ಅಂತಃಸತ್ವ ಜಾಗೃತಗೊಳಿಸುವ ಪ್ರಜ್ಞೆ ಅಗತ್ಯ: ಮುರುಘಾ ಶ್ರೀ

ಕೆಲವರಿಗೆ ಸ್ವಯಂ ಅರಿವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಸಾಧ್ಯವಾಗುವುದಿಲ್ಲ

Team Udayavani, Aug 9, 2022, 6:28 PM IST

ಅಂತಃಸತ್ವ ಜಾಗೃತಗೊಳಿಸುವ ಪ್ರಜ್ಞೆ ಅಗತ್ಯ: ಮುರುಘಾ ಶ್ರೀ

ಚಿತ್ರದುರ್ಗ: ಮಾನವನನ್ನು ಕಲುಷಿತಗೊಳಿಸುವ ಪ್ರಜ್ಞೆಗಳು ಬಹಳಷ್ಟಿವೆ. ಮಾನವನ ಅಂತಃಸತ್ವವನ್ನು ಜಾಗೃತಗೊಳಿಸುವ ಪ್ರಜ್ಞೆಯ ಅಗತ್ಯವಿದ್ದು, ಅದೇ ಅಂತಃಸಾಕ್ಷಿ ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು.

ಇಲ್ಲಿನ ನೆಹರೂ ನಗರದ ಜ್ಞಾನವಿಕಾಸ ಶಾಲೆಯಲ್ಲಿ ನಡೆದ “ನಿತ್ಯ ಕಲ್ಯಾಣ; ಮನೆ ಮನೆಗೆ’ ಚಿಂತನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾಕ್ಷಿಪ್ರಜ್ಞೆ ಎಂದರೆ ಅಂತಃಪ್ರಜ್ಞೆ. ಯಾವ ವ್ಯಕ್ತಿ ಶರೀರದ ಮೂಲಕ, ಬುದ್ಧಿಯ ಮೂಲಕ ಅವಲೋಕನದ ಮೂಲಕ ಆಯಾಮ, ಆಲೋಚನೆ, ಚಿಂತನೆಯನ್ನು ಸಾಕ್ಷೀಕರಣಗೊಳಿಸಬಹುದು.

ಆಗ ನಮ್ಮೊಳಗೆ ಸಾಕ್ಷೀಕರಣಗೊಳ್ಳುತ್ತದೆ. ಒಳಜ್ಞಾನವೇ ನಿಜವಾದ ಸಾಕ್ಷಾತ್ಕಾರ. ಪ್ರಜ್ಞೆಯ ಮೂಲಕ ಸಾಕ್ಷಾತ್ಕಾರವಾಗಬೇಕು. ಆಗ ದರ್ಶನವಾಗುತ್ತದೆ ಎಂದರು.

ಮಾನವ ಜೀವನದಲ್ಲಿ ಸುಖ ಬಿಂದುವಾಗಿದೆ, ದುಃಖ ಸಿಂಧುವಾಗಿದೆ. ಕ್ಷಣಿಕ ಸುಖಕ್ಕಾಗಿ ಆತ ಸಾಗರದಷ್ಟು ದುಃಖ ಅನುಭವಿಸಬೇಕಾಗುತ್ತದೆ. ಜೀವನ ಕೇವಲ ಸುಖ, ದುಃಖ ಮಾತ್ರವಲ್ಲ, ಸುಖ-ದುಃಖಗಳ ಸಂಗಮ. ಶಾಶ್ವತವಾದ ಸುಖವನ್ನು ಅಧ್ಯಾತ್ಮದಲ್ಲಿ ಕಾಣಬಹುದು. ನಿತ್ಯ ಕಲ್ಯಾಣ ದುಃ ಖವನ್ನು ಮರೆಸುತ್ತದೆ. ಅನುಭವ ವಿಸ್ತಾರವಾದರೆ ಬದುಕಿನ ವಿಸ್ತಾರವಾಗುತ್ತದೆ ಎಂದು ತಿಳಿಸಿದರು.

ಸಮ್ಮುಖ ವಹಿಸಿದ್ದ ತಿಳುವಳ್ಳಿ ಕಲ್ಮಠದ ಶ್ರೀ ಬಸವ ನಿರಂಜನ ಸ್ವಾಮೀಜಿ ಮಾತನಾಡಿ, ಶ್ರವಣ, ಮನನ, ಧ್ಯಾನ ಮೊದಲಾದವುಗಳನ್ನು ಶ್ರಾವಣ ಮಾಸದಲ್ಲಿ ಕೇಳಬೇಕು. ಸಾಕ್ಷಿಪ್ರಜ್ಞೆ ಅಂದರೆ ಸ್ವಯಂಅರಿವು. ತನ್ನನ್ನು ತಾನು ಮರೆಯದಿರುವುದು. ಸಾಕ್ಷಿಪ್ರಜ್ಞೆಗೆ ಒಳಗಾದವರು ಸುಖೀಜೀವಿಗಳಾಗುತ್ತಾರೆ. ಕೆಲವರಿಗೆ ಸ್ವಯಂ ಅರಿವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಸಾಧ್ಯವಾಗುವುದಿಲ್ಲ ಎಂದರು.

ಪ್ರೊ| ಎಂ. ಲಿಂಗಪ್ಪ ಮಾತನಾಡಿ, ಮುರುಘಾ ಶರಣರು ಬುದ್ಧತ್ವ, ಬಸವತ್ವ ಹಾಗೂ ದಲಿತತ್ವವನ್ನು ನಿರಂತರವಾಗಿ ಪ್ರತಿಪಾದಿಸುತ್ತ ಬಂದಿದ್ದಾರೆ. ಮುರುಘಾ ಮಠದಲ್ಲಿ ತುಳಿತಕ್ಕೆ ಒಳಗಾದವರಿಗೆ ಅವಕಾಶ ಮಾಡಿಕೊಟ್ಟರು. ಸಮಾಜ ನಿಂತ ನೀರಲ್ಲ, ಅದು ಬದಲಾವಣೆ ಬಯಸುತ್ತದೆ. ಅನುಭಾವಿ ವಚನಕಾರರನ್ನು ಸೃಷ್ಟಿಸಿದ ಕೀರ್ತಿ ಬಸವಣ್ಣನವರಿಗೆ ಸಲ್ಲುತ್ತದೆ ಎಂದು ಬಣ್ಣಿಸಿದರು.

ನಗರಸಭೆ ಸದಸ್ಯ ಡಿ. ಮಲ್ಲಿಕಾರ್ಜುನ್‌ ಮಾತನಾಡಿ, ಮುರುಘಾ ಶರಣರು ಮೂಢನಂಬಿಕೆ ಹೋಗಲಾಡಿಸಲು ಅನೇಕ ಜನಮುಖೀ ಕಾರ್ಯಗಳನ್ನು ಮಾಡುತ್ತಿದ್ದಾರೆ. ಅಲ್ಲದೆ ದೀನ ದಲಿತರಿಗೆ ಆಶ್ರಯ ನೀಡಿದ್ದಾರೆ ಎಂದರು. ನಗರಸಭೆ ಮಾಜಿ ಅಧ್ಯಕ್ಷ ಎಚ್‌. ಮಂಜಪ್ಪ ವೇದಿಕೆಯಲ್ಲಿದ್ದರು. ಜಮುರಾ ಕಲಾವಿದರು ಪ್ರಾರ್ಥಿಸಿದರು. ರುದ್ರಪ್ಪ ಸ್ವಾಗತಿಸಿ ನಿರೂಪಿಸಿದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.