ಮುರುಘಾ ಮಠದಿಂದ ಹೊಸ ಮೈಲಿಗಲ್ಲು

ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾದ 9710 ಜನರಿಗೆ ಕೇವಲ 27 ದಿನದಲ್ಲಿ ಆಹಾರ ಸಾಮಗ್ರಿ ವಿತರಣೆ

Team Udayavani, May 4, 2020, 2:38 PM IST

Udayavani Kannada Newspaper

ಚಿತ್ರದುರ್ಗ: ಸರಳ, ಸಾಮೂಹಿಕ ಕಲ್ಯಾಣ ಮಹೋತ್ಸವ, ನಿತ್ಯ ದಾಸೋಹ ಮತ್ತಿತರೆ ಕಾರಣಗಳಿಗೆ ಹೆಸರಾಗಿರುವ ಚಿತ್ರದುರ್ಗದ ಮುರುಘಾ ಮಠ, ಕೊರೊನಾ ಲಾಕ್‌ ಡೌನ್‌ ಸಂದರ್ಭದಲ್ಲಿ ನಿರಂತರವಾಗಿ ಬಡವರಿಗೆ ದವಸ-ಧಾನ್ಯ ವಿತರಣೆ ಮಾಡುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದೆ.

ಲಾಕ್‌ಡೌನ್‌ ಘೋಷಣೆಯಾಗಿ ಜನರು ಸಂಕಷ್ಟಕ್ಕೆ ತುತ್ತಾಗುತ್ತಿದ್ದಾರೆ ಎನ್ನುವುದು ಗೊತ್ತಾಗುತ್ತಿದ್ದಂತೆ ಮಠದ ಅಂಗಳದಲ್ಲಿ ದಿನವೂ ಕನಿಷ್ಠ 200 ರಿಂದ 500 ಜನರವರೆಗೆ ದವಸ-ಧಾನ್ಯ ವಿತರಣೆ ಮಾಡಲು ಆರಂಭಿಸಲಾಯಿತು. ಕೂಲಿ ಕಾರ್ಮಿಕರು, ಆಟೋ ಚಾಲಕರು, ವಿಕಲಚೇತನರು, ಹೋಂ ಗಾರ್ಡ್ಸ್‌, ಪತ್ರಿಕಾ ವಿತರಕರು, ಕೊಳಗೇರಿ ನಿವಾಸಿಗಳು, ವಿವಿಧ ಸಮುದಾಯದ ಬಡವರು ಸೇರಿದಂತೆ ಏಪ್ರಿಲ್‌ 4 ರಿಂದ ಮೇ 3 ರವರೆಗೆ ನಿರಂತರ 27 ದಿನಗಳ ಕಾಲ ಬರೋಬ್ಬರಿ 9710 ಜನರಿಗೆ ಆಹಾರ ಸಾಮಗ್ರಿ ವಿತರಿಸಲಾಗಿದೆ. ಪ್ರತಿ ದಿನ ಬೆಳಿಗ್ಗೆ 11 ಗಂಟೆಗೆ ಡಾ| ಶಿವಮೂರ್ತಿ ಮುರುಘಾ ಶರಣರ ನೇತೃತ್ವದಲ್ಲಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಂಡು ದಿನಸಿ ವಿತರಿಸಲಾಗಿದೆ. ಈ ಮೂಲಕ ಕೊರೊನಾ ಸಂದರ್ಭದಲ್ಲಿ ಹಸಿದವರಿಗೆ ಅನ್ನ ನೀಡಿದ ಮಠ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ದವಸ-ಧಾನ್ಯ ವಿತರಣೆಯ ಕೊನೆಯ ದಿನವಾದ ಭಾನುವಾರ ಡಾ| ಶಿವಮೂರ್ತಿ ಮುರುಘಾ ಶರಣರು ಪೆಟ್ರೋಲ್‌ ಬಂಕ್‌ ಕಾರ್ಮಿಕರು, ಗರ್ಭಿಣಿರು, ಕೊರಿಯರ್‌ ಸಿಬ್ಬಂದಿ, ಸೀಬಾರ, ಗುತ್ತಿನಾಡು ಕಾರ್ಮಿಕರು, ಬಸವ ಬಳಗ, ಕೊಳಗೇರಿ ನಿವಾಸಿಗಳಿಗೆ ಆಹಾರ ಸಾಮಗ್ರಿ ವಿತರಿಸಿದರು.

ನಂತರ ಮಾತನಾಡಿದ ಮುರುಘಾ ಶರಣರು, ಕೊರೊನಾ ಮಹಾಮಾರಿ ಜನರನ್ನು ಅಸಹಾಯಕರನ್ನಾಗಿ ಮಾಡಿದೆ. ಇಂತಹ ಸಂದರ್ಭದಲ್ಲಿ ಮನೆಯೇ ಅತ್ಯಂತ ಸುರಕ್ಷಿತ, ಬೀದಿಗೆ ಬರಬಾರದು ಎನ್ನುವುದು ಅರಿವಾಗಿದೆ. ಮುಂದೆಯೂ ಸಾಮಾಜಿಕ ಅಂತರ ಕಾಪಾಡಿಕೊಂಡಲ್ಲಿ ನಾವು ಆರೋಗ್ಯವಂತರಾಗಿ ಬದುಕಬಹುದು ಎಂದರು. ಲಾಕ್‌ಡೌನ್‌ ಸಂದರ್ಭದಲ್ಲಿ ಬಸವೇಶ್ವರ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಿಂದ ಪೊಲೀಸ್‌ ಇಲಾಖೆಯ ಸಾವಿರಾರು ಸಿಬ್ಬಂದಿಗೆ ಆರೋಗ್ಯ ತಪಾಸಣೆ ಮಾಡಲಾಗಿದೆ. ಜಿಲ್ಲೆಯ ಪೊಲೀಸ್‌ ಇಲಾಖೆಗೆ ಸ್ಯಾನಿಟೈಸರ್‌ ಯಂತ್ರೋಪಕರಣ, ಸಾವಿರಾರು ಮಾಸ್ಕ್ ವಿತರಿಸಲಾಗಿದೆ. ದವಸ-ಧಾನ್ಯ ನೀಡುವ ಸಂದರ್ಭದಲ್ಲಿ ಬೆಳಗಿನ ಉಪಾಹಾರವನ್ನು ನೀಡಲಾಗಿದೆ. ಇಂತಹ ಕಾರ್ಯಗಳು ಮುಂದೊಂದು ದಿನ ಮುರುಘಾಮಠದ ಇತಿಹಾಸದಲ್ಲಿ ದಾಖಲಾಗುತ್ತವೆ ಎಂದು ಹೇಳಿದರು.

ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಮಾತನಾಡಿ, ಮುರುಘಾಮಠದಲ್ಲಿ ದಾಸೋಹದ ಪರಂಪರೆ ಬಹಳ ಹಿಂದಿನಿಂದಲೂ ನಡೆದು ಬಂದಿದೆ. ಹಿಂದಿನ ಜಗದ್ಗುರುಗಳು ನಾಡಿನ ಸಮಸ್ಯೆ, ಜನರ ಕಷ್ಟ ಅರಿತು ಜನರಿಗೆ ಆಸರೆಯಾಗಿದ್ದ ಸಂದರ್ಭಗಳು ನಮ್ಮ ಕಣ್ಮುಂದಿವೆ. ಶ್ರೀ ಜಯದೇವ ಸ್ವಾಮಿಗಳು ಉಳಿಸಿ ಗಳಿಸಿದ್ದಾರೆ. ಜಯವಿಭವ ಸ್ವಾಮಿಗಳು, ಮಲ್ಲಿಕಾರ್ಜುನ ಸ್ವಾಮಿಗಳು ಶ್ರೀಮಠವನ್ನು ಚೆನ್ನಾಗಿ ಬೆಳೆಸಿದ್ದಾರೆ. ಈಗಿನ ಗುರುಗಳಾದ ಮುರುಘಾ ಶರಣರು ಶ್ರೀಮಠವನ್ನು ವಿಶ್ವ ಭೂಪಟದಲ್ಲಿ ಬರುವಂತೆ ಮಾಡಿದ್ದಾರೆ. ಇದು ನಮ್ಮೆಲ್ಲರ ಪುಣ್ಯ. ನಾಡಿಗೆ, ರಾಷ್ಟ್ರಕ್ಕೆ ಗೌರವ ತರುವ ಕೆಲಸವನ್ನು ಶ್ರೀಗಳು ಮಾಡುತ್ತಿದ್ದಾರೆ. ದಾಸೋಹಕ್ಕಾಗಿ 50 ಕ್ವಿಂಟಾಲ್‌ ಅಕ್ಕಿ ನೀಡುವುದಾಗಿ ತಿಳಿಸಿದರು.

ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ. ಪರಮಶಿವಯ್ಯ, ಕಾರ್ಯನಿರ್ವಹಣಾಧಿಕಾರಿ ಎಂ.ಜಿ. ದೊರೆಸ್ವಾಮಿ, ವೀರಶೈವ ಸಮಾಜದ ಅಧ್ಯಕ್ಷ ಜಯಣ್ಣ, ಜಂಗಮ ಸಮಾಜದ ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಶರಣ ಸಾಹಿತ್ಯ ಪರಿಷತ್‌ ಅಧ್ಯಕ್ಷ ಕೆ.ಎಂ. ವೀರೇಶ್‌, ಬಸವೇಶ್ವರ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯ ಡಾ| ಪ್ರಶಾಂತ್‌, ಉಪ ಪ್ರಾಂಶುಪಾಲ ಡಾ| ನಾರಾಯಣಮೂರ್ತಿ, ವೈದ್ಯಕೀಯ ಅಧೀಕ್ಷಕ ಡಾ| ಪಾಲಾಕ್ಷಪ್ಪ ಇದ್ದರು.

ಟಾಪ್ ನ್ಯೂಸ್

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.