ದೇಶದಲ್ಲಿ ಕಾಂಗ್ರೆಸ್ ನೆಲಸಮವಾಗುತ್ತಿದೆ, ಕಮಲ ಅರಳುತ್ತಿದೆ: ಶ್ರೀರಾಮುಲು
Team Udayavani, Oct 24, 2019, 12:39 PM IST
ಚಿತ್ರದುರ್ಗ: ದೇಶದಲ್ಲಿ ಕಾಂಗ್ರೆಸ್ ನೆಲಸಮವಾಗುತ್ತಿದೆ. ಮೋದಿ ನೇತೃತ್ವದಲ್ಲಿ ದೇಶದಲ್ಲಿ ಕಮಲ ಅರಳುತ್ತಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು.
ಜಿಲ್ಲೆಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಹಾಗೂ ಹರಿಯಾಣದಲ್ಲಿ ಮುಖ್ಯಮಂತ್ರಿಗಳು ಒಳ್ಳೆಯ ಕೆಲಸ ಮಾಡಿ ಜನಪ್ರಿಯತೆ ಗಳಿಸಿದ್ದಾರೆ. ದೇಶದಲ್ಲಿ ಮೋದಿ ಅಲೆ ಇದೆ. ರಾಜ್ಯದಲ್ಲಿ 3 ವರ್ಷ ಅಲ್ಲ, ಇನ್ನೂ 20 ವರ್ಷದ ಬಿಜೆಪಿ ಸರ್ಕಾರವೇ ಇರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಡಿಕೆಶಿ ಬಗ್ಗೆ ರಾಮುಲು ಸಾಫ್ಟ್ ಕಾರ್ನರ್: ಡಿ.ಕೆ. ಶಿವಕುಮಾರ್ ವಿಚಾರದಲ್ಲಿ ನಾನು ಮನಸ್ಸಿನಿಂದ ಮಾತಾಡಿಲ್ಲ. ಜೈಲಿಗೆ ಹೋಗುವಂತೆ ಹೇಳಿದವನು ಅಲ್ಲ. ಈಗ ನ್ಯಾಯಾಲಯದಿಂದ ಜಾಮೀನು ಪಡೆದು ಬಂದಿದ್ದಾರೆ. ಎಲ್ಲರಿಗೂ ಕಾನೂನಿನ ಮೇಲೆ ಗೌರವ ಇದೆ. ಡಿಕೆಶಿ ಜೈಲಿಗೆ ಹೋದಾಗ ನಾವು ಹೊರಗೆ ಬರಲಿ ಎಂದು ಪ್ರಾರ್ಥಿಸಿದ್ದೇವೆ ಎಂದು ತಿಳಿಸಿದರು.
ಸಿದ್ದರಾಮಯ್ಯ ವಿರುದ್ದ ರಾಮುಲು ಕಿಡಿ: ಸಿದ್ದರಾಮಯ್ಯ ಎಲ್ಲಿಯೂ ಸಮಾಧಾನವಾಗಿರಲ್ಲ. ಪ್ರಚೋದನಕಾರಿ ಮಾತುಗಳನ್ನು ಆಡಿದ್ದರು. ಮೈತ್ರಿ ಸರ್ಕಾರ ಬಿಳಿಸಲು ಸಿದ್ದರಾಮಯ್ಯ ಕಾರಣರಾಗಿದ್ದರು. ಆದರೆ ಸಿದ್ದರಾಮಯ್ಯ ಜಟ್ಟಿ ಕೆಳಗೆ ಬಿದ್ದರೂ ಮೀಸೆ ಮಣ್ಣಾಗಿಲ್ಲ ಎನ್ನುವ ಸ್ವಭಾವದವರು. ಎಂದು ರಾಮುಲು ವಾಗ್ದಾಳಿ ನಡೆಸಿದರು.
ಎಲ್ಲರೂ ಮಾನವರು
ಕೆಟ್ಟದನ್ನ ಬಯಸುವವರು ಹಿಂದೂಗಳಲ್ಲ. ಕೆಟ್ಟದನ್ನ ಶತೃಗಳಿಗೂ ಬಯಸಲ್ಲ, ದೇವರೇ ಕೈ ಹಿಡಿದು ಕಷ್ಟಗಳಿಂದ ಪರಿಹರಿಸಲಿ ಎಂದು ಸಚಿವರು ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…