ಜಾಗರಣೆ-ಶಿವ ಧ್ಯಾನ ಮಾಡಿದ ಭಕ್ತ ಗಣ
Team Udayavani, Feb 23, 2020, 3:55 PM IST
ಚಿತ್ರದುರ್ಗ: ಜಿಲ್ಲೆಯಾದ್ಯಂತ ಶಿವರಾತ್ರಿ ಮಹೋತ್ಸವ ಶ್ರದ್ಧಾ-ಭಕ್ತಿಯಿಂದ ನಡೆಯಿತು. ಬಹುತೇಕ ಎಲ್ಲಾ ಶಿವನ ದೇಗುಲಗಳಲ್ಲಿ ಶಿವಲಿಂಗಕ್ಕೆ ಅಭಿಷೇಕ, ರುದ್ರಾಭಿಷೇಕ, ಪೂಜೆ, ಭಜನೆ, ಶಿವನಾಮ ಸ್ಮರಣೆ ಮಾಡಲಾಯಿತು.
ನಗರದ ನೀಲಕಂಠೇಶ್ವರ ದೇವಸ್ಥಾನ, ಪಾತಾಳಲಿಂಗೇಶ್ವರ ದೇವಸ್ಥಾನ, ಕರುವರ್ತಿ ಈಶ್ವರ ದೇವಸ್ಥಾನ ಸೇರಿದಂತೆ ಎಲ್ಲೆಡೆಯೂ ರಾತ್ರಿ 2 ಗಂಟೆವರೆಗೆ ಭಕ್ತರು ಸರತಿ ಸಾಲಿನಲ್ಲಿ ನಿಂತು ಶಿವ ದರ್ಶನ ಮಾಡಿದರು. ಶಿವರಾತ್ರಿ ಜಾಗರಣೆ ಅಂಗವಾಗಿ ಅನೇಕರು ಉಪವಾಸ ವ್ರತಾಚರಣೆ ಮಾಡಿದರು. ಈ ವೇಳೆ ಎಳನೀರು, ಕಲ್ಲಂಗಡಿಯಂತಹ ಹಣ್ಣುಗಳ ಸೇವನೆ ಹೆಚ್ಚಾಗಿತ್ತು. ಇದೇ ಕಾರಣಕ್ಕೆ ಚಿತ್ರದುರ್ಗ ನಗರದಲ್ಲಿ ಕಲ್ಲಂಗಡಿ ಹಣ್ಣುಗಳ ಮಾರಾಟ ಜೋರಾಗಿತ್ತು.
ಹಿಮಲಿಂಗ ದರ್ಶನ: ನಗರದ ವಾಸವಿ ರಸ್ತೆಯಲ್ಲಿರುವ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ಹಿಮಲಿಂಗದ ಮಾದರಿಯಲ್ಲಿ ಶಿವಲಿಂಗ ಪ್ರತಿಷ್ಠಾಪನೆ ಮಾಡಲಾಗಿತ್ತು. ಇದಕ್ಕಾಗಿ ಹಿಮದಲ್ಲಿ ನಿರ್ಮಾಣವಾದಂತಹ ಗುಹೆಯನ್ನೂ ನಿರ್ಮಿಸಲಾಗಿತ್ತು. ವಿಶೇಷ ಆಕರ್ಷಣೆ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಈ ಅಪೂರ್ವ ಕ್ಷಣವನ್ನು ಕಣ್ತುಂಬಿಕೊಂಡರು. ಜತೆಗೆ ಹಸುವೊಂದು ಶಿವಲಿಂಗದ ಮೇಲೆ ಹಾಲು ಕರೆಯುವಂತಹ ವಿಶೇಷ ಮಾದರಿ ಆಕರ್ಷಕವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ