ಹೊಸ ಮದ್ಯದಂಗಡಿಗೆ ಅನುಮತಿ ಬೇಡ
Team Udayavani, Jun 6, 2020, 3:16 PM IST
ಸಾಂದರ್ಭಿಕ ಚಿತ್ರ
ಚಿತ್ರದುರ್ಗ: ಯಾವುದೇ ಒತ್ತಡ ಬಂದರೂ ಚಳ್ಳಕೆರೆ ಕ್ಷೇತ್ರ ವ್ಯಾಪ್ತಿಯಲ್ಲಿ ಹೊಸ ಮದ್ಯದಂಗಡಿ ಅಥವಾ ಬೇರೆಡೆಯಿಂದ ವರ್ಗಾವಣೆ ಮಾಡಬಾರದು ಎಂದು ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಅಧಿಕಾರಿಗಳಿಗೆ ತಾಕೀತು ಮಾಡಿದರು.
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಈವರೆಗೆ ಚಳ್ಳಕೆರೆ ಕ್ಷೇತ್ರಕ್ಕೆ ನಾನು ಒಂದೂ ಮದ್ಯದ ಅಂಗಡಿ ತೆರೆಯಲು ಬಿಟ್ಟಿಲ್ಲ. ಇದನ್ನು ಅಬಕಾರಿ ಅಧಿಕಾರಿಗಳೂ ಮಾಡಬಾರದು. ರಾಜಕೀಯ ಒತ್ತಡಕ್ಕೆ ಮಣಿಯಬಾರದು ಎಂದರು. ಅಬಕಾರಿ ಇಲಾಖೆ ಅಧಿಕಾರಿ ಸಭೆಗೆ ಮಾಹಿತಿ ನೀಡಿ, ಚಳ್ಳಕೆರೆ ತಾಲೂಕು ವ್ಯಾಪ್ತಿಯಲ್ಲಿ ಸದ್ಯ 13 ಎಂಎಸ್ಐಎಲ್ ಮದ್ಯದಂಗಡಿ ಇದ್ದು, ಹೊಸದಾಗಿ ತೆರೆಯಲು ಅವಕಾಶ ನೀಡುವಂತೆ ನಾಲ್ಕು ಅರ್ಜಿಗಳು ಬಂದಿವೆ ಎಂದು ತಿಳಿಸಿದರು.
ಚಳ್ಳಕೆರೆ ಕಸಬ ಹಾಗೂ ಪರಶುರಾಂಪುರ ಹೋಬಳಿ ವ್ಯಾಪ್ತಿಯಲ್ಲಿ ಹೂವು, ಹಣ್ಣು ಹಾಗೂ ತರಕಾರಿ ಬೆಳೆಗಾರರ ಸುಮಾರು 20 ಕೋಟಿಯಷ್ಟು ಬೆಳೆಗಳ ನಷ್ಟ ಆಗಿದೆ. ಅದೇ ರೀತಿ ತುರುವನೂರು ಹೋಬಳಿಯ ವ್ಯಾಪ್ತಿಯಲ್ಲಿ ಎಷ್ಟು ಹೂವು, ಹಣ್ಣು, ತರಕಾರಿ ಬೆಳೆ ನಷ್ಟ ಆಗಿದೆ ಎಂದು ಸಮೀಕ್ಷೆ ಮಾಡಿ ವರದಿ ಸಲ್ಲಿಸಬೇಕು. ಹಾಗೆಯೇ ಈರುಳ್ಳಿ ಬೆಳೆ ನಷ್ಟದ ವರದಿಯನ್ನೂ ಕೊಡಬೇಕು ಎಂದು ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಸುಧಾಕರ್ ಅವರಿಗೆ ಸೂಚಿಸಿದರು. ತಾಪಂ ಅಧ್ಯಕ್ಷ ಡಿ.ಎಂ. ಲಿಂಗರಾಜು, ಉಪಾಧ್ಯಕ್ಷೆ ಶಾಂತಮ್ಮ, ಇಒ ಎಚ್. ಕೃಷ್ಣನಾಯ್ಕ, ಬಿಇಒ ಸಿದ್ದಪ್ಪ, ಟಿಎಚ್ಒ ಡಾ.ಬಿ.ವಿ. ಗಿರೀಶ್, ಸಿಡಿಪಿಒ ಸುಧಾ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ