ಅಪರೂಪಕ್ಕೆ ಬಂದು ಹೋದರೆ ಅಭಿವೃದ್ಧಿ ಹೇಗೆ ಸಾಧ್ಯ?
ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯವೈಖರಿಗೆ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಪರೋಕ್ಷ ಅಸಮಾಧಾನ
Team Udayavani, May 30, 2020, 1:23 PM IST
ಚಿತ್ರದುರ್ಗ: ಬಿಜೆಪಿ ಮೂರು ಸಲ ಅಧಿಕಾರಕ್ಕೆ ಬಂದಾಗಲೂ ಬೇರೆಯವರೇ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ. ಇದರಿಂದ ಜಿಲ್ಲೆಯ ಅಭಿವೃದ್ಧಿ ಕುಂಠಿತವಾಗಿದೆ ಎಂದು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಬೇಸರ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹೊರಗಿನವರೇ ಇಲ್ಲಿಗೆ ಉಸ್ತುವಾರಿ ಸಚಿವರಾಗುತ್ತಿದ್ದಾರೆ. ಇದರಿಂದ ಜಿಲ್ಲೆ ಅಭಿವೃದ್ಧಿಯಲ್ಲಿ ಹಿಂದುಳಿಯುತ್ತಿದೆ. ಜಿಲ್ಲೆಯಲ್ಲಿ ಈಗ ಬಿಜೆಪಿ ಬಲಿಷ್ಠವಾಗಿ ಬೆಳೆಯುತ್ತಿದೆ. ಆದರೆ ಉಸ್ತುವಾರಿ ವಹಿಸಿಕೊಂಡವರು ಆರು ತಿಂಗಳಿಗೋ, ಮೂರು ತಿಂಗಳಿಗೋ ಬಂದು ಹೋದರೆ ಹೇಗೆ ಎಂದು ಪ್ರಶ್ನಿಸಿದರು. ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ಮಾಡಿ ಹೋದರೆ, 6 ತಿಂಗಳಿಗೊಂದು ಕೆಡಿಪಿ ಸಭೆ ಮಾಡಿದರೆ ಇಲ್ಲಿನ ಸಮಸ್ಯೆಗಳು ಬಗೆಹರಿಯುವುದಿಲ್ಲ. ಎಲ್ಲ ಶಾಸಕರು ಕೂಡಾ ಸುದೀರ್ಘವಾಗಿ ಚರ್ಚಿಸಿದ ಉದಾಹರಣೆಗಳಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
2013ರಲ್ಲಿ ಜಿಲ್ಲೆಗೆ ಮೆಡಿಕಲ್ ಕಾಲೇಜು ಮಂಜೂರಾಗಿದೆ. ಆದರೆ ಅನುದಾನ ಬಿಡುಗಡೆಯಾಗಿಲ್ಲ ಎಂದು ಆಕ್ಷೇಪಿಸಿದರು. ಶೇ. 80 ರಷ್ಟು ಹಿಂದುಳಿದ, ದಲಿತರಿರುವ ಜಿಲ್ಲೆಯಾಗಿದೆ. 2008ರಲ್ಲಿ ಬಿಎಸ್ವೈ ಮುಖ್ಯಮಂತ್ರಿ ಆಗಿದ್ದಾಗ ಭದ್ರಾ ಮೇಲ್ದಂಡೆ ಯೋಜನೆಗೆ ಚಾಲನೆ ನೀಡಿದರು. ಅಂದು ವಿವಿ ಸಾಗರಕ್ಕೆ 5 ಟಿಎಂಸಿ ನೀರು ಹಂಚಿಕೆ ಮಾಡಲಾಗಿತ್ತು. ಆದರೆ ನಂತರ ಬಂದ ಕಾಂಗ್ರೆಸ್ ಸರ್ಕಾರ ಅದನ್ನು 2 ಟಿಎಂಸಿಗೆ ಇಳಿಸಿದೆ. ಭದ್ರಾದಿಂದ 5 ಟಿಎಂಸಿ, ಎತ್ತಿನಹೊಳೆ ಯೋಜನೆಯಿಂದ 5 ಸೇರಿ ವಿವಿ ಸಾಗರಕ್ಕೆ 10 ಟಿಎಂಸಿ ನೀರು ಹರಿಸಿದರೆ ಮಾತ್ರ ಜಿಲ್ಲೆಗೆ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಸಮರ್ಥವಾಗಿ ಹೋರಾಡಲು ಪ್ರತಿನಿಧಿ ಬೇಕು. ಈ ಭಾಗದ ಎಲ್ಲಾ ಸಂಘಟನೆಗಳು, ರೈತರು ಸೇರಿ ಹೋರಾಡಿದರಷ್ಟೇ ಸಾಧ್ಯ. ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಹಿಂದುಳಿದಿರುವ ಜಿಲ್ಲೆಗೆ ಅವರಿಂದ ಸಕಾರಾತ್ಮಕ ಫಲಿತಾಂಶ ಸಿಗುವ ನಿರೀಕ್ಷೆಯಲ್ಲಿದ್ದೇವೆ. ಈ ಬಗ್ಗೆ ಸಿಎಂ ಭೇಟಿ ಮಾಡಲಿದ್ದೇವೆ ಎಂದರು.
ಕಾಂಗ್ರೆಸ್ಸಿನಿಂದ ಬಂದವರಿಗೆ ಸಚಿವ ಸ್ಥಾನ ಕೊಟ್ಟಿದ್ದರ ಬಗ್ಗೆ ಅಸಮಾಧಾನ ಇಲ್ಲ. ಅವರಿಂದಲೇ ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಹಾಗಾಗಿ ಅವರಿಗೆ ಮೊದಲ ಆದ್ಯತೆ ಸಿಗಬೇಕು. ಕೋವಿಡ್ ಸಂದರ್ಭದಲ್ಲಿ ಮುಖ್ಯ ಮಂತ್ರಿ ಯಡಿಯೂರಪ್ಪ ವಯಸ್ಸಿಗೆ ಮೀರಿ ಕೆಲಸ ಮಾಡಿದ್ದಾರೆ. ಅವರ ಕೆಲಸದ ಬಗ್ಗೆ ತೃಪ್ತಿ ಇದೆ. ಆದರೆ ಕೆಲ ಸಚಿವರು ಅಭಿವೃದ್ಧಿ ಬಗ್ಗೆ ಗಮನ ಹರಿಸುತ್ತಿಲ್ಲ. ಈ ನಿಟ್ಟಿನಲ್ಲಿ ಬದಲಾವಣೆ ಮಾಡುವುದು ಸೂಕ್ತ.
ಜಿ.ಎಚ್. ತಿಪ್ಪಾರೆಡ್ಡಿ,
ಶಾಸಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ