ಸರ್ವಜ್ಞ ಎಲ್ಲರ ಅಚ್ಚು ಮೆಚ್ಚಿನ ಕವಿ

ತ್ರಿಪದಿಗಳಲ್ಲಿದೆ ಸಮಾಜದ ಅಂಕುಡೊಂಕು ತಿದ್ದುವ ಹಿತವಚನ: ಮಹಾಂತೇಶ್‌

Team Udayavani, Feb 21, 2020, 1:03 PM IST

21-February-11

ಚಿತ್ರದುರ್ಗ: ತ್ರಿಪದಿಗಳ ಮೂಲಕ ಸಮಾದ ಅಂಕುಡೊಂಕುಗಳನ್ನು ಅದ್ಭುತವಾಗಿ ಕಟ್ಟಿಕೊಟ್ಟಿರುವ ಸರ್ವಜ್ಞರ ತ್ರಿಪದಿಗಳನ್ನು ಟೀಕಿಸುವ ಸಾಹಿತ್ಯ ಇದುವರೆಗೆ ಬಂದಿಲ್ಲ ಎಂದು ಪರಶುರಾಂಪುರ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಕೆ.ಟಿ. ಮಹಾಂತೇಶ್‌ ಹೇಳಿದರು.

ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆಯಿಂದ ತರಾಸು ರಂಗಮಂದಿರದಲ್ಲಿ ಗುರುವಾರ ನಡೆದ ಕವಿ ಸರ್ವಜ್ಞ ಜಯಂತಿ ಸಮಾರಂಭದಲ್ಲಿ ಅವರು ಉಪನ್ಯಾಸ ನೀಡಿದರು.

ಸರ್ವಜ್ಞ ಸಾಮಾನ್ಯರೊಂದಿಗೆ ಬೆರೆತು, ಪಾಮರರಿಂದ ಪಂಡಿತರವರೆಗೆ ಅಚ್ಚುಮೆಚ್ಚಿನ ಕವಿಯಾಗಿದ್ದಾರೆ. ಅವರ ತ್ರಿಪದಿಗಳಲ್ಲಿ ಸಮಾಜದ ಅಂಕುಡೊಂಕು, ಧಾರ್ಮಿಕ, ಸಾಮಾಜಿಕ, ಶೆ„ಕ್ಷಣಿಕ, ಭೂಗೋಳ, ವೈದ್ಯ ಶಾಸ್ತ್ರ, ಸೂರ್ಯ, ಚಂದ್ರ, ಆಕಾಶ ಎಲ್ಲವುಗಳ ಬಗ್ಗೆಯೂ ತ್ರಿಪದಿಗಳನ್ನು ರಚಿಸಿದ್ದಾರೆ ಎಂದರು.

ತಮಿಳಿನಲ್ಲಿ ತಿರುವಳ್ಳವರ್‌, ತೆಲುಗಿನಲ್ಲಿ ವೇಮನ, ಕರ್ನಾಟಕದಲ್ಲಿ ಸರ್ವಜ್ಞ ಪ್ರಮುಖ ಸ್ಥಾನ ಪಡೆದಿದ್ದಾರೆ. ಸರ್ವಜ್ಞ ಎನ್ನುವುದು ನಾಮಾಂಕಿತ ಅಥವಾ ಹೆಸರು ಎಂಬ ಕುರಿತು ಚರ್ಚೆಯಾಗಬೇಕಿದೆ. ವೀರಶೈವ, ಜೈನ, ಬೌದ್ಧ ಸಾಹಿತ್ಯದಲ್ಲಿ ಸರ್ವಜ್ಞ ಎಂಬ ಪದದ ಬಗ್ಗೆ ಮಾಹಿತಿ ಇಲ್ಲ. ಸರ್ವ ಎಂದರೆ ಎಲ್ಲವನ್ನು ತಿಳಿದವನು ಎಂದರ್ಥ. ಸರ್ವಜ್ಞನ ತ್ರಿಪದಿಗಳಲ್ಲಿ ಅವರು ಹೇಳಿದ ಪ್ರಕಾರ ಸರ್ವರೊಳಗೊಂದೊಂದು ಪದ ಕಲಿತು ಸರ್ವಜ್ಞನಾದೆ ಎಂದು ಹೇಳಿಕೊಂಡಿದ್ದಾರೆ ಎಂದು ಹೇಳಿದರು.

ಸರ್ವಜ್ಞನ ಹುಟ್ಟು, ತಂದೆ, ತಾಯಿ ಬಗ್ಗೆ ಜಿಜ್ಞಾಸೆ ಇದೆ. ಅವರು ಎರಡು ಸಾವಿರಕ್ಕೂ ಹೆಚ್ಚು ತ್ರಿಪದಿಗಳನ್ನು ರಚಿಸಿದ್ದಾರೆ. ಅವರ ಕಾಲಮಾನ ಇದುವರೆಗೆ ತಿಳಿದಿಲ್ಲ. 16ನೇ ಶತಮಾನದಲ್ಲಿ ಜೀವಿಸಿರಬಹುದು ಎಂದು ಊಹಿಸಲಾಗಿದೆ. ಸರ್ವಜ್ಞನ ಜನ್ಮಸ್ಥಳದ ಬಗ್ಗೆ ಹೆಚ್ಚಿನ ಸಂಶೋಧನೆಯಾಗಬೇಕು ಎಂದು ಅಭಿಪ್ರಾಯಪಟ್ಟರು.

ಅಪರ ಜಿಲ್ಲಾಧಿಕಾರಿ ಸಿ. ಸಂಗಪ್ಪ ಮಾತನಾಡಿ, ಕವಿ ಸರ್ವಜ್ಞ ತತ್ವಜ್ಞಾನಿ, ದಾರ್ಶನಿಕ, ಸನ್ಯಾಸಿ, ನಿಷ್ಠುರವಾದಿ, ವಾಸ್ತವವಾದಿ, ವಿರಾಗಿಯಾಗಿದ್ದಾರೆ. ಕವಿ ಸರ್ವಜ್ಞ ಕರ್ನಾಟಕದ ಮುಕುಟ. ಸಾಹಿತ್ಯದ ಶ್ರೇಷ್ಠತೆಯನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ದ ಅವರು ತ್ರಿಪದಿಗಳ ಮೂಲಕ ಪ್ರತಿಯೊಂದು ವಿಷಯದ ಕುರಿತು ಪ್ರಸ್ತಾಪಿಸಿದ್ದಾರೆ. ಈ ನೆಲದಲ್ಲಿ ಸರ್ವಜ್ಞ ಬಾಳಿ ಬದುಕಿದ್ದು ಕರ್ನಾಟಕದ ಪುಣ್ಯ. ಸಮಾಜದ ಅಂಕುಡೊಂಕು ತಿದ್ದಿ ಸಮಾಜದ ಪ್ರಗತಿಗೆ ಶ್ರಮಿಸಿದ್ದಾರೆ ಎಂದು ಬಣ್ಣಿಸಿದರು.

ಸರ್ವಜ್ಞ ಏಕಾಂಗಿಯಾಗಿದ್ದು, ಈ ದೇಶ ಸುತ್ತಿ ನಮಗೆ ಅವರ ಅನುಭವ ಹಾಗೂ ಜ್ಞಾನವನ್ನು ನಮಗೆ ನೀಡಿದ್ದಾರೆ. ಅವರ ಆದರ್ಶಗಳು ಮಹತ್ವವಾಗಿದ್ದು, ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸರಿ ದಾರಿಯಲ್ಲಿ ನಮ್ಮ ಯೋಚನೆಗಳು ಇರಬೇಕಾದರೆ ಸರ್ವಜ್ಞರ ಕುರಿತು ಅಭ್ಯಾಸ ಮಾಡಬೇಕು ಎಂದರು.

ಕುಂಬಾರ ಗುರುಪೀಠದ ಬಸವ ಕುಂಬಾರ ಗುಂಡಯ್ಯ ಸ್ವಾಮೀಜಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮೂರ್ತಿ ಗುರೂಜಿ, ಎಎಸ್‌ಪಿ ಎಂ.ಬಿ.
ನಂದಗಾವಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನಿಜಲಿಂಗಪ್ಪ, ಕುಂಬಾರ ಸಂಘದ ಜಿಲ್ಲಾಧ್ಯಕ್ಷ ನರಸಿಂಹಪ್ಪ, ಉಪಾಧ್ಯಕ್ಷ ಈರಯ್ಯ, ಕಾರ್ಯದರ್ಶಿ
ವೈ. ಮೃತ್ಯುಂಜಯ, ಕುಂಬಾರ ಮಹಿಳಾ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಬೈಲಮ್ಮ, ಸಮುದಾಯದ ಮುಖಂಡರಾದ ಪಿ. ತಿಪ್ಪೇಸ್ವಾಮಿ, ಹನುಮಂತಪ್ಪ ಮೊದಲಾದವರು ಪಾಲ್ಗೊಂಡಿದ್ದರು.

ಸಭಾ ಕಾರ್ಯಕ್ರಮಕ್ಕೂ ನಗರದ ಹೊಳಲ್ಕೆರೆ ರಸ್ತೆಯ ಗೌರಸಂದ್ರ ಮಾರಮ್ಮ ದೇವಸ್ಥಾನದ ಮುಂಭಾಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನಿಜಲಿಂಗಪ್ಪ, ತಹಶೀಲ್ದಾರ್‌ ವೆಂಕಟೇಶಯ್ಯ ಅವರು ಕವಿ ಸರ್ವಜ್ಞರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮೆರರವವಣಿಗೆಗೆ ಚಾಲನೆ ನೀಡಿದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.