ಆರೋಗ್ಯ ಮೇಳ ಆಯೋಜನೆಗೆ ಸೂಚನೆ

ಹೊಳಲ್ಕೆರೆ, ಚಳ್ಳಕೆರೆ,ಮೊಳಕಾಲ್ಮೂರು ತಾಲೂಕುಗಳಲ್ಲಿ ಆರೋಗ್ಯ ಶಿಕ್ಷಣ ನೀಡಿ: ಸತ್ಯಭಾಮಾ

Team Udayavani, Mar 9, 2020, 3:08 PM IST

9-March-12

ಚಿತ್ರದುರ್ಗ: ಸರ್ಕಾರದ ಸೂಚನೆಯಂತೆ ಜಿಲ್ಲೆಯ ಪರಿಶಿಷ್ಟ ಜಾತಿ, ಪಂಗಡ ಮತ್ತು ಬುಡಕಟ್ಟು ಸಮುದಾಯಗಳು ಹೆಚ್ಚು ಸಂಖ್ಯೆಯಲ್ಲಿರುವ ಹೊಳಲ್ಕೆರೆ, ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲೂಕುಗಳಲ್ಲಿ ಆರೋಗ್ಯ ಮೇಳ ಹಮ್ಮಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಸತ್ಯಭಾಮಾ ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಯೋಜನೆ, ಕಾರ್ಯಕ್ರಮಗಳ ಅನುಷ್ಠಾನ ಕುರಿತು ಜಿಪಂ ಮಿನಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿ, ಪಂಗಡ ಮತ್ತು ಬುಡಕಟ್ಟು ಸಮುದಾಯದ ಜನಸಂಖ್ಯೆ ಹೆಚ್ಚಿರುವ ಹೊಳಲ್ಕೆರೆ, ಚಳ್ಳಕೆರೆ ಮತ್ತು ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಆರೋಗ್ಯ ಇಲಾಖೆಯ ಯೋಜನೆಗಳನ್ನು ಮಾಹಿತಿ, ಶಿಕ್ಷಣ ಹಾಗೂ ಸಂವಹನ ಮೂಲಕ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದರು.

ಮೂರು ತಾಲೂಕುಗಳಲ್ಲಿ ಆರೋಗ್ಯ ಮೇಳ, ತಾಯಂದಿರ ಸಭೆಗಳನ್ನು ಸ್ಥಳೀಯ ಶಾಸಕರ ಜತೆಗೆ ಚರ್ಚಿಸಿ ಕೂಡಲೇ ದಿನಾಂಕ ನಿಗ ದಿ ಮಾಡಬೇಕು. ನುರಿತ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ತಪಾಸಣೆ, ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಬೇಕು. ಆರೋಗ್ಯ ಮೇಳ, ತಾಯಂದಿರ ಮೇಳಗಳಲ್ಲಿ ಸಾಂಸ್ಕೃತಿಕ ವಾತಾವರಣವೂ ಇರಬೇಕು. ಇದಕ್ಕಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜತೆ ಚರ್ಚಿಸಿ ಜಾನಪದ ಕಲಾತಂಡಗಳನ್ನು ಕರೆಸಿ ದಿನವಿಡೀ ಕಾರ್ಯಕ್ರಮ ನಡೆಸಬೇಕು. ಆಯುಷ್ಮಾನ್‌ ಭಾರತ್‌-
ಆರೋಗ್ಯ ಕರ್ನಾಟಕ (ಎಬಿಎಆರ್‌ಕೆ) ಯೋಜನೆಯ ಮಾಹಿತಿ ಕೊಡಬೇಕು. ಮೇಳಕ್ಕೆ ಆಗಮಿಸುವವರು ತಪ್ಪದೇ ಆಧಾರ್‌ ಕಾರ್ಡ್‌ ತರುವಂತೆ ಸೂಚಿಸಬೇಕೆಂದರು.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಈಗಾಗಲೇ ಎಲ್ಲ ಗ್ರಾಮ ಪಂಚಾಯತ್‌ಗಳಲ್ಲಿ ಮಹಿಳಾ ಗ್ರಾಮ ಸಭೆಗಳನ್ನು ಆಯೋಜಿಸುವಂತೆ ಪಿಡಿಒಗಳಿಗೆ ಸೂಚಿಸಲಾಗಿದೆ. ಇಂತಹ ಮಹಿಳಾ ಗ್ರಾಮಸಭೆಗಳಲ್ಲಿ ತಾಯಂದಿರು, ಗರ್ಭಿಣಿಯರು, ಕಿಶೋರಿಯರು ಸೇರಿದಂತೆ ಮಹಿಳಾ ಕೇಂದ್ರಿತ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.

ಮೂರೂ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕ್ರಮಗಳು, ಯೋಜನೆಗಳ ಬಗ್ಗೆ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಆಸ್ಪತ್ರೆಗಳು, ಬಸ್‌ ನಿಲ್ದಾಣ, ಶಾಲೆಗಳು, ತಾ.ಪಂ. ಕಚೇರಿ ಮುಂತಾದ ಜನನಿಬಿಡ ಸ್ಥಳಗಳಲ್ಲಿ ಗೋಡೆ ಬರಹಗಳನ್ನು ವೈವಿಧ್ಯಮಯವಾಗಿ ಬರೆಯಿಸುವ ಮೂಲಕ, ರೇಡಿಯೋ ಜಿಂಗಲ್ಸ್‌, ಪತ್ರಿಕಾ ಪ್ರಕಟಣೆಗಳ ಮೂಲಕ ವ್ಯಾಪಕ ಪ್ರಚಾರ ನೀಡಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಂಜುಳಮ್ಮ, ಆರೊಗ್ಯ ಶಿಕ್ಷಣಾಧಿಕಾರಿ ಚಿದಾನಂದಪ್ಪ, ಸರ್ವೇಕ್ಷಣಾಧಿಕಾರಿ ಡಾ| ತುಳಸಿ ರಂಗನಾಥ್‌, ನಿರೂಪಣಾಧಿಕಾರಿ ಭಾರತಿ ಬಣಕಾರ್‌, ಉಪ  ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಆನಂದ್‌ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.