ಜಿಲ್ಲಾ ಬಿಜೆಪಿಗೆ ಇನ್ನು ಮುಂದೆ ಮುರಳಿ ಸಾರಥ್ಯ
ನೂತನ ಜಿಲ್ಲಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಯಾದ ಹಿರಿಯೂರಿನ ಯಾದವ ಸಮುದಾಯದ ಮುಖಂಡ
Team Udayavani, Jan 13, 2020, 5:10 PM IST
ಚಿತ್ರದುರ್ಗ: ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದ ಮುರಳಿ ಆಯ್ಕೆಯಾಗಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ನಡೆದ ಪಕ್ಷದ ಮುಖಂಡರು, ಶಾಸಕರು ಹಾಗೂ ಆಕಾಂಕ್ಷಿಗಳ ಸಭೆಯಲ್ಲಿ ಮುರಳಿ ಅವರನ್ನು ನೂತನ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.
ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್, ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ, ಎಂ. ಚಂದ್ರಪ್ಪ, ಗೂಳಿಹಟ್ಟಿ ಶೇಖರ್, ಜಿಲ್ಲಾಧ್ಯಕ್ಷ ನವೀನ್ ಹಾಗೂ ಆಕಾಂಕ್ಷಿಗಳ ಸಭೆಯಲ್ಲಿ ಮುರಳಿ ಆಯ್ಕೆಗೆ ಒಮ್ಮತಕ್ಕೆ ಬರಲಾಯಿತು ಎಂದು ಮೂಲಗಳು ತಿಳಿಸಿವೆ.
ಕಳೆದ ಆರು ತಿಂಗಳುಗಳಿಂದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲಿಂಗಮೂರ್ತಿ, ಟಿ. ಬದರೀನಾಥ್, ಹಾಲಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್, ಜಯಪಾಲ್, ಮುರಳಿ ಮತ್ತಿತರರು ರೇಸ್ ನಲ್ಲಿದ್ದರು. ಅಂತಿಮವಾಗಿ ಯಾದವ ಸಮುದಾಯಕ್ಕೆ ಸೇರಿದ ಹಿರಿಯೂರು ತಾಲೂಕು ಆಲಮರದಹಟ್ಟಿ ಗ್ರಾಮದ ಮುರಳಿ ಹೆಸರನ್ನು ಒಮ್ಮತದಿಂದ ಘೋಷಣೆ ಮಾಡಲಾಯಿತು.
ಬಿಎಚ್ಎಂಎಸ್, ಫಾರ್ಮಸಿ ವಿದ್ಯಾಭ್ಯಾಸ ಮಾಡಿರುವ ಮುರಳಿ, ಈ ಹಿಂದೆ ಎರಡು ಅವ ಧಿಗೆ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ, ಒಮ್ಮೆ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಕಳೆದ ನಾಲ್ಕು ವರ್ಷಗಳಿಂದ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಈಗ ಜಿಲ್ಲಾಧ್ಯಕ್ಷ ಸ್ಥಾನ ಒಲಿದು ಬಂದಿದೆ.
ಮುರಳಿ ಆಯ್ಕೆ ನಂತರ ಮಾತನಾಡಿದ ನಿಕಟಪೂರ್ವ ಜಿಲ್ಲಾಧ್ಯಕ್ಷ ಕೆ.ಎಸ್. ನವೀನ್, ಯಾವುದೇ ಶಿಫಾರಸ್ಸು, ಪ್ರಭಾವವಿಲ್ಲದೇ ಪಕ್ಷದ ನಾಯಕರು ನಿಷ್ಠಾವಂತ ಕಾರ್ಯಕರ್ತ ಎ. ಮುರಳಿ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯಲ್ಲಿ ಪಕ್ಷ ಸಂಘಟಿಸಲಿ ಎಂದು ಹಾರೈಸಿದರು.
ಜಿಲ್ಲಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದವರು ನಿರಾಶಾಗದೆ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಇನ್ನೂ ಒಳ್ಳೆಯ ಜವಾಬ್ದಾರಿ ಸಿಗಲಿದೆ ಎಂದರು. ವಿಭಾಗೀಯ ಪ್ರಭಾರಿ ಜಿ.ಎಂ. ಸುರೇಶ್ ಮಾತನಾಡಿ, ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಇನ್ನೂ ಅನೇಕರು ಸ್ಪರ್ಧಿಗಳಾಗಿದ್ದರು. ಪಕ್ಷ ಗುರುತಿಸಿ ಯಾರಿಗೆ ಜವಾಬ್ದಾರಿ ನೀಡಿದೆಯೋ ಅವರೊಂದಿಗೆ ಎಲ್ಲರೂ ಕೈಜೋಡಿಸಿ ಪಕ್ಷ ಸಂಘಟನೆಗೆ ಶ್ರಮಿಸಬೇಕು. ಮುಂದೆ ಸಾಕಷ್ಟು ಅವಕಾಶಗಳಿವೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಬಿಜೆಪಿ ಅ ಧಿಕಾರ ನೀಡಲಿದೆ ಎನ್ನುವುದಕ್ಕೆ ಮುರಳಿ ಜಿಲ್ಲಾಧ್ಯಕ್ಷರಾಗಿರುವುದೇ ಸಾಕ್ಷಿ ಎಂದು ಹೇಳಿದರು.
ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲಿಂಗಮೂರ್ತಿ, ಸಿದ್ದೇಶ್ ಯಾದವ್, ಮಲ್ಲಿಕಾರ್ಜುನ್, ಜೈಪಾಲ್, ರತ್ನಮ್ಮ, ನಾಗರಾಜ ಬೇದ್ರೆ, ನಂದಿ ನಾಗರಾಜ್ ಮತ್ತಿತರರು ಇದ್ದರು. ಚುನಾವಣಾಧಿಕಾರಿ ಸಿದ್ದರಾಮಣ್ಣ, ನೂತನ ಜಿಲ್ಲಾಧ್ಯಕ್ಷ ಎ. ಮುರಳಿ ಅವರ ಆಯ್ಕೆಯನ್ನು ಘೋಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ