ಸಾರ್ವಜನಿಕರಿಗೆ ಪಿಪಿಇ ಕಿಟ್ ವಿತರಣೆ
Team Udayavani, Apr 16, 2020, 1:05 PM IST
ಚಿತ್ರದುರ್ಗ: ವೇದಾಂತ ಮೈನ್ಸ್ ಸಂಸ್ಥೆಯಿಂದ ಜಿಲ್ಲಾಡಳಿತಕ್ಕೆ ಆ್ಯಂಬುಲೆನ್ಸ್ ಸಹಿತ ಸ್ಯಾನಿಟೈಸರ್, ಮಾಸ್ಕ್, ಪಿಪಿಇ ಕಿಟ್ ನೀಡಲಾಯಿತು
ಚಿತ್ರದುರ್ಗ: ಕೋವಿಡ್-19 ಹಾವಳಿಗೆ ತತ್ತರಿಸಿರುವ ಜನತೆಗೆ ನೆರವಾಗುತ್ತಿರುವ ವೈದ್ಯಕೀಯ ಸಿಬ್ಬಂದಿಗೆ ನೆರವಾಗುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೇದಾಂತ ಕಬ್ಬಿಣದ ಅದಿರು ಉದ್ಯಮ ಸ್ಯಾನಿಟೈಸರ್, ಮಾಸ್ಕ್, ಪಿಪಿಇ ಕಿಟ್ ನೀಡಿದೆ.
ಜಿಲ್ಲಾಧಿಕಾರಿ ಕಚೇರಿ ಮೂಲಕ 500 ಸ್ಯಾನಿಟೈಸರ್ ಬಾಟಲಿ, 2500 ಟ್ರಿಪಲ್ ಲೇಯರ್ ಎನ್-95 ಮಾಸ್ಕ್, 500 ಪಿಪಿಇ ಕಿಟ್ ಹಾಗೂ ತುರ್ತು ಸೇವೆಗಾಗಿ ಒಂದು ಅಂಬ್ಯುಲೆನ್ಸ್ ನೀಡಲಾಗಿದೆ. ಇದರೊಟ್ಟಿಗೆ ಭೀಮಸಮುದ್ರ ಹೋಬಳಿ ಭಾಗದ ಸ್ವಸಹಾಯ ಸಂಘದ ಮಹಿಳೆಯರು ಕೈಯಿಂದ ತಯಾರಿಸಿದ ಮೂರು ಲೇಯರ್ನ್ 600 ಬಟ್ಟೆ ಮಾಸ್ಕ್ ಗಳನ್ನು ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಕಾರ್ಯಕರ್ತರಿಗೆ, ಜನರಿಗೆ ವಿತರಿಸಿದೆ ಎಂದು ಸಂಸ್ಥೆಯ ನಿರ್ದೇಶಕ ಕೃಷ್ಣಾರೆಡ್ಡಿ ತಿಳಿಸಿದ್ದಾರೆ.
ಇದೇ ವೇಳೆ ಚಿತ್ರದುರ್ಗ ಜಿಲ್ಲೆ ಮಾತ್ರವಲ್ಲದೆ ದೇಶದ ವಿವಿಧೆಡೆ ಕೋವಿಡ್ 19 ಹತ್ತಿಕ್ಕಲು ನೆರವಾಗುವ ಉದ್ದೇಶದಿಂದ ವೇದಾಂತ ಗ್ರೂಪ್ ಸಾಕಷ್ಟು ಉಪಕ್ರಮಗಳನ್ನು ಕೈಗೊಂಡಿದೆ. ಪ್ರತಿಯೊಬ್ಬರೂ ಮನೆಯಲ್ಲೇ ಇದ್ದೂ ರೋಗ ನಿವಾರಣೆಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ