15ದಿನದಲ್ಲೇ ಎರಡನೇ ಬಾರಿಗೆ ಸೋಂಕು ದೃಢ

ಚಿತ್ರದುರ್ಗದ ಮೂವರು ವೃದ್ಧರನ್ನು ಕಾಡಿದ ಕೋವಿಡ್ ಗುಜರಾತಿನಲ್ಲೂ ಚಿಕಿತ್ಸೆ ಪಡೆದಿದ್ದರು

Team Udayavani, May 9, 2020, 10:51 AM IST

09-May-02

ಚಿತ್ರದುರ್ಗ : “ಹಸಿರು ವಲಯ’ದಲ್ಲಿದ್ದ ಕೋಟೆನಾಡು ಚಿತ್ರದುರ್ಗ ಜಿಲ್ಲೆಗೆ ಕೋವಿಡ್ ಮಹಾಮಾರಿ ಕಾಲಿಟ್ಟಿದೆ. ಕಳೆದ ತಿಂಗಳು ಗುಜರಾತ್‌ನಲ್ಲಿ ಕೋವಿಡ್ ಸೋಂಕಿಗೆ ಚಿಕಿತ್ಸೆ ಪಡೆದು ಗುಣಮುಖರಾಗಿ ಮರಳಿದ್ದ ಮೂವರಲ್ಲಿ ಹದಿನೈದು ದಿನಗಳ ಅಂತರದಲ್ಲೇ ಮತ್ತೆ ಸೋಂಕು ದೃಢಪಟ್ಟಿದೆ.

ಗುಜರಾತ್‌ನ ಅಹಮದಾಬಾದ್‌ನಿಂದ ಮೇ 5ರಂದು ನಗರಕ್ಕೆ ಆಗಮಿಸಿದ್ದ 15 ಜನ ತಬ್ಲೀಘಿ ಸದಸ್ಯರಲ್ಲಿ ಮೂವರಿಗೆ ಕೋವಿಡ್‌-19 ಪಾಸಿಟಿವ್‌ ಬಂದಿದೆ. ಏಪ್ರಿಲ್‌ನಲ್ಲಿ ಈ ಮೂವರು ಸೋಂಕು ದೃಢಪಟ್ಟು ಗುಜರಾತಿನಲ್ಲಿ ಹದಿನಾಲ್ಕು ದಿನ ಚಿಕಿತ್ಸೆ ಪಡೆದಿದ್ದು, ಬಳಿಕ ವರದಿ ನೆಗೆಟಿವ್‌ ಬಂದಿತ್ತು. ಈಗ ಮತ್ತೂಮ್ಮೆ ಸೋಂಕು ತಗುಲಿದೆ ಎಂದು ಜಿಲ್ಲಾಧಿ ಕಾರಿ ವಿನೋತ್‌ ಪ್ರಿಯಾ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ಮೂವರು ಪಿ-751, ಪಿ-752 ಹಾಗೂ ಪಿ-753 ಚಿತ್ರದುರ್ಗ ನಗರದವರೇ ಆಗಿದ್ದು, ಎಲ್ಲರೂ 64 ವರ್ಷದವರಾಗಿದ್ದಾರೆ. ಸೋಂಕಿತರನ್ನು ಇಲ್ಲಿನ ಕೋವಿಡ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಹಮದಾಬಾದ್‌ನ ಜಿನಾತ್‌ಪುರ ತರ್ಕೇಜ್‌ ಮಸೀದಿಯಲ್ಲಿ ಮಾ. 8ರಂದು ನಡೆದ ಸಮಾವೇಶದಲ್ಲಿ ಭಾಗವಹಿಸಲು ಚಿತ್ರದುರ್ಗದಿಂದ ತೆರಳಿದ್ದರು. ಈ ವೇಳೆ ಲಾಕ್‌ಡೌನ್‌ ಘೋಷಣೆಯಾದ್ದರಿಂದ ಅಲ್ಲಿಯೇ ಸಿಲುಕಿದ್ದರು ಎಂದರು.

ಅಹಮದಾಬಾದ್‌ನಿಂದ ಚಿತ್ರದುರ್ಗಕ್ಕೆ 33 ಜನ ಆಗಮಿಸಿದ್ದರು. ಈ ಪೈಕಿ 18 ಮಂದಿ ತುಮಕೂರು ಜಿಲ್ಲೆಯವರಾಗಿದ್ದು, ಅದೇ ದಿನ ಅಲ್ಲಿಗೆ ತೆರಳಿದ್ದರು. ಉಳಿದ 15 ಜನ ಚಿತ್ರದುರ್ಗ ನಗರದವರಾಗಿದ್ದು, ಹಾಸ್ಟೆಲ್‌ನಲ್ಲಿ ಕ್ವಾರಂಟೈನ್‌ ಮಾಡಲಾಗಿತ್ತು. ಮೇ 6 ರಂದು ನಡೆಸಿದ ಕೋವಿಡ್‌ ಪರೀಕ್ಷೆಯಲ್ಲಿ ಮೂವರಿಗೆ ಪಾಸಿಟಿವ್‌ ಬಂದಿದ್ದು, ಉಳಿದ 12 ಜನರಿಗೆ ನೆಗೆಟಿವ್‌ ಬಂದಿದೆ. ಮೇ 4 ರಂದು ಗುಜರಾತಿನಿಂದ ಹೊರಟಿದ್ದ ಸೋಂಕಿತರು ಸೂರತ್‌, ನಾಸಿಕ್‌, ವಿಜಯಪುರ, ಹೊಸಪೇಟೆ ಮಾರ್ಗವಾಗಿ ಚಿತ್ರದುರ್ಗ ಜಿಲ್ಲೆಗೆ ಪ್ರವೇಶಿಸಿದ್ದರು. ಈ ವೇಳೆ ತಡೆದು ತಪಾಸಣೆ ಮಾಡಲಾಗಿತ್ತು ಎಂದರು.

20 ಅಧಿಕಾರಿಗಳಿಗೆ ಕ್ವಾರಂಟೈನ್‌: ತಬ್ಲೀಘಿ ಸದಸ್ಯರು ಗುಜರಾತಿನಿಂದ ಆಗಮಿಸಿದ ದಿನ ಬೊಗಳೇರಹಟ್ಟಿ ಚೆಕ್‌ಪೋಸ್ಟ್‌ಗೆ ತೆರಳಿದ್ದ ಜಿಲ್ಲೆಯ ಅ ಧಿಕಾರಿಗಳ ತಂಡ ಪರಿಶೀಲಿಸಿ ತಪಾಸಣೆಗೊಳಪಡಿಸಿತ್ತು. ಈ ವೇಳೆ ಅಲ್ಲಿ ಹಾಜರಿದ್ದವರನ್ನು ಸೋಂಕಿತರ ಪ್ರಥಮ ಸಂಪರ್ಕಿತರು ಎಂದು ಪರಿಗಣಿಸಿ ಕ್ವಾರಂಟೈನ್‌ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಇದರಲ್ಲಿ ಡಿಎಚ್‌ಒ, ಉಪವಿಭಾಗಾಧಿಕಾರಿ, ತಹಶೀಲ್ದಾರ್‌ ಸೇರಿದಂತೆ ಹಲವು ಅಧಿಕಾರಿಗಳಿದ್ದಾರೆ. ಈ ನಡುವೆ ಜಿಲ್ಲೆಗೆ ಆಗಮಿಸಿದವರಲ್ಲಿ ಈ ಹಿಂದೆಯೇ ನಾಲ್ಕು ಜನರಿಗೆ ಏ. 5ರಂದು ಗುಜರಾತಿನಲ್ಲಿ ಪರೀಕ್ಷೆ ನಡೆಸಿದ್ದಾಗ ಕೊರೊನಾ ಪಾಸಿಟಿವ್‌ ಬಂದಿತ್ತು. ನಂತರ ಚಿಕಿತ್ಸೆ ನೀಡಿ ಏ. 19ರಂದು ನಡೆಸಿದ ಪರೀಕ್ಷೆಯಲ್ಲಿ ನೆಗೆಟಿವ್‌ ಬಂದಿತ್ತು. ಈ ಹಿಂದೆ ಪಾಸಿಟಿವ್‌ ಬಂದಿದ್ದವರ ಪೈಕಿಯೇ ಮೂವರಿಗೆ ಈಗ ಮತ್ತೆ ಪಾಸಿಟಿವ್‌ ವರದಿ ಬಂದಿದೆ ಎಂದರು.

ಸೋಂಕಿತರ ಪ್ರಾಥಮಿಕ ಸಂಪರ್ಕಿತರ ಹುಡುಕಾಟ
ಗುಜರಾತ್‌ನಿಂದ ಜಿಲ್ಲೆಗೆ ಆಗಮಿಸಿದ ನಂತರ ಇಲ್ಲಿ ಅವರ ಕುಟುಂಬದ ಸದಸ್ಯರನ್ನು ಭೇಟಿಯಾಗಲು ಅವಕಾಶ ನೀಡಿರಲಿಲ್ಲ. ಕೆಲವರ ಕುಟುಂಬದವರು ಊಟ ತಂದು ಕ್ವಾರಂಟೈನ್‌ ಕೇಂದ್ರದ ಬಳಿ ಇಟ್ಟು ಹೋಗುತ್ತಿದ್ದರು. ಅವರನ್ನು ಪತ್ತೆ ಮಾಡಿ ಕ್ವಾರಂಟೈನ್‌ ಮಾಡಲಾಗುವುದು ಎಂದು ಡಿಸಿ ವಿನೋತ್‌ ಪ್ರಿಯಾ ತಿಳಿಸಿದರು.

ಚಿಕಿತ್ಸೆಗೆ ಪಾಳಿ ಪ್ರಕಾರ ವೈದ್ಯರ ನೇಮಕ
ಸೋಂಕಿತರ ಚಿಕಿತ್ಸೆಗಾಗಿ ಪಾಳಿ ಪ್ರಕಾರ ವೈದ್ಯರನ್ನು ನೇಮಿಸಿದ್ದು, ಚಿಕಿತ್ಸೆ ನೀಡಿದ ನಂತರ ಅವರಿಗೆ ಉಳಿಯಲು ಹೋಟೆಲ್‌
ಗಳಲ್ಲಿ ವ್ಯವಸ್ಥೆ ಮಾಡಿದ್ದೇವೆ. 14 ದಿನ ಚಿಕಿತ್ಸೆ ನೀಡಲಾಗುವುದು. 12ನೇ ದಿನ ಮತ್ತೂಮ್ಮೆ ಪರೀಕ್ಷೆ ಮಾಡಿ ನೆಗೆಟಿವ್‌ ವರದಿ ಬಂದರೆ ಮನೆಗೆ ಕಳಿಸುತ್ತೇವೆ ಎಂದು ಡಿಎಚ್‌ಒ ಡಾ| ಪಾಲಾಕ್ಷ ತಿಳಿಸಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.