ಸಚಿವ ಸಂಪುಟ ರಚನೆಯ ವಿಚಾರದಲ್ಲಿ ಸಿಎಂ ಗೆ ಪರಮಾಧಿಕಾರ: ಡಿ.ವಿ ಸದಾನಂದಗೌಡ
Team Udayavani, Jan 2, 2021, 5:40 PM IST
ಚಿತ್ರದುರ್ಗ: ಸಚಿವ ಸಂಪುಟ ರಚನೆಯ ವಿಚಾರದಲ್ಲಿ ಸಿಎಂ ಅವರಿಗೆ ಪರಮಾಧಿಕಾರ ಇರುತ್ತದೆ, ಅವರ ನಿರ್ಣಯವೇ ಅಂತಿಮ ಎಂದು ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಹೇಳಿಕೆ ನೀಡಿದ್ದಾರೆ.
ಚಿತ್ರದುರ್ಗದಲ್ಲಿ ಸುದ್ದಿಗಾರಗೊಂದಿಗೆ ಮಾತನಾಡಿದ ಅವರು ಕ್ರಿಕೆಟ್ ಪಂದ್ಯದಲ್ಲಿ ಕ್ಯಾಪ್ಟನ್ ಆದವರು ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್, ವಿಕೆಟ್ ಕೀಪರ್ ಗಳನ್ನು ನೇಮಿಸುತ್ತಾರೆ. ಅದೇ ರೀತಿಯಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಆದವರು ಸಚಿವ ಸಂಪುಟವನ್ನು ರಚಿಸುತ್ತಾರೆ ಎಂದರು.
ಬೇರೆ ಪಕ್ಷಕ್ಕೆ ರಾಜೀನಾಮೆ ನೀಡಿ ತಮ್ಮ ಪಕ್ಷಕ್ಕೆ ಬಂದವರಿಗೆ ಹೆಚ್ಚಿನ ಆದ್ಯತೆ ಹಿನ್ನೆಲೆಯಲ್ಲಿ ಮಾತನಾಡಿದ ಡಿ.ವಿ ಸದಾನಂದಗೌಡ, ನಮ್ಮ ಸರ್ಕಾರ ಅಧಿಕಾರಕ್ಕೆ ಬರಲು ಕೆಲವರು ಬೇರೆ ಪಕ್ಷದಿಂದ ನಮ್ಮ ಪಕ್ಷಕ್ಕೆ ಬಂದಿದ್ದಾರೆ. ಆದರೆ ಅದು ತಿಪ್ಪಾರೆಡ್ಡಿ ಸೇರಿ ನಮ್ಮ ಪಕ್ಷದ ಹಲವರಿಗೆ ತೊಂದರೆ ಆಗಿದೆ ಎಂದರು.
ಸಂಕ್ರಾಂತಿ, ಯುಗಾದಿ, ದೀಪಾವಳಿ ಪ್ರತಿವರ್ಷ ಬರುತ್ತದೆ.ಹಾಗೇ ದಿನವೂ ಮಾತಾಡುವ ಚಾಳಿಯ ಯತ್ನಾಳ್ ಮಾತಾಡುತ್ತಲೇ ಇರುತ್ತಾರೆ. ಹಾಗಾಗಿ ಅವರಿಗೆ ಉತ್ತರ ಕೊಡುವ ಅಗತ್ಯ ಇಲ್ಲ ಎಂದ ಅವರು ಯತ್ನಾಳ್ ಅವರೇ ಎಲ್ಲಾ ಮಾಡುತ್ತಿದ್ದರೆ ಏಕೋಪಧ್ಯಾಯ ಶಾಲೆ ಮುಖ್ಯೋಪಾದ್ಯಾಯ ಆಗುತ್ತಿದ್ದರು ಎಂದು ವ್ಯಂಗ್ಯವಾಡಿದರು.
ಇದನ್ನೂ ಓದಿ:ಕೇವಲ ದೆಹಲಿ ಮಾತ್ರವಲ್ಲ ಇಡೀ ದೇಶಾದ್ಯಂತ ಕೋವಿಡ್ 19 ಲಸಿಕೆ ಉಚಿತ: ಸಚಿವ ಹರ್ಷ್ ವರ್ಧನ್
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಹಿನ್ನೆಲೆ ಕುರಿತು ಮಾತನಾಡಿ, ಜೆಡಿಎಸ್ ಪಕ್ಷ ಬಿಜೆಪಿ ಜೊತೆ ಸೇರುತ್ತದೋ ಬಿಡುತ್ತದೋ ಗೊತ್ತಿಲ್ಲ. ನಾವು ನಮ್ಮ ವಿಚಾರ ತತ್ವ ಒಪ್ಪಿ ಬಂದವರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದೇವೆ. ಕೇಂದ್ರದ ವರಿಷ್ಠರು ಮಾತುಕತೆ ನಡೆಸಿ ಯೆಸ್ ಎಂದರೆ ಆಗುತ್ತದೆ. ಆದರೆ ಈವರೆಗೆ ಜೆಡಿಎಸ್ ವಿಲೀನ ಪ್ರಸ್ತಾವನೆ ಕುರಿತು ಯಾವುದೇ ಚರ್ಚೆ ಆಗಿಲ್ಲ ಎಂದು ಸಿಎಂ ಹೇಳಿದ್ದಾರೆ. ನಮ್ಮಲ್ಲಿ ಮಾತಾಡಿದಂತೆ ಜೆಡಿಎಸ್ ನಲ್ಲೂ ಸಹ ಕೆಲವರು ಮಾತಾಡುತ್ತಾರೆ. ಇಂಥ ವಿಚಾರಗಳಿಗೆ ಮಹತ್ವ ನೀಡುವ ಅಗತ್ಯ ಇಲ್ಲ ಎಂದು ಹೇಳಿದರು.
ಇದನ್ನೂ ಓದಿ:ಶಾಲೆಗಳ ಅಡುಗೆ ಸಹಾಯಕರ ಮೂರು ತಿಂಗಳ ಸಂಭಾವನೆ ಬಿಡುಗಡೆ: ಸುರೇಶ್ ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ