ಕಂದಾಯ ಗ್ರಾಮ ಪ್ರಕ್ರಿಯೆ ವಿಳಂಬಕ್ಕೆ ಕಿಡಿ

ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಕಾರ್ಯವೈಖರಿಗೆ ಸಂಸದ ಎ. ನಾರಾಯಣಸ್ವಾಮಿ ಅಸಮಾಧಾನ

Team Udayavani, Jan 24, 2020, 3:56 PM IST

24-Jnauary-19

ಚಿತ್ರದುರ್ಗ: ದಾಖಲೆ ರಹಿತ ಜನವಸತಿಗಳನ್ನು (ಬೇಚರಾತ್‌) ಕಂದಾಯ ಗ್ರಾಮಗಳನ್ನಾಗಿ ಮಾಡುವ ಪ್ರಕ್ರಿಯೆ ರಾಜ್ಯದಲ್ಲಿ ಆರು ವರ್ಷಗಳಿಂದ ನಡೆಯುತ್ತಿದೆ. ಇಡೀ ರಾಜ್ಯದಲ್ಲಿ ಇದುವರೆಗೆ ಕೇವಲ ಎರಡು ಗ್ರಾಮಗಳನ್ನು ಮಾತ್ರ ಪರಿವರ್ತನೆ ಮಾಡಲಾಗಿದೆ ಎಂದು ಸಂಸದ ಎ. ನಾರಾಯಣಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

2014ಕ್ಕಿಂತ ಮೊದಲು ರಾಜ್ಯದಲ್ಲಿರುವ ಬೇಚರಾತ್‌ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಿ ಅಭಿವೃದ್ಧಿಪಡಿಸುವುದಾಗಿ ಹಿಂದಿನ ಸರ್ಕಾರ ಘೋಷಣೆ ಮಾಡಿತ್ತು. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಯೋಜನೆ ಇದ್ದಲ್ಲೇ ಇದೆ. ಈಗ ಸರ್ಕಾರ ಹತ್ತು ಕುಟುಂಬಗಳಿಗಿಂತ ಹೆಚ್ಚಿನ ಮನೆಗಳಿರುವ ವಸತಿ ಪ್ರದೇಶಗಳ ಸರ್ವೆ ಮಾಡಲು ಮತ್ತೂಂದು ಆದೇಶ ಹೊರಡಿಸಿದೆ ಎಂದರು.

ಚಿತ್ರದುರ್ಗ ಜಿಲ್ಲೆಯಲ್ಲಿ 400ಕ್ಕೂ ಹೆಚ್ಚು ಬೇಚರಾತ್‌ ಗ್ರಾಮಗಳಿದ್ದು, ಶೇ. 25 ಗ್ರಾಮಗಳನ್ನು ಅಂತಿಮ ನೊಟಿμಕೇಶನ್‌ಗೆ ಕಳಿಸಲಾಗಿದೆ. ಇದರಲ್ಲಿ 80 ಮಾತ್ರ ಫೈನಲ್‌ ನೋಟಿಫಿಕೇಶನ್‌ ಆಗಿವೆ. ಹಿರಿಯೂರು ತಾಲೂಕಿನಲ್ಲಿ 84 ಬೇಚರಾತ್‌ ಗ್ರಾಮಗಳಿವೆ. ಚಿತ್ರದುರ್ಗ 68, ಚಳ್ಳಕೆರೆ 44, ಹೊಸದುರ್ಗ 58, ಹೊಳಲ್ಕೆರೆ 17 ಹಾಗೂ ಮೊಳಕಾಲ್ಮೂರು ತಾಲೂಕಿನಲ್ಲಿ 11 ಗ್ರಾಮಗಳಿವೆ. ಇದರಲ್ಲಿ ಹಿರಿಯೂರು 23, ಚಿತ್ರದುರ್ಗ 28, ಚಳ್ಳಕೆರೆ 18, ಹೊಸದುರ್ಗ 24, ಹೊಳಲ್ಕೆರೆ 14, ಮೊಳಕಾಲ್ಮೂರು 8 ಪ್ರಾಥಮಿಕ ಹಂತದ ನೋಟಿಫಿಕೇಶನ್‌ ಆಗಿವೆ ಎಂದು ತಿಳಿಸಿದರು.

ಸರ್ವೆಗೆ ಸ್ವಂತ ಹಣ ಕೊಡುವೆ: ಅಂತಿಮ ಅನುಮೋದನೆ ಪಡೆದ ಬೇಚರ ಗ್ರಾಮಗಳ
ಗ್ರಾಮಗಳ ನಕ್ಷೆ ತಯಾರಾಗಬೇಕು. ಅದರಲ್ಲಿ ಜಾತಿವಾರು, ಮನೆ, ರಸ್ತೆ, ದೇವಸ್ಥಾನ, ಸರ್ಕಾರಿ
ಜಮೀನು, ಅಂಗನವಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಶಾಲೆ ಹಾಗೂ ಪ್ರತಿ ವ್ಯಕ್ತಿಯೂ ಹೊಂದಿರುವ ಖಾಸಗಿ ಜಮೀನು ಸೇರಿದಂತೆ ಮುಂತಾದ ಅಂಶಗಳು ನಕ್ಷೆಯಲ್ಲಿ ದಾಖಲಾಗಿರಬೇಕು ಎಂದು ಸಂಸದರು ಸೂಚಿಸಿದರು.

ಅಂತಿಮ ನೋಟಿಫಿಕೇಶನ್‌ ಆಗಿರುವ ಗ್ರಾಮಗಳ ಸರ್ವೆ ಮಾಡಬೇಕು. ಆದರೆ ಸರ್ಕಾರಿ ಅಧಿಕಾರಿಗಳು ಸರ್ವೆ ಮಾಡುವುದನ್ನು ವಿಳಂಬ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನನ್ನ ಸ್ವಂತ ಹಣದಿಂದ ಕ್ಯಾಡ್‌ ಕಂಪನಿಯವರಿಂದ ಸರ್ವೆ ಮಾಡಿಸುತ್ತೇನೆ. ಒಂದು ತಿಂಗಳಲ್ಲಿ ಎಲ್ಲವನ್ನೂ ಪೂರ್ಣಗೊಳಿಸುವ ಗುರಿ ಇದೆ ಎಂದರು.

ಸಭೆಯಲ್ಲಿ ಜಿಲ್ಲಾ ಧಿಕಾರಿ ಆರ್‌. ವಿನೋತ್‌ ಪ್ರಿಯಾ, ಅಪರ ಜಿಲ್ಲಾ ಧಿಕಾರಿ ಸಿ. ಸಂಗಪ್ಪ, ಡಿಡಿಪಿಐ ಕೆ. ರವಿಶಂಕರ ರೆಡ್ಡಿ, ತಹಶೀಲ್ದಾರ್‌ ವೆಂಕಟೇಶಯ್ಯ ಸೇರಿದಂತೆ ಕಂದಾಯ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.