ಸೋಂಕಿನಿಂದ ಗುಣಮುಖರಾದ ಕೋವಿಡ್ ವಾರಿಯರ್ಸ್ ಬಿಡುಗಡೆ
Team Udayavani, Jun 20, 2020, 4:53 PM IST
ಚಿತ್ರದುರ್ಗ: ಚಳ್ಳಕೆರೆ ಕೋವಿಡ್ ಹೆಲ್ತ್ ಕೇರ್ನಲ್ಲಿ ಕಾರ್ಯನಿರ್ವಹಿಸುವ ವೇಳೆ ಸೋಂಕು ತಗುಲಿದ್ದ ಆರೋಗ್ಯ ಸಹಾಯಕ ಮತ್ತು ಗ್ರೂಪ್ “ಡಿ’ ನೌಕರ ಕೋವಿಡ್ ಸೋಂಕು ಮುಕ್ತರಾಗಿ ಬಿಡುಗಡೆಯಾಗಿದ್ದಾರೆ.
ಚಳ್ಳಕೆರೆ ಬಿಸಿಎಂ ವಿದ್ಯಾರ್ಥಿ ನಿಲಯದಲ್ಲಿ ಉತ್ತರ ಪ್ರದೇಶ ಮೂಲದ ಕಾರ್ಮಿಕರಿಗೆ ಚಿಕಿತ್ಸೆ ನೀಡುವ ವೇಳೆ ಈ ಇಬ್ಬರಿಗೂ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ ಚಿತ್ರದುರ್ಗದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದು, ಆನಂತರ ಪರೀಕ್ಷೆ ಮಾಡಿದ ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಬಿಡುಗಡೆ ಮಾಡಲಾಗಿದೆ. ಇಬ್ಬರಿಗೂ 7 ದಿನಗಳ ಹೋಂ ಕ್ವಾರಂಟೈನ್ ಹಾಗೂ ಮನೆಯಲ್ಲಿ ಇರುವಾಗ ಅನುಸರಿಸಬೇಕಾದ ನಿಯಮಗಳನ್ನು ತಿಳಿಸಿ ಬಿಡುಗಡೆ ಮಾಡಲಾಗಿದೆ ಎಂದು ಡಿಎಚ್ಒ ಡಾ| ಸಿ.ಎಲ್. ಪಾಲಾಕ್ಷ ತಿಳಿಸಿದ್ದಾರೆ.
ಈ ವೇಳೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಬಸವರಾಜ್, ಡಾ| ಬಿ. ಜಯಮ್ಮ, ಡಾ| ಬಿ.ವಿ. ಗಿರೀಶ್, ಸಹಾಯಕ ಆಡಳಿತಾಧಿಕಾರಿ ಅಸ್ಲಾಂ, ಆರೋಗ್ಯ ಶಿಕ್ಷಣಾಧಿಕಾರಿ ಮಂಜುನಾಥ್, ಮೂಗಪ್ಪ, ಎಚ್.ಬಿ. ಪೂಜಾರ್, ಆರೋಗ್ಯ ಸಹಾಯಕರಾದ ರಂಗಾರೆಡ್ಡಿ, ಹನುಮಂತಪ್ಪ, ಪ್ರಸನ್ನ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು