ಲಾಕ್ಡೌನ್; ಕೋಟೆನಾಡು ಸಂಪೂರ್ಣ ಸ್ತಬ್ಧ
ಮನೆಯಲ್ಲುಳಿದು ಜನರ ಸಂಪೂರ್ಣ ಬೆಂಬಲಮಾರುಕಟ್ಟೆ ಬಂದ್-ವಾಹನ ಸಂಚಾರ ಬಂದ್
Team Udayavani, Jul 6, 2020, 3:10 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಿತ್ರದುರ್ಗ: ಕೋವಿಡ್ ವೈರಾಣು ನಿಯಂತ್ರಣ ಮಾಡುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದನ್ವಯ ಕೋಟೆನಾಡು ಚಿತ್ರದುರ್ಗದಲ್ಲಿ ಸಂಡೇ ಲಾಕ್ಡೌನ್ ಪರಿಣಾಮಕಾರಿಯಾಗಿ ಜಾರಿಯಾಗಿತ್ತು.
ವೀಕೆಂಡ್ ಲಾಕ್ಡೌನ್ ಕಾರಣಕ್ಕೆ ಜನ ಸ್ವಯಂ ಪ್ರೇರಣೆಯಿಂದ ರಸ್ತೆಗಿಳಿಯದೆ ಮನೆಯಲ್ಲೇ ಇದ್ದು, ಲಾಕ್ಡೌನ್ಗೆ ಬೆಂಬಲ ನೀಡಿದರು. ಇದರಿಂದ ನಗರ ಸಂಪೂರ್ಣ ಸ್ತಬ್ಧವಾಗಿತ್ತು. ಈ ಹಿಂದಿನ ಲಾಕ್ಡೌನ್ ಸಂದರ್ಭದಲ್ಲಿ ಪೊಲೀಸರು ಮಾಡಿಕೊಂಡಿದ್ದ ಎಲ್ಲ ಚೆಕ್ಪೋಸ್ಟ್ ಗಳು ಮತ್ತೆ ಕಾರ್ಯಾಚರಣೆ ಮಾಡಿದವು. ನಗರದ ಗಾಂಧಿ ವೃತ್ತದಲ್ಲಿ ಬ್ಯಾರಿಕೇಡ್ಗಳನ್ನು ರಸ್ತೆಗೆ ಅಡ್ಡವಿಟ್ಟು ವಾಹನ ಸಂಚಾರಕ್ಕೆ ತಡೆಯೊಡ್ಡಿದ್ದರು. ರಸ್ತೆಗಿಳಿಯುವ ಸಾರ್ವಜನಿಕರು, ವಾಹನ ಸವಾರರಿಗೆ ಪೊಲೀಸರು ಬೈದು, ಬುದ್ಧಿ ಹೇಳಿ ಕಳಿಸಿದ ಘಟನೆಗಳು ನಡೆದವು.
ಬಂದ್ನಿಂದಾಗಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಬಿಕೋ ಎನ್ನುತ್ತಿತ್ತು. ನಗರದ ಪ್ರಮುಖ ರಸ್ತೆಗಳಲ್ಲಿ ಬೆರಳೆಣಿಕೆಯಷ್ಟು ವಾಹನಗಳು ಮಾತ್ರ ಸಂಚಾರ ಮಾಡಿದವು. ತುರ್ತು ಕೆಲಸಗಳಿಗೆ ಬಂದವರನ್ನು ಮಾತ್ರ ಪೊಲೀಸರು ಅಡ್ಡಿಪಡಿಸದೆ ಬಿಡುತ್ತಿದ್ದರು. ಬೈಕುಗಳಲ್ಲಿ ಮೂರು ಜನ ಪ್ರಯಾಣಿಸುತ್ತಿದ್ದವರನ್ನು ಹಿಡಿದು ದಂಡ ಹಾಕುತ್ತಿದ್ದ ದೃಶ್ಯಗಳು ಕಂಡು ಬಂದವು. ಉಳಿದಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ವಿರಳವಾಗಿತ್ತು. ಅಗತ್ಯ ಪರಿಕರಗಳನ್ನು ಹೊತ್ತ ಲಾರಿಗಳು ಹಾಗೂ ತುರ್ತು ಕೆಲಸದ ನಿಮಿತ್ತ ಓಡಾಡುವ ಇತರೆ ವಾಹನಗಳು ಮಾತ್ರ ಹೆದ್ದಾರಿಯಲ್ಲಿ ಓಡಾಡುತ್ತಿದ್ದವು.
ನಿತ್ಯ ಗ್ರಾಮೀಣ ಭಾಗದಿಂದ ತರಕಾರಿ, ಸೊಪ್ಪು ಮತ್ತಿತರೆ ವಸ್ತುಗಳನ್ನು ತಂದು ಮುರುಘರಾಜೇಂದ್ರ ಮೈದಾನದಲ್ಲಿ ಬೆಳಗ್ಗೆ 4 ಗಂಟೆಯಿಂದಲೇ ಮಾರಾಟ ಮಾಡಲಾಗುತ್ತಿತ್ತು. ಆದರೆ, ಲಾಕ್ಡೌನ್ ಹಿನ್ನೆಲೆಯಲ್ಲಿ ಭಾನುವಾರ ಮಾರುಕಟ್ಟೆ ಬಂದ್ ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ