ಅಪರಾಧ ನಿಯಂತ್ರಣಕ್ಕೆ ಸಹಕರಿಸಿ


Team Udayavani, Mar 11, 2019, 10:21 AM IST

cta-2.jpg

ಚಿತ್ರದುರ್ಗ: ಸಾರ್ವಜನಿಕರು ತಮ್ಮ ಆತ್ಮರಕ್ಷಣೆಗಾಗಿ ಬಂದೂಕು ತರಬೇತಿ ಪಡೆಯುವುದು ಅಗತ್ಯ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಕೆ. ಅರುಣ್‌ ಹೇಳಿದರು. ಇಲ್ಲಿನ ಜಿಲ್ಲಾ ಪೊಲೀಸ್‌ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್‌ ಇಲಾಖೆಯಿಂದ 10 ದಿನಗಳ ಕಾಲ ಏರ್ಪಡಿಸಿದ್ದ ನಾಗರಿಕ ಬಂದೂಕು ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಾರ್ವಜನಿಕರು ಕಾನೂನು ಗೌರವಿಸಿದಲ್ಲಿ ಪೊಲೀಸರ ಬಗ್ಗೆ ಭಯಪಡುವ ಅಗತ್ಯವಿಲ್ಲ. ನಾವು ಕೂಡ ಸಮಾಜದ ಒಂದು ಭಾಗ. ಈ ತರಬೇತಿ ಕಾರ್ಯಾಗಾರವನ್ನು ಪ್ರತಿ ವರ್ಷ ಜಿಲ್ಲೆಯ ವಿವಿಧ ಭಾಗಗಳಲ್ಲಿ ಆಯೋಜಿಸಲಾಗುತ್ತಿದೆ ಎಂದರು.

ಕಳ್ಳತನ ಮತ್ತಿತರ ಅಪರಾಧ ಪ್ರಕರಣ ತಗ್ಗಿಸಲು ಸಾರ್ವಜನಿಕರು ಇಲಾಖೆಗೆ ಸಹಕರಿಸಬೇಕು. ಸರಿಯಾಗಿ ಸಂಚಾರಿ ನಿಯಮ ಪಾಲಿಸಬೇಕು. ಎಲ್ಲವನ್ನೂ ಪೊಲೀಸರೇ ಮಾಡಲು ಸಾಧ್ಯವಿಲ್ಲ. ಎಲ್ಲಿಯೇ ಅನ್ಯಾಯ ಕಂಡು ಬಂದರೂ ತಕ್ಷಣ ನಮಗೆ ತಿಳಿಸಿ. ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ಎಸ್‌ಜೆಎಂ ಕಾಲೇಜಿನ ಸತ್ಯನಾರಾಯಣ ತಮ್ಮ ಅನುಭವ ಹಂಚಿಕೊಂಡು ಮಾತನಾಡಿ, ಪೊಲೀಸರಿಗೆ ಸಾರ್ವಜನಿಕರ ಸಹಾಯ ಬೇಕು ಎಂದರೆ ನಾವು ಸದಾ ಸಿದ್ಧ. ಪೊಲೀಸರೊಂದಿಗೆ ನಾವು ಕೈಜೋಡಿಸಿ ಸಮಾಜ ರಕ್ಷಣೆ ಮಾಡುತ್ತೇವೆ. ಈ ತರಬೇತಿಯಿಂದ ಪೊಲೀಸರ ಕಷ್ಟಗಳನ್ನು ಅರ್ಥ ಮಾಡಿಕೊಳ್ಳಲು ಅವಕಾಶ ಸಿಕ್ಕಿತು. ಪ್ರತಿಯೊಬ್ಬರಿಗೂ ಬಂದೂಕು ತರಬೇತಿ ಅವಶ್ಯ. ನಮ್ಮ ಆತ್ಮರಕ್ಷಣೆ ಮಾಡಿಕೊಳ್ಳ ಲು ಆಯುಧ ಬಳಸುವವಿಧಾನ ಕಲಿತುಕೊಂಡ ಬಗ್ಗೆ ಸಂತೋಷವಿದೆ ಎಂದು ತಿಳಿಸಿದರು.
 
ಶಿಬಿರದಲ್ಲಿ 146 ಮಂದಿ ಪಾಲ್ಗೊಂಡು ತರಬೇತಿ ಪಡೆದುಕೊಂಡಿದ್ದಾರೆ. 6 ಮಂದಿ ವೈದ್ಯರು, ತಲಾ 40 ಮಂದಿ ಸರ್ಕಾರಿ ನೌಕರರು ಹಾಗೂ ರೈತರು, 25 ವಿದ್ಯಾರ್ಥಿಗಳು, 20 ಖಾಸಗಿ ನೌಕರರು, 15 ಮಂದಿ ವ್ಯಾಪಾರಸ್ಥರು ಸೇರಿದಂತೆ ಒಟ್ಟು 146 ಮಂದಿ ತರಬೇತಿ ಪಡೆದಿದ್ದಾರೆ ಪುರುಷರ ವಿಭಾಗದಲ್ಲಿ ನೂರ್‌ ಅಹಮ್ಮದ್‌ ಶರೀಫ್‌ ಪ್ರಥಮ, ಡಾ| ತಿಮ್ಮಾರೆಡ್ಡಿ ದ್ವಿತೀಯ. ರಘುವರ್ಮ ತೃತೀಯ ಸ್ಥಾನ ಪಡೆದುಕೊಂಡರು. ಮಹಿಳೆಯರ ವಿಭಾಗದಲ್ಲಿ ಎಂ.ಎಸ್‌. ಚೇತನಾ ಪ್ರಥಮ, ಮೊನಿಷಾ ದ್ವಿತೀಯ, ಎಚ್‌.ಎಸ್‌. ಸ್ಫೂರ್ತಿ ತೃತೀಯ ಸ್ಥಾನ ಗಳಿಸಿದರು.

ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಎಸ್‌.ಬಿ. ವಸ್ತ್ರಮಠ ಅವರು ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿದರು. ಡಿವೈಎಸ್ಪಿ ವಿಜಯಕುಮಾರ್‌ ಸಂತೋಷ್‌, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್‌ ಉಪಾ ಧೀಕ್ಷಕ ಶ್ರೀನಿವಾಸ್‌, ಪೊಲೀಸ್‌ ನಿರೀಕ್ಷಕರಾದ ಎಚ್‌.ಬಿ. ಸೋಮಶೇಖರಪ್ಪ, ಕಿರಣ್‌ಕುಮಾರ್‌ ಇದ್ದರು. 

ತರಬೇತಿಯಿಂದ ಶಿಸ್ತು ಕಲಿತೆ
ಬಂದೂಕು ತರಬೇತಿಯ ಅನುಭವ ಹಂಚಿಕೊಂಡು ಮಾತನಾಡಿ, ಆತ್ಮರಕ್ಷಣೆಗೆ ಬಂದೂಕು ತರಬೇತಿ ಬಹಳ ಮುಖ್ಯ. ತರಬೇತಿ ಪಡೆದಿದ್ದು ಹೊಸ ಅನುಭವ ನೀಡಿದೆ. ಪೊಲೀಸರ ಬಗ್ಗೆ ಕುತೂಹಲವಿತ್ತು. ಕೇವಲ ಚಲನಚಿತ್ರಗಳಲ್ಲಿ ಪೊಲೀಸ್‌ ಠಾಣೆ ನೋಡಿದ್ದೆ. ಆದರೆ ನಿಜವಾದ ಪೊಲೀಸ್‌ ಠಾಣೆ ನೋಡಿದಾಗ ರೋಮಾಂಚಿತಳಾದೆ. ಈ ತರಬೇತಿಯಿಂದ ಶಿಸ್ತು ಕಲಿತುಕೊಂಡೆ ಎಂದು ಶಿಬಿರಾರ್ಥಿ ಡಾ| ಚೇತನಾ ತಿಳಿಸಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.