ಸಂವಿಧಾನ ಬದುಕಿನ ಅವಿಭಾಜ್ಯ ಅಂಗ

ಯುವ ಸಮೂಹ ಸಂವಿಧಾನವನ್ನು ಅರ್ಥೈಸಿಕೊಂಡು ಪಾಲಿಸಲು ಮುಂದಾಗಲಿ: ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ

Team Udayavani, Jan 27, 2020, 1:07 PM IST

27-Janauary-11

ಚಿತ್ರದುರ್ಗ: ಸ್ವಾತಂತ್ರ್ಯಾ ನಂತರ ದೇಶ ಗಣನೀಯ ಸಾಧನೆ ಮಾಡಿದೆ. ಮುಂದೆ ಸರ್ಕಾರದ ಸೌಲಭ್ಯಗಳು ಜನರ ಮನೆಬಾಗಿಲಿಗೆ ತಲುಪುವಂತೆ ನೋಡಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಹೇಳಿದರು.

ಜಿಲ್ಲಾಡಳಿತದ ವತಿಯಿಂದ ನಗರದ ಮುರುಘ ರಾಜೇಂದ್ರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 71ನೇ ಗಣರಾಜ್ಯೋತ್ಸವದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಇಂದಿನ ಯುವ ಸಮೂಹ ಮತ್ತು ಮಕ್ಕಳು ಸಂವಿಧಾನದ ತತ್ವಗಳನ್ನು ಓದಿ ಜೀವನದಲ್ಲಿ ಅಳವಡಿಸಿಕೊಳ್ಳುವುದು ಮತ್ತು ಪಾಲಿಸಬೇಕು. ಸಂವಿಧಾನ ಕೇವಲ ಸರ್ಕಾರದ ವಿಧಾನವಲ್ಲ, ಅದು ಎಲ್ಲರ ಜೀವನದ ಅವಿಭಾಜ್ಯ ಅಂಗವಾಗಿದೆ ಎಂದರು. ಹಲವು ಭಾಷೆ, ಸಂಸ್ಕೃತಿ, ಧರ್ಮ, ಜಾತಿ, ಜನಾಂಗ ಹೊಂದಿರುವ ಭಾರತ ವಿವಿಧತೆಯಲ್ಲಿ ಏಕತೆಯನ್ನು ಹೊಂದಿದೆ. ಸಂವಿಧಾನದ ಮೂಲಕ ನಮ್ಮೆಲ್ಲರನ್ನೂ ದೇಶ ಒಗ್ಗೂಡಿಸಿದೆ. ಭಾರತ ಕೃಷಿಯಲ್ಲಿ ಸ್ವಾವಲಂಬನೆ, ಕೈಗಾರಿಕೆಯಲ್ಲಿ ಸಫಲತೆ, ತಲಾ ಆದಾಯದಲ್ಲಿ ಏರಿಕೆ, ಶೈಕ್ಷಣಿಕ ಪ್ರಗತಿ, ಸಾರಿಗೆ ಸಂಪರ್ಕ, ತಂತ್ರಜ್ಞಾನ, ವಿಜ್ಞಾನ, ಮಾಹಿತಿ ತಂತ್ರಜ್ಞಾನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿದೆ. ಅಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಿರಿಮೆ ಹೊಂದಿದೆ ಎಂದು ಬಣ್ಣಿಸಿದರು.

ಜಿಲ್ಲೆಯಲ್ಲಿ ಪ್ರತಿಯೊಬ್ಬ ನಾಗರಿಕನಿಗೆ ಮೂಲ ಸೌಲಭ್ಯಗಳಾದ ಶಿಕ್ಷಣ, ರಸ್ತೆ, ಕುಡಿಯುವ ನೀರು, ಮಹಿಳಾ ಮಕ್ಕಳ ಅಭಿವೃದ್ಧಿ ಯೋಜನೆಗಳು ಸೇರಿದಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸವಲತ್ತುಗಳನ್ನು ತಲುಪಿಸುವಲ್ಲಿ ಜಿಲ್ಲಾಡಳಿತ ಅವಿರತವಾಗಿ ಶ್ರಮಿಸುತ್ತಿದೆ. ದೇಶದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿ ಅಭಿವೃದ್ಧಿಯಲ್ಲಿ ಯುವ ಸಮೂಹದ ಕೊಡುಗೆ ಅಪಾರ. ದೇಶ ನನಗೇನು ನೀಡಿದೆ ಎನ್ನುವುದಕ್ಕಿಂತ ದೇಶಕ್ಕಾಗಿ ನನ್ನ ಕೊಡುಗೆ ಏನು ಎಂಬ ಮನೋಧರ್ಮವನ್ನು ಪಾಲಿಸುವುದು ಎಲ್ಲರ ಆದ್ಯ ಕರ್ತವ್ಯ. ಭಾರತದ ಸಂವಿಧಾನದ ಆಶೋತ್ತರಗಳಿಗೆ ಬದ್ಧರಾಗಿ ಅಭಿವೃದ್ಧಿಯ ಪಥದಲ್ಲಿ ಸಾಗೋಣ ಎಂದು ಕರೆ ನೀಡಿದರು.

ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ, ಜಿಪಂ ಅಧ್ಯಕ್ಷೆ ವಿಶಾಲಾಕ್ಷಿ ನಟರಾಜ್‌, ಜಿಪಂ ಸಿಇಒ ಸಿ. ಸತ್ಯಭಾಮ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಕೆ. ಅರುಣ್‌, ಅಪರ ಜಿಲ್ಲಾಧಿಕಾರಿ ಸಂಗಪ್ಪ, ಉಪವಿಭಾಗಾಧಿಕಾರಿ ಪ್ರಸನ್ನ, ತಹಶೀಲ್ದಾರ್‌ ವೆಂಕಟೇಶಯ್ಯ, ನಗರಸಭೆ ಪೌರಾಯುಕ್ತ ಜೆ.ಟಿ. ಹನುಮಂತರಾಜು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಗಣರಾಜ್ಯೋತ್ಸವದ ಅಂಗವಾಗಿ ಪೊಲೀಸ್‌, ಸಶಸ್ತ್ರ ಮೀಸಲು ಪಡೆ, ಗೃಹರಕ್ಷಕ ದಳ, ಅರಣ್ಯ ಇಲಾಖೆ, ಸ್ಕೌಟ್ಸ್‌ ಮತ್ತು ಗೈಡ್ಸ್‌, ಎನ್‌ಸಿಸಿ ಸೇರಿದಂತೆ ವಿವಿಧ ಶಾಲಾ- ಕಾಲೇಜುಗಳ ತಂಡದಿಂದ ಆಕರ್ಷಕ ಪಥ ಸಂಚಲನ ಜರುಗಿತು.

ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರದರ್ಶಿಸಿದ “ಮೇರಾ ಭಾರತ್‌ ಮಹಾನ್‌’ ನೃತ್ಯ ಗಮನ ಸೆಳೆಯಿತು. ರಾಕ್‌ಫೋರ್ಟ್‌ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು “ಎಲ್ಲಾ ಮಾಯ, ನಾಳೆ ನಾವು ಮಾಯ’ ಎನ್ನುವ ಹಾಡಿನ ಮೂಲಕ ಉತ್ತಮ ಸಂದೇಶ ರವಾನಿಸಿದರು. ಚಿನ್ಮೂಲಾದ್ರಿ ಪ್ರೌಢಶಾಲೆ ವಿದ್ಯಾರ್ಥಿಗಳು ಪುಲ್ವಾಮ ದಾಳಿ ಕುರಿತ ನೃತ್ಯ ರೂಪಕ ಪ್ರದರ್ಶಿಸಿದರು. ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ ವಿದ್ಯಾರ್ಥಿಗಳು ವಿವಿಧ ಗೀತೆಗಳಿಗೆ ಹೆಜ್ಜೆ ಹಾಕಿದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.