ಪ್ರತಿಭಟನೆಯಿಂದ ಕಾಂಗ್ರೆಸ್ ಪಾಪ ತೊಳೆದುಕೊಳ್ಳಲು ಸಾಧ್ಯವಿಲ್ಲ: ಸಿಎಂ ಬೊಮ್ಮಾಯಿ
Team Udayavani, Mar 4, 2023, 1:37 PM IST
ಚಿತ್ರದುರ್ಗ: ಲೋಕಾಯುಕ್ತವನ್ನು ದುರ್ಬಲಗೊಳಿಸಿ 59 ಪ್ರಕರಣಗಳನ್ನು ಮುಚ್ಚಿ ಹಾಕಿದ ಕಾಂಗ್ರೆಸ್ ಪಕ್ಷಕ್ಕೆ ಪ್ರತಿಭಟಿಸುವ ಯಾವ ನೈತಿಕತೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು
ಚಿತ್ರದುರ್ಗದ ಎಸ್ ಜೆಎಂ ಹೆಲಿಪ್ಯಾಡ್ ನಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದರು.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅವರ ಮಂತ್ರಿಗಳ ಕಚೇರಿಯಲ್ಲೇ 2 ಲಕ್ಷ ಹಣ ಸಿಕ್ಕಿತ್ತು. ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರಾ, ಅಂದು ಲೋಕಾಯುಕ್ತ ಇದ್ದಿದ್ದರೆ ಅರೆಸ್ಟ್ ಆಗುತ್ತಿದ್ದರು. ಆದರೆ, ಲೋಕಾಯುಕ್ತ ದುರ್ಬಲಗೊಳಿಸಿದ್ದರು ಎಂದರು.
ಭ್ರಷ್ಟಾಚಾರದ ವಿರುದ್ಧ ನಮ್ಮ ಸಮರ ಎನ್ನುವುದಕ್ಕೆ ಮಾಡಾಳ್ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿರುವುದೇ ಸಾಕ್ಷಿ ಎಂದು ಸಿಎಂ ಹೇಳಿದರು.
ಇದನ್ನೂ ಓದಿ:ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲು ನಾನು ಸಿದ್ಧನಿದ್ದೇನೆ: ಶಾಸಕ ಶರತ್ ಬಚ್ಚೇಗೌಡ
ಈ ಆರೋಪದ ಮೂಲಕ ಕಾಂಗ್ರೆಸ್ ತನ್ನ ಪಾಪಗಳನ್ನು ತೊಳೆದುಕೊಳ್ಳಲು ಸಾಧ್ಯ ಇಲ್ಲ. ಕಾನೂನು ತನ್ನ ಕೆಲಸ ಮಾಡುತ್ತದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ ಎಂದರು.
ಶಾಸಕ ಸ್ಥಾನಕ್ಕೆ ರಾಜಿನಾಮೆ ಅಥವಾ ಪಕ್ಷದಿಂದ ಉಚ್ಚಾಟನೆ ಪಕ್ಷದ ವರಿಷ್ಠರು ನೋಡಿಕೊಳ್ಳುತ್ತಾರೆ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಈ ರಾಜ್ಯದಲ್ಲಿ ಅತೀ ಹೆಚ್ಚು ಕೊಲೆಗಳಾಗಿವೆ. ಜಾತಿ, ಧರ್ಮ, ರಾಜಕೀಯ ದ್ವೇಷದ ಆಧಾರದಲ್ಲಿ ಕೊಲೆಗಳು ನಡೆದಿವೆ. ಕೊಲೆಗೆ ಕಾರಣವಾದ ಪಿಎಫ್ಐ, ಎಸ್ ಡಿಪಿಐ ಮೇಲಿನ ಪ್ರಕರಣಗಳನ್ನು ವಾಪಾಸು ಪಡೆದುಕೊಂಡಿರುವ ಕಾಂಗ್ರೆಸ್ ಗೆ ಯಾವ ನೈತಿಕತೆ ಇದೆ ಎಂದು ವಾಗ್ದಾಳಿ ನಡೆಸಿದರು.
ಅತ್ಯಂತ ಕೆಳ ಸ್ಥರದಲ್ಲಿರುವ ದುಡಿಯುವ ವರ್ಗಕ್ಕೆ ನೀಡಿರುವ ಯೋಜನೆಗಳನ್ನು ಎಲ್ಲರಿಗೂ ತಲುಪಿಸಲು ಆದೇಶ ಮಾಡಿದ್ದೇವೆ. ಚಿತ್ರದುರ್ಗ ಜಿಲ್ಲೆಯಿಂದ ಫಲಾನುಭವಿಗಳ ಸಮಾವೇಶ ಆರಂಭಿಸಿದ್ದು, ಎಲ್ಲ ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರು ಸಮಾವೇಶ ನಡೆಸಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ