ಆಹಾರ ಕಿಟ್ ಪಡೆಯಲು ನೂಕುನುಗ್ಗಲು
Team Udayavani, Apr 23, 2020, 2:35 PM IST
ಚಿತ್ರದುರ್ಗ: ಆಹಾರ ಕಿಟ್ಗಾಗಿ ಗೊಲ್ಲರ ಹಾಸ್ಟೆಲ್ ಬಳಿ ಸಾವಿರಾರು ಜನ ಜಮಾಯಿಸಿದ್ದರು.
ಚಿತ್ರದುರ್ಗ: ನಗರದ ರಂಗಯ್ಯನಬಾಗಿಲು ಬಳಿ ಇರುವ ಜಿಲ್ಲಾ ಯಾದವ ಗೊಲ್ಲರ ಸಂಘದಲ್ಲಿ ಬುಧವಾರ ಆಹಾರ ಕಿಟ್ ಪಡೆಯಲು ಸಾಮಾಜಿಕ ಅಂತರ ಮರೆತು ಸಾವಿರಾರು ಜನ ಜಮಾಯಿಸಿದ ಘಟನೆ ನಡೆಯಿತು.
ಏಕಾಏಕಿ ಉಂಟಾದ ನೂಕುನುಗ್ಗಲು ಪರಿಸ್ಥಿತಿ ನಿಭಾಯಿಸಲು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಸಹಿತ ಗೊಲ್ಲರ ಸಂಘದ ಪದಾಧಿಕಾರಿಗಳು, ಪೊಲೀಸರು ಹಾಗೂ ಗೃಹ ರಕ್ಷಕ ಸಿಬ್ಬಂದಿ ಹರಸಾಹಸ ಮಾಡಿದರು. ಕೋವಿಡ್ ಲಾಕ್ ಡೌನ್ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಬಡವರು, ಅಲೆಮಾರಿ, ಅರೆ ಅಲೆಮಾರಿಗಳಿಗೆ ದಿನಸಿ ಕಿಟ್ಗಳನ್ನು ನೀಡಲು ತೀರ್ಮಾನಿಸಲಾಗಿತ್ತು. ಈ ವಿಷಯ ತಿಳಿದು ಸಾವಿರಾರು ಜನ ಮುಗಿಬಿದ್ದಿದ್ದರಿಂದ ಗೊಂದಲ ಉಂಟಾಯಿತು. ಈ ವೇಳೆ ಎಲ್ಲರಿಗೂ ಟೋಕನ್ ವಿತರಿಸಿ ನಂತರ ಕಿಟ್ ಕೊಡುತ್ತೇವೆ ಎಂದು ತಿಳಿ ಹೇಳಿದ ನಂತರ ಜನದಟ್ಟಣೆ ಕಡಿಮೆಯಾಯಿತು.
ಜಿಲ್ಲಾ ಗೊಲ್ಲರ ಸಂಘದ ಅಧ್ಯಕ್ಷ ಮೀಸೆ ಮಹಲಿಂಗಪ್ಪ, ಕಾರ್ಯದರ್ಶಿ ಆನಂದಪ್ಪ, ಟಿ. ರಂಗಸ್ವಾಮಿ, ಕಿರಣ್ಕುಮಾರ್ ಯಾದವ್, ಫಲ್ಗುಣೇಶ್ವರ್, ಡಿ.ಸಿ. ಗೋವಿಂದಪ್ಪ, ಎನ್. ಮಹಾಂತೇಶ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
MUST WATCH
ಹೊಸ ಸೇರ್ಪಡೆ
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?