Chitradurga; ಬಿಜೆಪಿ ಪಕ್ಷದವರಿಗೆ ಕಲೆಕ್ಷನ್ ಮಾಡಿ ಅಭ್ಯಾಸವಾಗಿದೆ: ಜಮೀರ್ ಅಹಮದ್ ಖಾನ್
Team Udayavani, Oct 17, 2023, 3:00 PM IST
ಚಿತ್ರದುರ್ಗ: ಬಿಜೆಪಿ ಪಕ್ಷದವರಿಗೆ ಕಲೆಕ್ಷನ್ ಮಾಡಿ ಅಭ್ಯಾಸವಾಗಿದೆ. ಎಲ್ಲರೂ ಅವರಂಥವರೇ ಎಂದು ಬಿಜೆಪಿಯವರು ತಿಳಿದಿದ್ದಾರೆ. ನಾವು ಬಿಜೆಪಿ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದೆವು. ಐದು ಗ್ಯಾರಂಟಿ ಘೋಷಿಸಿ ಜಾರಿಗೆ ತಂದಿದ್ದು ಬಿಜೆಪಿಗೆ ಸಹಿಸಲಾಗುತ್ತಿಲ್ಲ ಎಂದು ಚಿತ್ರದುರ್ಗದಲ್ಲಿ ವಸತಿ ಇಲಾಖೆ ಸಚಿವ ಜಮೀರ್ ಅಹ್ಮದ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಅದ್ಯಕ್ಷ ಸಿ.ಎಂ ಇಬ್ರಾಹಿಂ ಹೇಳಿಕೆಗೆ ಸ್ವಾಗತ ಕೋರುವೆ. ಇಂಡಿಯಾ ಒಕ್ಕೂಟಕ್ಕೆ ಜೆಡಿಎಸ್ ಬೆಂಬಲಕ್ಕೆ ಸ್ವಾಗತ ಕೋರುವೆ. ಜೆಡಿಎಸ್ ಪಕ್ಷದ ವಿಚಾರದ ಬಗ್ಗೆ ನಾನು ಮಾತಾಡಲ್ಲ ಎಂದರು.
ಕಾಂಗ್ರೆಸ್ ಸರ್ಕಾರ ಶೋಕಿ ಸರ್ಕಾರ ಎಂದು ಹೆಚ್ ಡಿಕೆ ವಿಚಾರಕ್ಕೆ ಜಮೀರ್ ಅಹಮದ್ ಅವರು, ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ನಾನು ಪ್ರತಿಕ್ರಿಯಿಸಲ್ಲ ಎಂದರು.
ಮಾಗಡಿ ಬಳಿಯ ಪೊಲೀಸ್ ಕ್ವಾಟ್ರಸ್ ಶಿಥಿಲಾವಸ್ಥೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಪೊಲೀಸ್ ಕ್ವಾಟ್ರಸ್ ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಬಿಜೆಪಿ ಕಾಲದಲ್ಲಿ ಯಾವುದೇ ಒಂದು ಮನೆ ಕೊಡಲು ಸಾಧ್ಯವಾಗಿಲ್ಲ ಎಂದರು.