ಸಹಾಯವಾಣಿ ಕೇಂದ್ರಕ್ಕೆ ಕರೆಗಳ ಮಹಾಪೂರ
400ಕ್ಕೂ ಅಧಿಕ ಕರೆ ದಾಖಲುತುರ್ತು ಅಗತ್ಯವಿದ್ದಲ್ಲಿ ಸಂಪರ್ಕಿಸಿ ಸಹಾಯ ಪಡೆಯಿರಿ
Team Udayavani, Apr 25, 2020, 11:34 AM IST
ಚಿತ್ರದುರ್ಗ: ಡಿಸಿ ಕಚೇರಿ ಸಭಾಂಗಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯವಾಣಿ ಕೇಂದ್ರ.
ಚಿತ್ರದುರ್ಗ: ಕೊರೊನಾ ಲಾಕ್ಡೌನ್ನಿಂದ ಯಾರೂ ಸಂಕಷ್ಟಕ್ಕೆ ಸಿಲುಕಬಾರದು ಎಂಬ ಕಾರಣಕ್ಕೆ ಜಿಲ್ಲಾಡಳಿತ ತೆರೆದಿರುವ ಸಹಾಯವಾಣಿ ಕೇಂದ್ರಕ್ಕೆ ಇದುವರೆಗೆ 400ಕ್ಕೂ ಅಧಿಕ ಕರೆಗಳು ಬಂದಿವೆ. ಮಾ. 28 ರಂದು ಕಂಟ್ರೋಲ್ ರೂಂ ಆರಂಭಿಸಲಾಗಿದೆ. ಮೊದಲೆಲ್ಲ ವಿಪರೀತ ಕರೆಗಳು ಬರುತ್ತಿದ್ದವು. ಆದರೆ ಸರ್ಕಾರ ಎರಡು ತಿಂಗಳಿಗೆ ಸಾಕಾಗುವಷ್ಟು ಪಡಿತರವನ್ನು ಒಮ್ಮೆಲೆ ವಿತರಿಸುವ ತೀರ್ಮಾನ ತೆಗೆದುಕೊಂಡು ಅದರಂತೆ ಎಲ್ಲರಿಗೂ ಪಡಿತರ ವಿತರಣೆ ಮಾಡಿದ ನಂತರ ಈ ಕರೆಗಳ ಸಂಖ್ಯೆ ಕಡಿಮೆಯಾಗಿವೆ ಎನ್ನುವುದು ವಿಶೇಷ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದಿನದ 24 ಗಂಟೆಯೂ ಸಹಾಯವಾಣಿ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು, ಜಿಪಂ ಉಪ ಕಾರ್ಯದರ್ಶಿ ಡಾ| ರಂಗಸ್ವಾಮಿ ಇದರ ನೋಡಲ್ ಅಧಿಕಾರಿಯಾಗಿದ್ದಾರೆ. ಸಹಾಯವಾಣಿ ಕೇಂದ್ರದಲ್ಲಿ ತಲಾ 8 ಗಂಟೆಯಂತೆ ಮೂರು ಶಿಫ್ಟ್ ನಲ್ಲಿ 12 ಜನ ಕೆಲಸ ಮಾಡುತ್ತಿದ್ದಾರೆ. ಸಹಾಯವಾಣಿ ಕೇಂದ್ರದಲ್ಲಿ ಒಟ್ಟು 6 ಪ್ರತ್ಯೇಕ ಸ್ಥಿರ ದೂರವಾಣಿಗಳನ್ನು ಸ್ಥಾಪಿಸಿದ್ದು, ಇಲ್ಲಿಗೆ ಬರುವ ಎಲ್ಲಾ ಕರೆಗಳನ್ನು ಸ್ವೀಕರಿಸಿ ದಾಖಲಿಸಿ ಸ್ಪಂದಿಸುವ ಕೆಲಸ ಮಾಡುತ್ತಿದ್ದಾರೆ. ಇದುವರೆಗೆ ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆ 200, ಆರೋಗ್ಯ ಇಲಾಖೆ-65, ಆಹಾರ ಇಲಾಖೆ-86 ಕರೆ ಬಂದಿರುವುದು ದಾಖಲಾಗಿದೆ. ಗ್ರಾಮೀಣಾಭಿವೃದ್ಧಿ, ಪೊಲೀಸ್, ಕೃಷಿ, ತೋಟಗಾರಿಕೆ, ನಗರ ಸ್ಥಳೀಯ ಸಂಸ್ಥೆಗಳು, ಪಶುಸಂಗೋಪನೆ, ಸಮಾಜಕಲ್ಯಾಣ, ತೂಕ ಮತ್ತು ಅಳತೆ ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಗಳಿಗೆ ಸಂಬಂಧಿಸಿದ ಕರೆಗಳು ಬಂದಿವೆ. ತುರ್ತು ವೈದ್ಯಕೀಯ ಸೇವೆ, ಶವಸಂಸ್ಕಾರ, ಮದುವೆ ಕಾರಣಗಳಿಗಾಗಿ ಹೊರ ಜಿಲ್ಲೆ, ರಾಜ್ಯಗಳಿಗೆ ತೆರಳಲು ಪಾಸ್ ಬಯಸಿ ಫೋನ್ ಮಾಡುತ್ತಾರೆ. ಈಗ ಇ-ಪಾಸ್ ವ್ಯವಸ್ಥೆ ಜಾರಿಯಾಗಿರುವುದರಿಂದ ಇದರ ಸಂಖ್ಯೆಯೂ ಕಡಿಮೆಯಾಗಬಹುದು ಎನ್ನಲಾಗಿದೆ.
ಅಗತ್ಯವಿದ್ದಲ್ಲಿ, ಸಮಸ್ಯೆಗಳಿದ್ದಲ್ಲಿ ಜಿಲ್ಲಾಡಳಿತ ಸ್ಥಾಪಿಸಿರುವ ಸಹಾಯವಾಣಿ ಕೇಂದ್ರಕ್ಕೆ ಜಿಲ್ಲೆಯ ನಾಗರೀಕರು ಕರೆ ಮಾಡಬಹುದು. ಸಹಾಯವಾಣಿ ಸಂಖ್ಯೆಗಳು: 08194-222050, 222044, 222027, 222038, 222056, 222035
ಲಾಕ್ಡೌನ್ನಿಂದ ಕೂಲಿಕಾರರು, ಹಮಾಲರು, ಸರಕು ಸಾಗಾಣಿಕೆ ವಾಹನಗಳ ಕೊರತೆಯ ನಡುವೆಯೂ ಜಿಲ್ಲೆಯ ಬಡವರಿಗಾಗಿ ನೀಡುತ್ತಿರುವ 2
ತಿಂಗಳ ಉಚಿತ ಪಡಿತರವನ್ನು ಶೇ. 94 ರಷ್ಟು ಪೂರ್ಣಗೊಳಿಸಲಾಗಿದೆ. ಆಹಾರ ಇಲಾಖೆ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ.
ಮಧುಸೂದನ್,
ಆಹಾರ ಮತ್ತು ನಾಗರಿಕ ಸರಬರಾಜು
ಇಲಾಖೆ ಉಪನಿರ್ದೇಶಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ