1.43 ಕೋಟಿ ರೂ. ಉಳಿತಾಯ ಬಜೆಟ್‌


Team Udayavani, Mar 2, 2021, 3:06 PM IST

1.43 ಕೋಟಿ ರೂ. ಉಳಿತಾಯ ಬಜೆಟ್‌

ಚಿತ್ರದುರ್ಗ: ಚಿತ್ರದುರ್ಗ ನಗರಸಭೆಯ 2021-22ನೇ ಸಾಲಿನ ಆಯವ್ಯಯ ಮಂಡನೆಯಾಗಿದ್ದು, 1.43 ಕೋಟಿ ರೂ. ಉಳಿತಾಯ ಬಜೆಟ್‌ ಮಂಡನೆ ಮಾಡಲಾಗಿದೆ.

ಜಿಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಆಯವ್ಯಯ ಸಾಮಾನ್ಯ ಸಭೆಗೆ ನಗರಸಭೆ ಅಧ್ಯಕ್ಷೆ ತಿಪ್ಪಮ್ಮ ಬಜೆಟ್‌ ಪ್ರತಿಯನ್ನು ತಂದರು. ಅವರ ಪರವಾಗಿ ಉಪಾಧ್ಯಕ್ಷೆ ಶ್ವೇತಾ ವೀರೇಶ್‌ ಓದಿ ಮಂಡಿಸಿದರು.

ನಗರಸಭೆಗೆ ಸರ್ಕಾರ ನೀಡುವ ವಿವಿಧ ಅನುದಾನಗಳು ಹಾಗೂ ಆದಾಯದ ಆಧಾರದಲ್ಲಿ ಬಜೆಟ್‌ ತಯಾರಿಸಿದ್ದು, 1,43,018 ರೂ. ಉಳಿತಾಯದಲೆಕ್ಕದಲ್ಲಿ ಆಯವ್ಯಯ ಮಂಡಿಸಲಾಯಿತು.ನಗರದ ವಿವಿಧ ವಾರ್ಡ್‌ಗಳಲ್ಲಿ ನೀರಿನ ಅಗತ್ಯತೆಗೆ ಅನುಗುಣವಾಗಿ ಬೋರ್‌ವೆಲ್‌, ನೀರು ಸರಬರಾಜುಟ್ಯಾಂಕ್‌ ನಿರ್ಮಾಣ ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ಮಾಣಕ್ಕಾಗಿ 5 ಕೋಟಿ ರೂ. ಮೀಸಲಿಡಲಾಗಿದೆ.

2021-22ನೇ ಸಾಲಿನ 15ನೇ ಹಣಕಾಸು ಯೋಜನೆ, ಎಸ್‌ಎಫ್‌ಸಿ ಮುಕ್ತನಿಧಿ ಮತ್ತು ವಿಶೇಷ ಅನುದಾನಗಳಲ್ಲಿ ರಸ್ತೆ ಅಭಿವೃದ್ಧಿ, ಪಾದಾಚಾರಿಗಳಿಗೆ ಪೇವರ್ ಅಳವಡಿಸಲಾಗುವುದು. ನಗರದಲ್ಲಿ ಅರಣ್ಯೀಕರಣ, ಸೋಲಾರ್‌ ದೀಪಗಳ ಅಳವಡಿಕೆ, ನಗರದ ಸೌಂದರ್ಯಕ್ಕಾಗಿ ಹೂವಿನ ಕುಂಡಗಳು, ಫುಡ್‌ ಫೋರ್ಟ್‌ ನಿರ್ಮಾಣ, ರಸ್ತೆ ಬದಿ ಬೆಂಚ್‌ ಹಾಕುವುದು, ಬಡವರಿಗೆ ವಸತಿ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದು ಬಜೆಟ್‌ನಲ್ಲಿ ಉಲ್ಲೇಖೀಸಲಾಗಿದೆ.

ಶೇ.24.10 ಯೋಜನೆಯಡಿ ಪರಿಶಿಷ್ಟ ಜಾತಿ/ ವರ್ಗದವರ ಕಲ್ಯಾಣಾಭಿವೃದ್ಧಿಗಾಗಿ 2.10 ಕೋಟಿ ರೂ., ಶೇ.7.25 ಯೋಜನೆಯಡಿ ಇತರೆ ಕಡು ಬಡವರ ಕಲ್ಯಾಣಕ್ಕಾಗಿ 70 ಲಕ್ಷ ರೂ., ಶೇ.5 ರ ಯೋಜನೆಯಡಿ ವಿಕಲಚೇತನರ ಕಲ್ಯಾಣಕ್ಕೆ 20 ಲಕ್ಷ ರೂ. ಹಾಗೂ ಶೇ. 1ರ ಯೋಜನೆಯಡಿ ಕ್ರೀಡಾ ಚಟುವಟಿಕೆಗಳ ಪ್ರೋತ್ಸಾಹಕ್ಕೆ 2 ಲಕ್ಷ ರೂ. ಮೀಸಲಿಡಲಾಗಿದೆ ಎಂದು ಶ್ವೇತಾ ವೀರೇಶ್‌ ಹೇಳಿದರು.

ನಗರಸಭೆಯ ನಿರೀಕ್ಷಿತ ಆದಾಯ ಪಟ್ಟಿ: ಸ್ವಯಂ ಘೋಷಿತ ಆಸ್ತಿ ತೆರಿಗೆ 12 ಕೋಟಿ ರೂ, ನೀರಿನಕಂದಾಯ 4 ಕೋಟಿ ರೂ, ನೀರಿನ ಸಂಪರ್ಕ ಶುಲ್ಕ 30 ಲಕ್ಷ ರೂ., ವಾಣಿಜ್ಯ ಸಂಕೀರ್ಣಗಳ ಬಾಡಿಗೆ 75 ಲಕ್ಷರೂ., ಉದ್ಯಮ ಪರವಾನಗಿ ಶುಲ್ಕ 35 ಲಕ್ಷ, ಕಟ್ಟಡಪರವಾನಗಿ ಶುಲ್ಕ 25 ಲಕ್ಷ ರೂ, ವಾರ್ಷಿಕ ಹರಾಜುಬಾಬ್ತು 40 ಲಕ್ಷ ರೂ, ಜಾಹೀರಾತು ತೆರಿಗೆ 5 ಲಕ್ಷ ರೂ., ರಸ್ತೆ ಕಟಿಂಗ್‌ ಶುಲ್ಕ 10 ಲಕ್ಷ ರೂ.

ಸರ್ಕಾರದ ಅನುದಾನಗಳ ವಿವರ: ಎಸ್‌ಎಫ್‌ಸಿ ಅನುದಾನ 4 ಕೋಟಿ, ನಲ್ಮ್ 50 ಲಕ್ಷ ರೂ, ಎಸ್‌ಎಫ್‌ಸಿ ವಿಶೇಷ ಅನುದಾನ 4 ಕೋಟಿ, 15ನೇ ಹಣಕಾಸು ಯೋಜನೆ 9 ಕೋಟಿ, ಬರಪರಿಹಾರ ಅನುದಾನ 20ಲಕ್ಷ ರೂ, ಅಮೃತ್‌ ಯೋಜನೆ ಅನುದಾನ 2 ಕೋಟಿ,ಎಸ್‌ಎಫ್‌ಸಿ ವೇತನ ನಿ ಧಿ 8 ಕೋಟಿ, ಎಸ್‌ಎಫ್‌ಸಿ ವಿದ್ಯುತ್‌ ಅನುದಾನ 15 ಕೋಟಿ ರೂ. 2021-22ನೇ ಸಾಲಿನ ಕರಡು ಆಯವ್ಯಯ ಘೋಷಾÌರೆ: ಪ್ರಾರಂಭಿಕಶಿಲ್ಕು 38,21 ಲಕ್ಷ ರೂ, ರಾಜಸ್ವ ಜಮಾ 53.07 ಲಕ್ಷ ರೂ, ಬಂಡವಾಳ ಜಮಾ 15 ಲಕ್ಷಹಾಗೂ ಅಮಾನತು ಜಮಾ 24,74 ಲಕ್ಷ ರೂ ಸೇರಿದಂತೆ 116.18 ಕೋಟಿರೂ.ಗಳಾದರೆ, ರಾಜಸ್ವ ಪಾವತಿ 44,23 ಕೋಟಿ ರೂ, ಬಂಡವಾಳ ಪಾವತಿ 55,89 ಕೋಟಿ ರೂ, ಹಾಗೂ ಆಮಾನತು ಖಾತೆ ಪಾವತಿ 14,62 ಕೋಟಿ ರೂ. ಗಳಾಗಿದೆ. ಒಟ್ಟಾರೆ ಪಾವತಿ 114.74 ಕೋಟಿ ರೂ. ಗಳಾಗಲಿದೆ.

 

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.