ಮುರುಘಾ ಮಠದಲ್ಲಿ ಸರಳ ವಿವಾಹ
Team Udayavani, May 6, 2020, 12:35 PM IST
ಚಿತ್ರದುರ್ಗ: ಕೋವಿಡ್ ಸಂಕಟದ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಮುರುಘಾ ಮಠದಲ್ಲಿ ಮಂಗಳವಾರ ಸರಳವಾಗಿ ಕಲ್ಯಾಣ ಮಹೋತ್ಸವ ನೆರವೇರಿತು. ಸಾನ್ನಿಧ್ಯ ವಹಿಸಿದ್ದ ಡಾ| ಶಿವಮೂರ್ತಿ ಮುರುಘಾ ಶರಣರು ಮಾತನಾಡಿ, ಕೋವಿಡ್ ವೈರಸ್ ವ್ಯಕ್ತಿಯಿಂದ ವ್ಯಕ್ತಿಗೆ ಹರಡುತ್ತದೆ. ಹಾಗಾಗಿ ಅಂತರವಿರಬೇಕು. ಜೀವವೊಂದಿದ್ದರೆ ಜೀವನದಲ್ಲಿ ಅಂದುಕೊಂಡದ್ದನ್ನೆಲ್ಲ ಸಾಧಿಸಬಹುದು. ಬೇಕಾದುದ್ದನ್ನೆಲ್ಲ ಪಡೆಯಬಹುದು. ಜನರು ಜೀವದ ಬೆಲೆಯನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.
ಇದೇ ವೇಳೆ ಶ್ರೀ ಜಯವಿಭವ ಸ್ವಾಮಿಗಳ ಸ್ಮರಣೋತ್ಸವದ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಜಯವಿಭವ ಸ್ವಾಮಿಗಳಿಗೆ ಪ್ರಾಣಿ ಪಕ್ಷಿಗಳ ಮೇಲೆ ಅತ್ಯಂತ ಪ್ರೀತಿ. ಜಮೀನಿನ ಮೇಲೂ ಪ್ರೀತಿ ಇಟ್ಟುಕೊಂಡಿದ್ದರು. ಶ್ರೀಮಠ ಹಾಗು ನಿಸರ್ಗದ ಮೇಲೆ ವಿಶ್ವಾಸ ಇತ್ತು. ಜಯವಿಭವ ಸ್ವಾಮಿಗಳು ಪ್ರಖಾಂಡ ಪಂಡಿತರು ಹಾಗು ಕೃಷಿ ಪ್ರೇಮಿಗಳಾಗಿದ್ದರು. ಅನೇಕ ಬಾರಿ ಜಯದೇವ ಸ್ವಾಮಿಗಳ ಜೊತೆ ವೈಚಾರಿಕ ಚಿಂತನೆ ಮಾಡುತ್ತಿದ್ದರು ಎಂದು ಸ್ಮರಿಸಿದರು.
ಬಸವೇಶ್ವರ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಡೀನ್ ಡಾ| ಪ್ರಶಾಂತ್, ವೀರಶೈವ ಸಮಾಜದ ಕಾರ್ಯದರ್ಶಿ ಪಟೇಲ್ ಶಿವಕುಮಾರ್, ಎಸ್ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ.ಪರಮಶಿವಯ್ಯ, ಕಾರ್ಯನಿರ್ವಹಣಾಧಿಕಾರಿ ಎಂ.ಜಿ. ದೊರೆಸ್ವಾಮಿ, ಲಿಂಗರಾಜು, ಆರ್. ಲಿಂಗರಾಜು ಇದ್ದರು. 4 ಜೋಡಿ ದಾಂಪತ್ಯ ಜೀವನ ಪ್ರವೇಶಿಸಿದರು. ಜಮುರಾ ಕಲಾವಿದರು ಪ್ರಾರ್ಥಿಸಿದರು. ಬಸವರಾಜ ಶಾಸ್ತ್ರಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ