ಕಾಂಗ್ರೆಸ್ ಡರ್ಟಿ ಪೊಲಿಟಿಕ್ಸ್ ಮಾಡುತ್ತಿದೆ: ಸಿಎಂ ಬೊಮ್ಮಾಯಿ
Team Udayavani, Sep 24, 2022, 12:16 PM IST
ಚಿತ್ರದುರ್ಗ: ಕಾಂಗ್ರೆಸ್ ಡರ್ಟಿ ಪೊಲಿಟಿಕ್ಸ್ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಚಿತ್ರದುರ್ಗ ಜಿಲ್ಲೆಯಲ್ಲಿ ಸಿರಿಗೆರೆಯಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಯಾವುದಾದರೂ ವಿಚಾರ ಇದ್ದರೆ ನೇರಾನೇರಾ ಮಾತಾಡಬೇಕು, ದಾಖಲೆ ಕೊಡಬೇಕು, ತನಿಖೆ ಆಗಬೇಕು. ಕಾಂಗ್ರೆಸ್ ಪಕ್ಷದ್ದು ನೈತಿಕತೆಯ ಅಧಃಪತನ, ಹೆಸರು ಕೆಡಿಸುವ ಕಾರ್ಯಕ್ರಮವಿದು. ಅವರು ಹತಾಶರಾಗಿದ್ದಾರೆ. ಪೂರ್ಣ ಪ್ರಮಾಣದ ತಯಾರಿ ಇಲ್ಲದೆ ಸದನಕ್ಕೆ ಬರುವುದು, ಜನಪರ ಕಾಳಜಿ ಇಲ್ಲ, ಈ ರೀತಿಯ ಡರ್ಟಿ ಪಾಲಿಟಿಕ್ಸ್ ಮಾಡಿಕೊಂಡು ಅಧಿಕಾರಕ್ಕೆ ಬರುತ್ತೇವೆ ಅಂದುಕೊಂಡಿದ್ದಾರೆ. ರಾಜ್ಯದಲ್ಲಿ ಇದು ಸಾಧ್ಯವಿಲ್ಲ. ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಇದನ್ನೂ ಓದಿ:ಕಲಬುರಗಿ: ಗಾಂಜಾ ದಂಧೆಕೋರರಿಂದ ಸಿಪಿಐ- ಪೊಲೀಸರ ಮೇಲೆ ಮಾರಣಾಂತಿಕ ದಾಳಿ
ಲಿಂಗಾಯತ ಮುಖ್ಯಮಂತ್ರಿಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಸಚಿವ ಸಂಪುಟದ ವಿಸ್ತರಣೆ ಕುರಿತು ದೆಹಲಿಗೆ ಹೋಗಿ ಬಂದ ನಂತರ ತಿಳಿಸುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಚುನಾವಣಾ ಪೂರ್ವ ಸಮೀಕ್ಷೆಗಳ ಕುರಿತು ಮಾತನಾಡಿದ ಸಿಎಂ, ಎಲ್ಲ ಸಮೀಕ್ಷೆಗಳು ಒಂದೊಂದು ರೀತಿ ಬರುತ್ತವೆ. ಜನರ ನಾಡಿಮಿಡಿತ ನಮಗೆ ಗೊತ್ತಿದೆ, 35 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಸತ್ಯ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ