ಕೋಟೆನಾಡಿನೊಂದಿಗೆ ಚಿದಾನಂದಮೂರ್ತಿ ನಂಟು!

ಟಿಪ್ಪು ಜಯಂತಿ ವಿರೋಧಿ ಹೋರಾಟದಲ್ಲಿ ಭಾಗಿಯಾಗಿದ್ದರು ಚಿಮೂ

Team Udayavani, Jan 12, 2020, 1:46 PM IST

12-Janauary-13

ಚಿತ್ರದುರ್ಗ: ನಾಡಿನ ಹಿರಿಯ ಸಂಶೋಧಕ ಚಿದಾನಂದಮೂರ್ತಿ ಅವರ ಇಳಿ ವಯಸ್ಸಿನಲ್ಲೂ ಚಿತ್ರದುರ್ಗದಲ್ಲಿ ನಡೆದ ಟಿಪ್ಪು ಜಯಂತಿ ವಿರೋಧಿ ಹೋರಾಟದಲ್ಲಿ ಭಾಗವಹಿಸಿದ್ದರು. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆ ಮಾಡಲು ಮುಂದಾದಾಗ ರಾಜ್ಯಾದ್ಯಂತ ಪ್ರತಿಭಟನೆ, ಬಂದ್‌ ಆಗಿದ್ದವು. ಈ ಅವಧಿಯಲ್ಲಿ ಚಿತ್ರದುರ್ಗದಲ್ಲೂ ಕೂಡಾ ಹೋರಾಟ ತೀವ್ರಗತಿಯಲ್ಲಿತ್ತು.

ಎರಡು ವರ್ಷದ ಹಿಂದೆ ಚಿತ್ರದುರ್ಗದಲ್ಲಿ ಮದಕರಿ ನಾಯಕ ಗೌರವ ಸಂರಕ್ಷಣಾ ವೇದಿಕೆ ಹಮ್ಮಿಕೊಂಡಿದ್ದ ಒನಕೆ ಚಳವಳಿಯಲ್ಲಿ ಚಿದಾನಂದಮೂರ್ತಿ ಭಾಗವಹಿಸಿ ಭಾಷಣ ಮಾಡಿದ್ದರು.

ಚಿತ್ರನಟಿ ತಾರಾ, ವಿಶ್ವಹಿಂದೂ ಪರಿಷತ್‌ನ ಗೋಪಾಲ್‌ ಹಾಗೂ ಡಾ.ಎಂ. ಚಿದಾನಂದಮೂರ್ತಿ ಅಂದಿನ ಕಾರ್ಯಕ್ರಮದಲ್ಲಿ ಭಾಷಣಕಾರರಾಗಿ ಭಾಗವಹಿಸಬೇಕಿತ್ತು. ಆದರೆ, ಪೊಲೀಸರು ತಾರಾ ಅವರನ್ನು ಹಿರಿಯೂರು ಬಳಿಯೇ ತಡೆದರು. ಆದರೆ, ಚಿದಾನಂದಮೂರ್ತಿ ಅವರು ಮೊದಲೇ ಆಗಮಿಸಿ ಡಾ.ಕೆ. ರಾಜೀವಲೋಚನ ಅವರ ಮನೆಯಲ್ಲಿ ಉಳಿದಿದ್ದರು. ಆನಂತರ ಪ್ರತಿಭಟನೆ ಆರಂಭವಾಗಿ ಒನಕೆ ಓಬವ್ವ ವೃತ್ತಕ್ಕೆ ಆಗಮಿಸುವ ವೇಳೆಗೆ ಆಗಮಿಸಿ ಭಾಷಣ ಮಾಡಿದ್ದರು.

ಮುರುಘಾ ಶರಣರ ಸಂತಾಪ: ಕನ್ನಡ, ಕನ್ನಡತ್ವಕ್ಕಾಗಿ ಯಾವುದೇ ಹಿಂಜರಿಕೆಯಿಲ್ಲದೆ ದಿಟ್ಟ ನಿರ್ಧಾರ ಕೈಗೊಂಡ ಅಪೂರ್ವ ಮೂರ್ತಿ ಚಿದಾನಂದಮೂರ್ತಿ ಎಂದು ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣರು ಸ್ಮರಿಸಿದ್ದಾರೆ.

ವಿದ್ಯಾರ್ಥಿ ದಿಸೆಯಿಂದಲೂ ಅವರಿಗೆ ನಾಡಿನ ಬಗ್ಗೆ ಅತೀವ ಕಳಕಳಿ. ಡಿ.ಎಲ್‌. ನರಸಿಂಹಾಚಾರ್ಯರ ಸೂಚನೆಯಂತೆ ಸಾಮಾಜಿಕ ಬದುಕನ್ನು ಶಾಸನಗಳನ್ನು ಆಧರಿಸಿ ಪುನರಚಿಸುವ ಪ್ರಯತ್ನಕ್ಕೆ ಮುಂದಾದರು. ಪ್ರಾಧ್ಯಾಪಕರಾಗಿ ಹಲವಾರು ದೇಶಗಳನ್ನು ಸುತ್ತಿ ಅಪಾರ ಅನುಭವ ಹೊಂದಿದ್ದರು.

ಸಂಶೋಧನೆ, ಕನ್ನಡದ ಕಾರಣಕ್ಕೆ ಕರ್ನಾಟಕದ ಬೇರೆ ಬೇರೆ ಪ್ರಾಂತ್ಯಗಳನ್ನು ಸುತ್ತಿದ್ದಾರೆ. ಭಾಷೆ, ವ್ಯಾಕರಣ ಸ್ಥಳನಾಮ, ಛಂದಸ್ಸು, ಗ್ರಂಥ ಸಂಪಾದನೆ, ಸಾಹಿತ್ಯ ಚರಿತ್ರೆ, ಜಾನಪದ, ಶಾಸನ, ಇತಿಹಾಸ, ಸಂಸ್ಕೃತಿ ಮೊದಲಾಗಿ ಅನೇಕ ಕ್ಷೇತ್ರಗಳಲ್ಲಿ ಸಂಶೋಧನೆ ಕೈಗೊಂಡವರು.

ನಿರ್ದಿಷ್ಟ ಪಾಂಡಿತ್ಯ, ಸತ್ಯ, ನಿಷ್ಠೆ, ಪ್ರಖರ ಪ್ರತಿಭೆ, ವೈಚಾರಿಕ ಸಾಮರ್ಥ್ಯಕ್ಕೆ ಮತ್ತೂಂದು ಹೆಸರು ಚಿದಾನಂದಮೂರ್ತಿಯವರು. ಕನ್ನಡ-ಕರ್ನಾಟಕ ಉಳಿವಿಗೆ ಅವರು ಮಾಡಿದ ಹೋರಾಟ ಅನನ್ಯ.
ಚಿದಾನಂದ ಮೂರ್ತಿಯವರಿಗೂ ಶ್ರೀಮಠಕ್ಕೂ ಹಾಗೂ ನಮಗೂ ಅವಿನಾಭಾವ ಸಂಬಂಧವಿತ್ತು. ದಾವಣಗೆರೆ ಜಯದೇವ ವಿದ್ಯಾರ್ಥಿ ನಿಲಯದಲ್ಲಿದ್ದು ಪ್ರೌಢಶಾಲಾ ಶಿಕ್ಷಣ ಪೂರೈಸಿದ್ದರು. ಅವರಿಗೆ ಜಯದೇವಶ್ರೀ ಪ್ರಶಸ್ತಿ ನೀಡಿ ಶ್ರೀಮಠ ಗೌರವಿಸಿದೆ. ನಾಡು-ನುಡಿಗೆ ಸಂಬಂಧಿಸಿದಂತೆ ವಚನ ಸಾಹಿತ್ಯಕ್ಕೆ ಸಂಬಂಧಿಸಿದಂತೆ ಅನೇಕ ವಿಚಾರಗಳನ್ನು ದೂರವಾಣಿ ಮೂಲಕ ಮತ್ತು ಖುದ್ದಾಗಿ ಚರ್ಚಿಸುತ್ತಿದ್ದೆವು.

2016 ಜನವರಿಯಲ್ಲಿ ನಡೆದ ಪೀಠಾರೋಹಣ ಬೆಳ್ಳಿಹಬ್ಬ ಸಂದರ್ಭದಲ್ಲಿ ಎಂ.ಎಂ.ಕಲಬುರ್ಗಿ ಪ್ರಧಾನ ಸಂಪಾದಕತ್ವದಲ್ಲಿ ಹೊರತಂದ ಶರಣಶ್ರೀ ಅಭಿನಂದನ ಗ್ರಂಥ, 25 ಸಂಶೋಧನಾ ಗ್ರಂಥ, ನಾನೇ ಬರೆದ 37 ಪುಸ್ತಕಗಳು ಒಟ್ಟು 63 ಪುಸ್ತಕಗಳನ್ನು ದೇಜಗೌ ಅವರೊಂದಿಗೆ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪದಲ್ಲಿ ಬಿಡುಗಡೆ ಮಾಡಿದ್ದು, ಇತಿಹಾಸವಾಗಿ ಉಳಿದುಕೊಂಡಿದೆ.

ಇಂತಹ ಶ್ರೇಷ್ಠ ಸಂಶೋಧಕರನ್ನು ನಾಡು ಕಳೆದುಕೊಂಡಿರುವುದು ಸಾಹಿತ್ಯ ಕ್ಷೇತ್ರ ಮಾತ್ರವಲ್ಲ, ನಾಡಿಗು ತುಂಬಲಾರದ ನಷ್ಟವುಂಟಾಗಿದೆ. ಅವರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಬಸವಾದಿ ಪ್ರಮಥರು ಅವರ ಕುಟುಂಬದವರಿಗೆ ಭರಿಸಲಿ ಎಂದು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.