ತಂತ್ರ ಸಾಹಿತ್ಯವೆಂದರೆ ಅಲಕ್ಷ್ಯವೇಕೆ?

ತಂತ್ರಶಾಸ್ತ್ರದ ಬಗ್ಗೆ ತಪ್ಪುಗ್ರಹಿಕೆ ಇರುವುದು ದುರಂತ: ಡಾ| ಕುಮಾರಸ್ವಾಮಿ

Team Udayavani, Feb 17, 2020, 5:17 PM IST

17-February-30

ಚಿತ್ರದುರ್ಗ: ತಂತ್ರವಿದ್ಯೆ, ತಂತ್ರಶಾಸ್ತ್ರ ಎಂದರೆ ನಮಗೆ ಮಾಯಾ ಮಂತ್ರ, ಮಾಟ ಮಂತ್ರ ಎಂಬ ಕಲ್ಪನೆ ಇದೆ. ಈ ತಂತ್ರ ಸಾಹಿತ್ಯದ ಬಗ್ಗೆ ಅಲಕ್ಷ್ಯವಿದೆ. ಆದರೆ ಅಧ್ಯಯನ ಮಾಡಿದಾಗ ಅನೇಕ ಅರ್ಥಗಳು ತಿಳಿಯುತ್ತವೆ ಎಂದು ಭದ್ರಾವತಿಯ ಕನ್ನಡ ಪ್ರಾಧ್ಯಾಪಕ ಡಾ| ಕೆ.ಎಸ್‌.
ಕುಮಾರಸ್ವಾಮಿ ಹೇಳಿದರು.

ನಗರದ ಐಎಂಎ ಸಭಾಂಗಣದಲ್ಲಿ ಭಾನುವಾರ ಚಿತ್ರದುರ್ಗ ಇತಿಹಾಸ ಕೂಟ ಹಾಗೂ ರೇಣುಕಾ ಪ್ರಕಾಶನದ ಸಹಯೋಗದಲ್ಲಿ ಆಯೋಜಿಸಿದ್ದ 41ನೇ ಉಪನ್ಯಾಸ ಕಾರ್ಯಕ್ರಮದಲ್ಲಿ “ತಂತ್ರ ಸಾಹಿತ್ಯ; ಒಂದು ಸ್ಥೂಲ ಅವಲೋಕನ’ ವಿಷಯದ ಕುರಿತು ಅವರು ಮಾತನಾಡಿದರು.

ಇತಿಹಾಸ ಸಂಶೋಧನೆ ಎಂದರೆ ಸತ್ಯ ಶೋಧನೆ ಮಾಡುವುದು. ಹಾಗಾಗಿ ಸಂಶೋಧನೆ ನಿಖರವಾಗಿರಬೇಕು. ತಂತ್ರ ಸಾಹಿತ್ಯ ಸಂಸ್ಕೃತ, ಹಿಂದಿ ಹಾಗೂ ಇಂಗ್ಲಿಷ್‌ ಭಾಷೆಗೆ ಅನುವಾದವಾಗಿವೆ. ತಂತ್ರಶಾಸ್ತ್ರಕ್ಕೆ ನಾನಾ ವಿಶ್ಲೇಷಣೆ ಇದೆ. ತಂತ್ರ ಅಂದರೆ ಮಗ್ಗದಿಂದ ಆಗ ತಾನೇ ತೆಗೆದ ತಂತ್ರಕ ಎಂದು ಪಾಣಿನಿ ಹೇಳುತ್ತಾರೆ. ಮಗ್ಗ ಎಂದ ತಕ್ಷಣ ಯಂತ್ರ ಎಂಬ ಕಲ್ಪನೆ ಬರುತ್ತದೆ.

ಕೆಲ ವಿದ್ಯಾಂಸರು ತಂತ್ರಸಾಹಿತ್ಯ ಅಥರ್ಣವೇದದಿಂದ ಪ್ರಾರಂಭವಾಗಿದೆ ಎಂದು ಹೇಳಿದರೆ ಬನ್ನಂಜೆ ಗೋವಿಂದಾಚಾರ್ಯರು ಭಾರತದ ಅತ್ಯಂತ ಪುರಾತನ ಶಾಸ್ತ್ರಗಳಲ್ಲಿ ತಂತ್ರಶಾಸ್ತ್ರವೂ ಒಂದು ಎಂದು ಅಭಿಪ್ರಾಯಪಟ್ಟಿದ್ದಾರೆ ಎಂದರು.

ತಂತ್ರ ಸಾಹಿತ್ಯದಲ್ಲಿ ಸಾಕಷ್ಟು ಆಯಾಮಗಳನ್ನು ತಿಳಿದುಕೊಳ್ಳಲು ಸಾಧ್ಯವಿದೆ. ತಂತ್ರ ಅಂದರೆ ಜ್ಞಾನ. ಮಾಟ ಸಂಸ್ಕೃತ ಭಾಷೆಯಿಂದ ಬಂದ ಪದ. ಮಾಟ ಅಂದರೆ ಸೌಂದರ್ಯ, ಸುಂದರವಾದ ಕೆಲಸ ಅಂತ ಕೂಡ ಪ್ರಾಚೀನ ಕಾಲದಲ್ಲಿ ಬಳಸುತ್ತಿದ್ದರು. ತಂತ್ರಶಾಸ್ತ್ರ ಇತಿಹಾಸಕಾರರು ಹಾಗೂ ಜನಸಮಾನ್ಯರಿಗೆ ಅಪರಿಚಿತವಾಗಿದ್ದಾರೆ. ಅದರ ಬಗ್ಗೆ ತಪ್ಪುಗ್ರಹಿಕೆಗಳಿವೆ. ಇದು ಸಮಾಜದ ದುರಂತ. ಇಂದು ತಂತ್ರಶಾಸ್ತ್ರದ ಅಧ್ಯಯನ ಮಾಡುವ ಅವಶ್ಯಕತೆ ಇದೆ ಎಂದರು.

ಅಮರಕೋಶದಲ್ಲಿ ಸಾಂಖ್ಯಾ, ಅರ್ಥಶಾಸ್ತ್ರ, ಯೋಗ ಸೇರಿ ತಂತ್ರಶಾಸ್ತ್ರವಾಗಿದೆ ಎಂದು ಹೇಳಿದೆ. ಪೂರ್ವ ಮೀಮಾಂಸೆಯನ್ನು ಪ್ರಥಮ ತಂತ್ರಶಾಸ್ತ್ರ ಎಂದು ಕರೆಯಲಾಗುತ್ತದೆ. ತಂತ್ರಶಾಸ್ತ್ರ ವಿಜ್ಞಾನಕ್ಕೆ ತುಂಬ ಹತ್ತಿರವಾದದ್ದು. ನಮ್ಮ ಪಾರಂಪರಿಕ ವಿಜ್ಞಾನ ಎಂದು ಕೆಲವರು ಹೇಳುತ್ತಾರೆ. ತಂತ್ರಸಾಹಿತ್ಯ ಇಲ್ಲದಿದ್ದರೆ ಭಾರತ ಸಾಹಿತ್ಯ ಬರಡಾಗುತ್ತಿತ್ತು ಎಂದರು.
ಹಿರಿಯ ಸಂಶೋಧಕ ಪ್ರೊ| ಲಕ್ಷ್ಮಣ ತೆಲಗಾವಿ, ರೇಣುಕಾ ಪ್ರಕಾಶನದ ಎನ್‌.ಡಿ. ಶಿವಣ್ಣ, ಇತಿಹಾಸ ಕೂಟದ ಸಂಚಾಲಕ ಡಾ| ಎನ್‌.ಎಸ್‌. ಮಹಂತೇಶ್‌, ಹಿರಿಯ ಪತ್ರಕರ್ತ ಉಜ್ಜಿನಪ್ಪ, ಗೋಪಾಲಸ್ವಾಮಿ ನಾಯಕ್‌, ಸಾಹಿತಿ ಎಸ್‌.ಆರ್‌. ಗುರುನಾಥ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.