ಚಳ್ಳಕೆರೆಯಿಂದ ಮಣಿಪಾಲ್ಗೆ ಬಸ್ ಸಂಚಾರ
Team Udayavani, Jun 25, 2020, 12:25 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಿತ್ರದುರ್ಗ: ಕೆಎಸ್ಆರ್ಟಿಸಿ ಚಿತ್ರದುರ್ಗ ವಿಭಾಗದ ಚಳ್ಳಕೆರೆಯಿಂದ ಮಣಿಪಾಲಕ್ಕೆ ಜೂ. 25 ರಿಂದ ಎಕ್ಸ್ಪ್ರೆಸ್ ಬಸ್ ಸೇವೆ ಪುನರಾರಂಭ ಮಾಡಲಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ವಿಜಯಕುಮಾರ್ ತಿಳಿಸಿದ್ದಾರೆ.
ಈ ಬಸ್ ಹೊಳಲ್ಕೆರೆ, ಚನ್ನಗಿರಿ, ಶಿವಮೊಗ್ಗ, ತೀರ್ಥಹಳ್ಳಿ, ಕುಂದಾಪುರ, ಉಡುಪಿ ಮಾರ್ಗದಲ್ಲಿ ದಿನನಿತ್ಯ ಕಾರ್ಯಚರಣೆ ನಡೆಸಲಿದೆ. ಕೋವಿಡ್ ಲಾಕ್ಡೌನ್ ಘೋಷಣೆಯಾಗಿದ್ದ ಕಾರಣ ಈ ಹಿಂದೆ ಚಾಲನೆಯಲ್ಲಿದ್ದ ಈ ಮಾರ್ಗದ ಬಸ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಜೂ. 25 ರಿಂದ ಪುನರಾರಂಭಿಸಿದ್ದು ಪ್ರತಿದಿನ ಚಳ್ಳಕೆರೆಯಿಂದ ಸಂಜೆ 7.15 ಗಂಟೆಗೆ ಹೊರಡುವ ಬಸ್ ಹೊಳಲ್ಕೆರೆ, ಚನ್ನಗಿರಿ, ಶಿವಮೊಗ್ಗ, ತೀರ್ಥಹಳ್ಳಿ, ಕುಂದಾಪುರ ಮಾರ್ಗವಾಗಿ ಬೆಳಗಿನ ಜಾವ 4-30 ಗಂಟೆಗೆ ಉಡುಪಿ ತಲುಪಲಿದೆ.
ಪುನಃ ಮಣಿಪಾಲ್ನಿಂದ ಸಂಜೆ 6 ಗಂಟೆಗೆ ಹೊರಡುವ ಬಸ್ ಉಡುಪಿ, ಕುಂದಾಪುರ, ತೀರ್ಥಹಳ್ಳಿ, ಶಿವಮೊಗ್ಗ, ಚನ್ನಗಿರಿ, ಹೊಳಲ್ಕೆರೆ ಮಾರ್ಗವಾಗಿ ಚಳ್ಳಕೆರೆಗೆ ಬೆಳಿಗ್ಗೆ 3:15ಕ್ಕೆ ತಲುಪಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ