ಮೆಕ್ಕೆಜೋಳ ಖರೀದಿಗೆ ಹೆಸರು ನೋಂದಾಯಿಸಿ


Team Udayavani, May 15, 2020, 5:54 PM IST

15-May-22

ಸಾಂದರ್ಭಿಕ ಚಿತ್ರ

ಚಿತ್ರದುರ್ಗ: ಶಿಮುಲ್‌ ಮೂಲಕ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಸಲು ಸರ್ಕಾರ ತೀರ್ಮಾನಿಸಿದ್ದು, ಕ್ಷೀರಸಿರಿ ತಂತ್ರಾಂಶದ ಐಡಿ ಮತ್ತು ಫ್ರೂಟ್ಸ್ ತಂತ್ರಾಂಶ ಬಳಕೆ ಮಾಡಿ ರೈತರು ನೋಂದಾಯಿಸಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಮೆಕ್ಕೆಜೋಳ ಮಾದರಿಯನ್ನು ಶುದ್ಧವಾದ ಪಾರದರ್ಶಕ ಬ್ಯಾಗ್‌ ನಲ್ಲಿ ಪ್ಯಾಕಿಂಗ್‌ (1 ಕೆಜಿ) ಮಾಡಿ ಹಾಲು ಉತ್ಪಾದಕ ಸಹಕಾರ ಸಂಘದ ಕಾರ್ಯದರ್ಶಿಗೆ ನೋಂದಣಿ ಸಂಖ್ಯೆ ಜೊತೆ ನೀಡಬೇಕು. ರೈತರು ನಿಗದಿಪಡಿಸಿದ ದಿನ ಮತ್ತು ಸಮಯಕ್ಕೆ ಒಪ್ಪಿದ ಪ್ರಮಾಣದಲ್ಲಿ ಗುಣಮಟ್ಟದ ಮೆಕ್ಕೆಜೋಳವನ್ನು ಎಸ್‌ಎಂಎಸ್
ಮಾಹಿತಿಯಂತೆ ತರಬೇಕು. ಒಬ್ಬ ರೈತ ಪ್ರತಿ ಎಕರೆಗೆ ಗರಿಷ್ಠ 20 ಕ್ವಿಂಟಾಲ್‌ ಗೆ ಮೀರದಂತೆ ಹಾಗೂ ಪ್ರತಿ ರೈತರಿಗೆ ಗರಿಷ್ಠ 5 ಎಕರೆಗೆ 50 ಕ್ವಿಂಟಾಲ್‌ ಮೀರದಂತೆ ಮೆಕ್ಕೆಜೋಳ ಸರಬರಾಜಿಗೆ ಸೀಮಿತಗೊಳಿಸಲಾಗಿದೆ. ಮಧ್ಯ ವರ್ತಿಗಳಿಗೆ ಅವಕಾಶವಿರುವುದಿಲ್ಲ. ಒದಗಿಸಿರುವ ಅವಕಾಶವನ್ನು ಉಪಯೋಗಿಸಿಕೊಂಡು ರೈತರೇ ನೇರವಾಗಿ ಸರಬರಾಜು ಮಾಡಬೇಕು. ಸರ್ಕಾರ ನಿಗದಿಪಡಿಸಿರುವ ಪ್ರತಿ ಕ್ವಿಂಟಾಲ್‌ ಮೆಕ್ಕೆಜೋಳದ ನಿವ್ವಳ ತೂಕದ ಬೆಲೆ 1760 ರೂ. ಆಗಿದೆ ಎಂದಿದ್ದಾರೆ.

ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆ ರೈತರು 2000 ಮೆಟ್ರಿಕ್‌ ಟನ್‌ ಮೆಕ್ಕೆಜೋಳವನ್ನು ಕರ್ನಾಟಕ ಹಾಲು ಮಂಡಳಿ ನಿಗದಿಪಡಿಸಿರುವ ಗುಬ್ಬಿ ಪಶು ಆಹಾರ ಘಟಕಕ್ಕೆ ಮೆಕ್ಕೆಜೋಳವನ್ನು ತಮ್ಮ ಸ್ವಂತ ಖರ್ಚಿನಲ್ಲಿ ಗೋಣಿಚೀಲದಲ್ಲಿ ಸರಬರಾಜು ಮಾಡಬೇಕು. ಮೆಕ್ಕೆಜೋಳವನ್ನು ಉತ್ತಮ ಸ್ಥಿತಿಯಲ್ಲಿರುವ 50 ಕೆಜಿ ಸಾಮರ್ಥ್ಯದ ಗೋಣಿಚೀಲದಲ್ಲಿ ಸರಬರಾಜು ಮಾಡಬೇಕು. ಪ್ಲಾಸ್ಟಿಕ್‌ ಚೀಲದಲ್ಲಿ ತರುವಂತಿಲ್ಲ. ಗೋಣಿಚೀಲದ ಹಣ ನೀಡಲಾಗುವುದಿಲ್ಲ. ಮೆಕ್ಕೆಜೋಳದ ಚೀಲದ ಮೇಲೆ ಮತ್ತು ಚೀಲದೊಳಗೆ ಕೀಟಾಣು ಮುಕ್ತವಾಗಿರಬೇಕು. ಸರಬರಾಜಾದ ಮತ್ತು ಮಾದರಿ ಮೆಕ್ಕೆಜೋಳದಲ್ಲಿ ಗುಣಮಟ್ಟದ ವ್ಯತ್ಯಾಸ ಕಂಡುಬಂದು ತಿರಸ್ಕೃತಗೊಂಡಲ್ಲಿ ಅದನ್ನು ಕಾರ್ಖಾನೆಯಿಂದ ಸಾಗಾಣಿಕೆ ಮಾಡುವ ಜವಾಬ್ದಾರಿ ಕೂಡ ರೈತರದ್ದಾಗಿರುತ್ತದೆ. ಮಾದರಿ ಅಂಗೀಕೃತಗೊಂಡಲ್ಲಿ ಘಟಕದಿಂದ ನಿಗದಿಪಡಿಸಿದ ದಿನಾಂಕದಂದೇ (ಸಂಜೆ 4 ಗಂಟೆ ಒಳಗೆ) ಖುದ್ದಾಗಿ ಮೆಕ್ಕೆಜೋಳವನ್ನು ಸುಸ್ಥಿತಿಯಲ್ಲಿ ಸರಬರಾಜು ಮಾಡಬೇಕಾಗುತ್ತದೆ. ರೈತರು ಸರಬರಾಜು ಮಾಡಿದ ಮೆಕ್ಕೆಜೋಳದ ಪ್ರಮಾಣಕ್ಕೆ ಸರಬರಾಜು ಮಾಡಿದ ಗರಿಷ್ಠ 20 ದಿನಗಳೊಳಗೆ ಸರ್ಕಾರದ ಡಿಬಿಟಿ ಪೋರ್ಟಲ್‌ ಮುಖಾಂತರ ಹಣ ಪಾವತಿಗೆ ಕ್ರಮ ವಹಿಸಲಾಗುತ್ತದೆ.

ಮೆಕ್ಕೆಜೋಳ ಮಾರಾಟ ಮಾಡಲು ಇಚ್ಛಿಸುವ ರೈತರು, ಪ್ರೂಟ್ಸ್‌ ತಂತ್ರಾಂಶದಲ್ಲಿ ನೋಂದಣಿ ಆಗಿರದಿದ್ದಲ್ಲಿ ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರದಲ್ಲಿ
ಅಗತ್ಯ ದಾಖಲೆಗಳೊಂದಿಗೆ ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಡಾ| ಎಂ.ಎಚ್‌. ರಾಜಪ್ಪ, ಮೊ: 7760980563, ಉಸ್ತುವಾರಿ ವ್ಯವಸ್ಥಾಪಕರು, ಹಾಲು ಉತ್ಪಾದಕರ ಸಂಘ ಚಿತ್ರದುರ್ಗ ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

18

Road mishap: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.