ಸರ್ವ ಸಮಸ್ಯೆಗಳಿಗೆ ಹಿತೈಶಿ ಸಹಕಾರಿ

ನಿಮ್ಮ ಮನೆಗೆ ನೀರು ಬರುತ್ತಿಲ್ಲವೇ? ಬೀದಿದೀಪ ಬೆಳಗುತ್ತಿಲ್ಲವೇ?14 ಬಗೆಯ ಸಮಸ್ಯೆಗಳಿಗೆ ನೀಡಬಹುದು ದೂರು

Team Udayavani, Feb 15, 2020, 5:27 PM IST

15-February-25

ಚಿತ್ರದುರ್ಗ: ಬೀದಿ ದೀಪ ಆರಿಸಿಲ್ಲವೇ? ಬೀದಿ ದೀಪ ಬೆಳಗುತ್ತಿಲ್ಲವೆ? ಮನೆಗೆ ನೀರು ಬರುತ್ತಿಲ್ಲವೆ? ಚರಂಡಿ ಸ್ವಚ್ಛವಾಗಿಲ್ಲವೇ? ಕಸದ ವಾಹನ ಬರುತ್ತಿಲ್ಲವೇ? ಚಿಂತೆ ಬಿಡಿ. ನಿಮ್ಮ ಸಮಸ್ಯೆಗೆ ಬೆರಳ ತುದಿಯಲ್ಲೇ ಪರಿಹಾರ ಇದೆ. ನಿಮ್ಮ ಎಲ್ಲಾ ಸಾರ್ವಜನಿಕ ಸಮಸ್ಯೆಗಳನ್ನು ಬಗೆಹರಿಸಲು ನಿಮ್ಮ ಮೊಬೈಲ್‌ ಫೋನಿನೊಳಗೊಬ್ಬ “ಹಿತೈಷಿ’ ಇದ್ದರೆ ಸಾಕು. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧಿಕಾರಿಗಳು ಥಟ್‌ ಅಂತಾ ಬಂದು ಕೆಲಸ ಮಾಡಿಕೊಟ್ಟು ಹೋಗುತ್ತಾರೆ. ಹೌದು. ಚಿತ್ರದುರ್ಗ ಜಿಲ್ಲಾಡಳಿತ ಇಂಥದೊಂದು ಪ್ರಯೋಗಕ್ಕೆ ಮುಂದಾಗಿದ್ದು, ಜಿಲ್ಲೆಯ ನಗರ, ಪಟ್ಟಣ ವ್ಯಾಪ್ತಿಯಲ್ಲಿ ಕಸ, ಚರಂಡಿ ಸ್ವಚ್ಛತೆ, ಬೀದಿ ದೀಪ ಮತ್ತಿತರ ಸಮಸ್ಯೆಗಳಿಗೆ ಸ್ಪಂದಿಸಿ, ತ್ವರಿತವಾಗಿ ಪರಿಹಾರ ಕಲ್ಪಿಸಲು “ಹಿತೈಶಿ’ ಮೊಬೈಲ್‌ ಆ್ಯಪ್‌ ಅಭಿವೃದ್ಧಿ ಪಡಿಸಿದೆ.

ಗೂಗಲ್‌ ಪ್ಲೇ ಸ್ಟೋರ್‌ನಲ್ಲಿ ಹಿತೈಷಿ ಆ್ಯಪ್‌ ಲಭ್ಯವಿದ್ದು ಅಲ್ಲಿಂದ ಡೌನ್‌ಲೋಡ್‌ ಮಾಡಿಕೊಳ್ಳಬಹುದು. ಅಥವಾ ಸ್ನೇಹಿತರ ಬಳಿ ಇದ್ದರೆ ಶೇರ್‌ ಮಾಡಿಕೊಳ್ಳಬಹುದು. ಈ ಆ್ಯಪ್‌ ಜಿಲ್ಲೆಯ ಎಲ್ಲ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನಾಗರಿಕರಿಗಾಗಿಯೇ ಅಭಿವೃದ್ಧಿ ಪಡಿಸಲಾಗಿದ್ದು, ಸಮಸ್ಯೆ ಇದ್ದಲ್ಲಿ ಆ್ಯಪ್‌ ಮೂಲಕ ಫೋಟೋ ಸಹಿತ ದೂರು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಕಳೆದ ಲೋಕಸಭಾ ಚುನಾವಣೆ ವೇಳೆ ಚುನಾವಣಾ ಆಯೋಗ ಅಕ್ರಮ ತಡೆಯಲು “ಸಿ ವಿಜಿಲ್‌’ ಮೊಬೈಲ್‌ ಆ್ಯಪ್‌ ಅಭಿವೃದ್ಧಿ ಪಡಿಸಿತ್ತು. ಅದೇ ಮಾದರಿಯಲ್ಲಿ ಈಗ “ಹಿತೈಶಿ’ ಆ್ಯಪ್‌ ತಯಾರಾಗಿದೆ. ಚಿತ್ರದುರ್ಗ, ಹಿರಿಯೂರು, ಚಳ್ಳಕೆರೆ ನಗರಸಭೆಗಳು, ಹೊಸದುರ್ಗ ಪುರಸಭೆ, ಹೊಳಲ್ಕೆರೆ, ಮೊಳಕಾಲ್ಮೂರು, ನಾಯಕನಹಟ್ಟಿ ಪಪಂ ವ್ಯಾಪ್ತಿಯ ಸಾರ್ವಜನಿಕರು “ಹಿತೈಶಿ’ ಆ್ಯಪ್‌ ಅನ್ನು ಗೂಗಲ್‌ ಪ್ಲೇಸ್ಟೋರ್‌ ಮೂಲಕ ಡೌನ್‌ಲೋಡ್‌ ಮಾಡಿಕೊಂಡು, ತಮ್ಮ ವಾರ್ಡ್‌ ವ್ಯಾಪ್ತಿಯ ಸಮಸ್ಯೆಗಳ ಕುರಿತು ಫೋಟೋ ಸಹಿತ ದೂರು ದಾಖಲಿಸಬಹುದು.

ಆ್ಯಪ್‌ನ ವಿಶೇಷ ಏನು?: ಕನ್ನಡ ಭಾಷೆಯಲ್ಲಿಯೂ ದೂರು, ಮಾಹಿತಿ ಸಲ್ಲಿಸಬಹುದು. ವಾರ್ಡ್‌ನಲ್ಲಿನ ಗುಂಡಿ ಮುಚ್ಚುವುದು, ಚರಂಡಿಗಳ ಹೂಳು ತೆಗೆಯುವುದು, ಬೀದಿದೀಪ, ನೀರಿನ ಪೈಪ್‌ ಲೈನ್‌ ಸೋರಿಕೆ, ನೀರು ಸರಬರಾಜಿನ ಸಮಸ್ಯೆ, ಕಸ ತೆಗೆಯುವುದು, ರಸ್ತೆ, ಚರಂಡಿ ಸ್ವತ್ಛಗೊಳಿಸುವುದು, ಬೀದಿ ನಾಯಿ, ಕೋತಿ, ಹಂದಿ ಹಾವಳಿ, ರಸ್ತೆ ಸಣ್ಣಪುಟ್ಟ ದುರಸ್ತಿ, ಪ್ರಾಣಿಗಳ ಮೃತದೇಹ ವಿಲೇವಾರಿ ಸೇರಿದಂತೆ 14 ಬಗೆಯ ಸಮಸ್ಯೆಗಳ ಕುರಿತು ದೂರು ನೀಡಬಹುದು.

ದೂರು ನೀಡುವ ವಿಧಾನ ಹೀಗಿದೆ: ಮೊಬೈಲ್‌ ಗ್ಯಾಲರಿಯಲ್ಲಿರುವ ಫೋಟೊಗಳನ್ನು ಆ್ಯಪ್‌ ತೆಗೆದುಕೊಳ್ಳುವುದಿಲ್ಲ. ಎಲ್ಲಿಯದೋ ಫೋಟೋ ತಂದು ಮತ್ತಿನ್ನೆಲ್ಲೋ ಸಮಸ್ಯೆ ಇದೆ ಎಂಬಂತೆ ಸುಳ್ಳು ದೂರು ದಾಖಲಿಸುವ ಸಾಧ್ಯತೆ ಇರುತ್ತದೆ ಎಂಬ ಕಾರಣಕ್ಕೆ ಜಿಪಿಎಸ್‌ ಮೂಲಕ ಸ್ಥಳದಲ್ಲೇ ಫೋಟೋ ತೆಗೆದು ಅಪ್ಲೋಡ್‌ ಮಾಡಲು ಆ್ಯಪ್‌ನಲ್ಲಿ ವಿನ್ಯಾಸ ಮಾಡಲಾಗಿದೆ. ಆ್ಯಪ್‌ನಲ್ಲಿ ಸಲ್ಲಿಕೆಯಾಗುವ ಪ್ರತಿ ದೂರಿಗೂ ಒಂದು ಸಂಖ್ಯೆ ನೀಡಲಾಗುತ್ತದೆ. ಆ್ಯಪ್‌ನಲ್ಲಿ ದೂರಿನ ಸ್ಥಿತಿಗತಿ ಪರಿಶೀಲಿಸಬಹುದು.

ಹಿತೈಶಿ ಆ್ಯಪ್‌ ಮೂಲಕ ವಿನೂತನ ಪ್ರಯೋಗಕ್ಕೆ ಮುಂದಾಗಿದ್ದು, ಜಿಲ್ಲೆಯ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಆ್ಯಪ್‌ ಮೂಲಕ ಈವರೆಗೆ 87 ದೂರು ದಾಖಲಾಗಿ, ಸಮಸ್ಯೆ ಇತ್ಯರ್ಥಪಡಿಸಲಾಗಿದೆ. ಹೆಚ್ಚು ಜನರು ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ಸಮಸ್ಯೆ ಪರಿಹರಿಸಿಕೊಳ್ಳಬೇಕು.
ಆರ್‌.ವಿನೋತ್‌ ಪ್ರಿಯಾ,
ಜಿಲ್ಲಾಧಿಕಾರಿ.

ಹಿತೈಶಿ ಆ್ಯಪ್‌ನಲ್ಲಿ ದೂರು ದಾಖಲಾದ 24 ಗಂಟೆಯೊಳಗೆ ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಯ ನಿರ್ವಹಣಾ ಸಿಬ್ಬಂದಿ ದೂರಿಗೆ ಸ್ಪಂದಿಸಬೇಕು. ಇಲ್ಲದಿದ್ದಲ್ಲಿ ಆ ದೂರು ಆ ಸಂಸ್ಥೆಯ ಮುಖ್ಯಾಧಿಕಾರಿಗೆ ರವಾನೆಯಾಗುತ್ತದೆ. ಅಲ್ಲಿಯೂ 24 ಗಂಟೆಯೊಳಗೆ ಪರಿಹಾರ ಸಿಗದಿದ್ದರೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಿಗೆ ದೂರು ರವಾನೆಯಾಗುವಂತೆ ವ್ಯವಸ್ಥೆ ಮಾಡಲಾಗಿದೆ.
ರವಿಶಂಕರ್‌,
ಆ್ಯಪ್‌ ಸಿದ್ಧಪಡಿಸಿದ ಎನ್‌ಐಸಿ ಅಧಿಕಾರಿ

„ತಿಪ್ಪೇಸ್ವಾಮಿ ನಾಕೀಕೆರೆ

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.