿಂಗಮೂರ್ತಿ, ಜಯಪಾಲ್‌, ಮಲ್ಲಿಕಾರ್ಜುನ್‌, ಟಿ.ಜಿ. ನರೇಂದ್ರನಾಥ್‌, ಶ್ರೀನಿವಾಸ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.