Chitradurga: ಇಸ್ಪೀಟ್ ಅಡ್ಡೆಗೆ ದಾಳಿ; ನಗರಸಭೆ ಸದಸ್ಯ ಸೇರಿ 14 ಮಂದಿಯ ಬಂಧನ
Team Udayavani, Dec 18, 2023, 2:55 PM IST
ಚಿತ್ರದುರ್ಗ: ನಗರಸಭೆ ಸದಸ್ಯ ಸೇರಿ ಇಸ್ಪೀಟ್ ಆಡುತ್ತಿದ್ದ 14 ಮಂದಿಯನ್ನು ಬಂಧಿಸಿರುವ ಘಟನೆ ಚಿತ್ರದುರ್ಗದ ಹಿರಿಯೂರಿನಲ್ಲಿ ನಡೆದಿದೆ.
ಬಂಧಿತರು ವಿವಿ ಸಾಗರ ಐಬಿಯಲ್ಲಿ ಇಸ್ಪೀಟ್ ಆಡುತ್ತಿದ್ದರು. ಇವರಲ್ಲಿ ನಗರಭೆ ಜಗದೀಶ್ ಸೇರಿ 14 ಇದ್ದರು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಚಿತ್ರದುರ್ಗ ಎಸ್ ಪಿ ಧರ್ಮೇಂದರ್ ಕುಮಾರ್ ಮೀನಾ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣೆ ಸಿಪಿಐ ಕಾಳಿಕೃಷ್ಣ ಅಂಡ್ ಟೀಂ ದಾಳಿ ನಡೆಸಿ ಇಸ್ಪೀಟ್ ಆಟದಲ್ಲಿ ತೊಡಗಿದ್ದವರನ್ನು ಬಂಧಿಸಿದ್ದಾರೆ.
ಬಂಧಿತರಿಂದ 4 ಲಕ್ಷದ 37 ಸಾವಿರ ಹಣ ವಶಕ್ಕೆ ಪಡೆಯಲಾಗಿದೆ. ದಾಳಿ ವೇಳೆ ಮತ್ತಿಬ್ಬರು ನಗರಸಭೆ ಸದಸ್ಯರಾದ ಅನೀಲ್ ಕುಮಾರ್, ಅಜ್ಜಪ್ಪ ಪರಾರಿಯಾಗಿದ್ದಾರೆ.
ಐಬಿ ಮೇಟಿ ನಾಸೀರ್ ಕುಮ್ಮಕ್ಕಿನಿಂದ ಇಸ್ಪೀಟ್ ದಂಧೆ ನಡೆಯುತ್ತಿತ್ತು ಎನ್ನಲಾಗಿದೆ. ಈ ಸಂಬಂಧ ಒಟ್ಟು 3 ನಗರಸಭೆ ಸದಸ್ಯರು ಹಾಗೂ ಐಬಿ ಮೇಟಿ ಸೇರಿ ಹಲವರ ವಿರುದ್ದ ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ.