ರಾಜಕೀಯ ವೈಭವೀಕರಣದಿಂದ ಪ್ರಗತಿ ಕುಂಠಿತ

ಮಹಾತ್ಮ ಗಾಂಧಿಧೀಜಿಯವರ ಗ್ರಾಮ ಸ್ವರಾಜ್ಯ ಕನಸು ನನಸಾಗಿಸಲು ಪ್ರತಿಯೊಬ್ಬರೂ ಶ್ರಮಿಸಿ: ಹನುಮಂತಪ್ಪ

Team Udayavani, Mar 2, 2020, 3:32 PM IST

2-March-20

ಚಿತ್ರದುರ್ಗ: ಗ್ರಾಮೀಣ ಭಾಗದ ಒಂದೊಂದು ಮನೆಯಲ್ಲೂ ಮೂರ್‍ನಾಲ್ಕು ಪಕ್ಷ, ದ್ವೇಷ, ಅಸೂಯೆ, ಗಲಭೆ, ರಾಜಕಾರಣ ಹೆಚ್ಚಾಗಿದೆ. ಇಂತಹ ವ್ಯವಸ್ಥೆಯಲ್ಲಿ ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕನಸು ಕನಸಾಗಿಯೇ ಉಳಿದಿದೆ ಎಂದು ರಾಜ್ಯಸಭೆ ಮಾಜಿ ಸದಸ್ಯ ಎಚ್‌. ಹನುಮಂತಪ್ಪ ಬೇಸರ ವ್ಯಕ್ತಪಡಿಸಿದರು.

ಸರಸ್ವತಿ ವಿದ್ಯಾಸಂಸ್ಥೆ, ಸರಸ್ವತಿ ಕಾನೂನು ಕಾಲೇಜು ಹಾಗೂ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ಸಂಯುಕ್ತಾಶ್ರಯದಲ್ಲಿ ಮಾ. 5 ರವರೆಗೆ ಹಳೇದ್ಯಾಮವ್ವನಹಳ್ಳಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತ ಹಳ್ಳಿಗಳಿಂದ ಕೂಡಿರುವ ದೇಶ. ವಿಪರ್ಯಾಸವೆಂದರೆ ಹಳ್ಳಿಗಳನ್ನು ನಗರೀಕರಣ ಮಾಡಲು ಹೊರಟಿದ್ದಾರೆ. ಗಾಂಧೀಜಿ ಚುನಾವಣೆಯೇ ಬೇಡ ಎಂದಿದ್ದರು. ರಾಜಕೀಯ ಚುನಾವಣೆಗಷ್ಟೇ ಇರಬೇಕು. ಚುನಾವಣೆ ಮುಗಿದ ನಂತರವೂ ಗ್ರಾಮಗಳಲ್ಲಿ ರಾಜಕೀಯ ಮಾಡಿಕೊಂಡು ಕಾಲ ಕಳೆಯುವುದಾದರೆ ಹಳ್ಳಿಗಳ ಉದ್ಧಾರ ಸಾಧ್ಯವಿಲ್ಲ. ಗ್ರಾಮದಲ್ಲಿ ಮುಖಂಡರೆಲ್ಲಾ ಸೇರಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ. ಆಡಳಿತ, ಸರ್ಕಾರ, ಸ್ವರಾಜ್ಯ ನಿಮ್ಮದಾಗಬೇಕು ಎನ್ನುವುದು ಗಾಂಧೀಜಿಯವರ ಕನಸಾಗಿತ್ತು ಎಂದರು.

ಗ್ರಾಮ ಸೇವಕರು ಹಾಗೂ ಶಿಕ್ಷಕರು ರಾಜಕಾರಣ ಮಾಡುತ್ತಿದ್ದಾರೆಂಬ ಅಪವಾದವಿದೆ. ನಿರುದ್ಯೋಗ ಸಮಸ್ಯೆ ಜಾಸ್ತಿಯಾಗಿದೆ. ಉದ್ಯೋಗ ಹುಡುಕಿಕೊಂಡು ಹಳ್ಳಿ ಯುವಕರು ದೊಡ್ಡ ದೊಡ್ಡ ನಗರಗಳತ್ತ ಮುಖ ಮಾಡುತ್ತಿದ್ದಾರೆ. ಸರ್ಕಾರದಿಂದ ಬದಲಾವಣೆ ತರಲು ಸಾಧ್ಯವಿಲ್ಲ. ಪ್ರತಿಯೊಬ್ಬ ವ್ಯಕ್ತಿಯೂ ಬದಲಾವಣೆಯಾದರೆ ಸರ್ಕಾರ ಜನಜೀವನ ಬದಲಾಗುತ್ತದೆ. ಸರ್ಕಾರದ ಕಾರ್ಯಕ್ರಮಗಳು ಸಾಕಷ್ಟಿವೆ. ಕೋಟ್ಯಂತರ ರೂ. ಅನುದಾನ ಬಿಡುಗಡೆಯಾಗುತ್ತಿದ್ದರೂ ಸದ್ಬಳಕೆಯಾಗುತ್ತಿಲ್ಲ.

ಬಡವರು ಬಡವರಾಗಿಯೇ ಉಳಿದಿದ್ದಾರೆ ಎಂದು ವಿಷಾದಿಸಿದರು. ಸರಸ್ವತಿ ಕಾನೂನು ಕಾಲೇಜು ಪ್ರಾಚಾರ್ಯೆ ಪ್ರೊ| ಎಂ.ಎಸ್‌.ಸುಧಾದೇವಿ ಮಾತನಾಡಿ, ಸೇವಾ ಮನೋಭಾವದಿಂದ
ಹಳ್ಳಿಗಳನ್ನು ಮಾದರಿ ಗ್ರಾಮಗಳನ್ನಾಗಿ ಮಾಡುವುದು ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ಉದ್ದೇಶ. ಯುವಶಕ್ತಿಯೇ ದೇಶದ ಭರವಸೆಯಾಗಿರುವುದರಿಂದ ಐದು ವರ್ಷಗಳ ಕಾಲ ಕಷ್ಟಪಟ್ಟು ಓದಿದರೆ ಜೀವನ ಪರ್ಯಂತ ಸುಖವಾಗಿರಬಹುದು. ವಿದ್ಯಾರ್ಥಿ ದೆಸೆಯಲ್ಲಿ ಸೋಮಾರಿಗಳಾದರೆ ಜೀವನವಿಡಿ ಕಷ್ಟಪಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಹಿರಿಯ ಪತ್ರಕರ್ತ ಜಿ.ಎಸ್‌. ಉಜ್ಜಿನಪ್ಪ ಮಾತನಾಡಿದರು. ತಾಲೂಕು ಪಂಚಾಯತ್‌ ಮಾಜಿ ಅಧ್ಯಕ್ಷ ವೇಣುಗೋಪಾಲ್‌, ಜನ್ನಪ್ಪ, ಶಿಕ್ಷಕ ಹನುಮಂತಪ್ಪ, ಅಜ್ಜಪ್ಪ, ಜಿ.ಟಿ. ಸ್ವಾಮಿ ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.