ಸವಿತಾ-ಮಡಿವಾಳ ಸಮಾಜ ಏಳ್ಗೆ ಹೊಂದಲಿ

ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಿಮಹನೀಯರ ಆದರ್ಶ ಪಾಲಿಸಿಭಾವಚಿತ್ರ ಅದ್ಧೂರಿ ಮೆರವಣಿಗೆ

Team Udayavani, Feb 2, 2020, 5:35 PM IST

2-Febraury-29

ಚಿತ್ರದುರ್ಗ: ಹಿಂದುಳಿದಿರುವ ಸವಿತಾ ಹಾಗೂ ಮಡಿವಾಳ ಸಮಾಜಗಳು ಹೋರಾಟ, ಸಂಘಟನೆ ಹಾಗೂ ಶಿಕ್ಷಣದ ಮೂಲಕ ಮುಖ್ಯವಾಹಿನಿಗೆ ಬರಬೇಕು ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹೇಳಿದರು.

ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ತರಾಸು ರಂಗಮಂದಿರದಲ್ಲಿ ಶನಿವಾರ ಆಯೋಜಿಸಿದ್ದ ಮಡಿವಾಳ ಮಾಚಿದೇವ ಹಾಗೂ ಸವಿತಾ ಮಹರ್ಷಿಗಳ ಜಯಂತಿ ಆಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸವಿತಾ ಮತ್ತು ಮಡಿವಾಳ ಎರಡು ಸಮುದಾಯಗಳು ಸಂಘಟಿತರಾಗಿ ರಾಜಕೀಯ ಶಕ್ತಿ ಪಡೆಯಬೇಕು. ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಬೇಕು. ಸರ್ಕಾರ ಹೆಚ್ಚಿನ ಸೌಲಭ್ಯ ಕಲ್ಪಿಸುವ ಮೂಲಕ ತಳ ಸಮುದಾಯಗಳನ್ನು ಆರ್ಥಿಕವಾಗಿ ಮೇಲೆತ್ತುವ ಕೆಲಸವಾಗಬೇಕು ಎಂದು ಹೇಳಿದರು.

ಮನುಕುಲಕ್ಕೆ ಒಳಿತನ್ನು ಬಯಸಿದ ಮಹನೀಯರ ಜಯಂತಿಗಳನ್ನು ಸರ್ಕಾರದಿಂದ ಆಚರಿಸಲಾಗುತ್ತಿದೆ. ಇಂದಿನ ಪೀಳಿಗೆ ಮಹನೀಯರ ತತ್ವಾದರ್ಶ ಮೈಗೂಡಿಸಿಕೊಂಡು ಯಶಸ್ಸಿನತ್ತ ಮುಖ ಮಾಡಬೇಕು ಎಂದು ಸಲಹೆ ನೀಡಿದರು.

ಮಾಜಿ ಮುಖ್ಯಮಂತ್ರಿ ದೇವರಾಜು ಅರಸು ಅವರ ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ಕೊಟ್ಟರು. ಅಂದಿನಿಂದ ಹಿಂದುಳಿದ ವರ್ಗದವರಲ್ಲಿ ರಾಜಕೀಯ ಪ್ರಜ್ಞೆ ಬೆಳೆದಿದೆ. ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ನಿಮಗದಿಂದ ಸಾಲ ಸೌಲಭ್ಯ ನೀಡಲಾಗುತ್ತಿದೆ. ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಿ ಎಂದರು.

ಮಡಿವಾಳ ಮಾಚಿದೇವರ ಕುರಿತು ಇತಿಹಾಸ ಪ್ರಾಧ್ಯಾಪಕ ಡಾ.ಎನ್‌.ಎಸ್‌.ಮಹಂತೇಶ್‌ ಮಾತನಾಡಿ, 12ನೇ ಶತಮಾನದ ಶರಣ ಚಳವಳಿಯಲ್ಲಿ ಮಡಿವಾಳ ಮಾಚಿದೇವ ಅವರದು ವಿಶೇಷ ಹೆಸರು. ವೀರಶೈವ ಸಾಹಿತ್ಯ ಗ್ರಂಥಗಳು ಮಾಚಯ್ಯನವರನ್ನು ಕುರಿತು ಹೆಚ್ಚು ಪ್ರಸ್ತಾಪಿಸಿವೆ. ಎಲ್ಲಿ ಬಸವಣ್ಣನ ಹೆಸರು ಬರುವುದೋ ಅಲ್ಲೆಲ್ಲ ಮಾಚಯ್ಯನೂ ಕಂಡು ಬರುತ್ತಾನೆ ಎಂದರು.

ಮಡಿವಾಳ ಮಾಚಯ್ಯ ಅವರ 550ಕ್ಕೂ ಹೆಚ್ಚು ವಚನಗಳು ದೊರೆತಿವೆ. ಅವರ ವಚನಗಳಲ್ಲಿ ಲಿಂಗ, ಜಂಗಮ, ಕಾಯಕ ದಾಸೋಹ, ಶರಣ-ಶರಣೆಯರ ಬಗೆಗೆ ಉಲ್ಲೇಖಗಳಿವೆ. ನೇರ ನುಡಿಗಳಿಂದ ಕೂಡಿದ ಅವರು ವಚನಗಳಿಂದ ವೇದ, ಆಗಮ, ಪ್ರಾಚೀನ ಮೌಡ್ಯಗಳನ್ನು ಕಟುವಾಗಿ ಟೀಕಿಸಿದ್ದಾರೆ ಎಂದು ತಿಳಿಸಿದರು.

ಸವಿತಾ ಮಹರ್ಷಿ ಕುರಿತು ಪತ್ರಕರ್ತ ತಿಪ್ಪೇಸ್ವಾಮಿ ಸಂಪಿಗೆ ಮಾತನಾಡಿ, ಒಂದೇ ವೇದಿಕೆಯಲ್ಲಿ ತಳ ಸಮುದಾಯದ ಮಡಿವಾಳ ಮಾಚಯ್ಯ ಹಾಗೂ ಸವಿತಾ ಮಹರ್ಷಿ ಜಯಂತಿ ಆಚರಣೆ ಮಾಡುತ್ತಿರುವುದು ಸಂತಸದ ಸಂಗತಿ ಎಂದರು. ನಾಗರಿಕ ಸಮುದಾಯದ ಅಭಿವೃದ್ಧಿಯಲ್ಲಿ ಈ ಎರಡು ಸಮಾಜಗಳ ಕೊಡುಗೆ ಅಪಾರ. ಜನಸಂಖ್ಯೆಯಲ್ಲಿ ಕಡಿಮೆ ಇರುವ ನಮ್ಮ ಸಮುದಾಯಗಳು ಹೆಚ್ಚು ನಿರ್ಲಕ್ಷ್ಯಕ್ಕೆ ತುತ್ತಾಗಿವೆ.

ಶೈಕ್ಷಣಿಕ, ರಾಜಕೀಯವಾಗಿ ಸಮುದಾಯಗಳು ಒಗ್ಗಟ್ಟಾಗಬೇಕು. ಮೀಸಲಾತಿ, ನಿವೇಶನ, ವಸತಿ ಸೇರಿದಂತೆ ಇತರೆ ಮೂಲ ಸೌಲಭ್ಯಗಳಿಂದ, ಸರ್ಕಾರದ ಯೋಜನೆಗಳಿಂದ ವಂಚಿತರಾಗಿದ್ದು, ಈ ಸಣ್ಣ ಸಮುದಾಯಗಳಿಗೆ ಸರ್ಕಾರ ವಿಶೇಷ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಮುಂದಾಗಬೇಕಿದ ಎಂದರು.

ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಹಾಗೂ ನಗರಸಭೆ ಸದಸ್ಯ ಎನ್‌.ಚಂದ್ರಶೇಖರ್‌, ನಗರಸಭೆ ಸದಸ್ಯೆ ಅನಿತಾ, ಮಡಿವಾಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಟಿ.ರಮೇಶ್‌, ಎನ್‌.ಡಿ.ಕುಮಾರ್‌, ಟಿ.ಚಿದಾನಂದಪ್ಪ, ತಿಪ್ಪೇಸ್ವಾಮಿ, ಗೋಪಿಕೃಷ್ಣ, ಪ್ರಶಾಂತ್‌, ಎನ್‌.ಶ್ರೀನಿವಾಸ್‌, ಸಾಯಿನಾಥ್‌, ಅಪರ ಜಿಲ್ಲಾ ಧಿಕಾರಿ ಸಂಗಪ್ಪ, ನಗರಸಭೆ ಪೌರಾಯುಕ್ತ ಜಿ.ಟಿ.ಹನುಮಂತರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನಿಜಲಿಂಗಪ್ಪ ಉಪಸ್ಥಿತರಿದ್ದರು.

ಅದ್ಧೂರಿ ಮೆರವಣಿಗೆ: ನಗರದ ಮಡಿವಾಳ ಮಾಚಿದೇವರ ದೇವಸ್ಥಾನದ ಆವರಣದಲ್ಲಿ ಅಪರ
ಜಿಲ್ಲಾ ಧಿಕಾರಿ ಸಂಗಪ್ಪ, ತಹಶೀಲ್ದಾರ್‌ ವೆಂಕಟೇಶಯ್ಯ ಮಡಿವಾಳ ಮಾಚಿದೇವ ಹಾಗೂ ಸವಿತಾ ಮಹರ್ಷಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮೆರವಣಿಗೆಗೆ ಚಾಲನೆ ನೀಡಿದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

18

Road mishap: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.