ಜೀವ ಜಲದ ಸಂರಕ್ಷಣೆ ಅಗತ್ಯ


Team Udayavani, Mar 23, 2021, 6:47 PM IST

Conservation of living water is essential

ಮೊಳಕಾಲ್ಮೂರು: ಭೂಮಿ ಮೇಲಿನ ಮನುಷ್ಯ ಹಾಗೂ ಸಕಲ ಜೀವರಾಶಿಗಳು ಜೀವಿಸಲು ಅತ್ಯವಶ್ಯವಾಗಿರುವ ಜೀವ ಜಲವನ್ನು ಮಿತವಾಗಿ ಬಳಸಿ ಸಂರಕ್ಷಿಸಬೇಕು ಎಂದು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧಿಧೀಶರಾದ ಎಸ್‌. ನಿರ್ಮಲಾ ಕರೆ ನೀಡಿದರು.

ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ ಮೊಳಕಾಲ್ಮೂರು ಸಹಯೋಗದೊಂದಿಗೆ ವಿಶ್ವ ಜಲ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮನುಷ್ಯ ಭೂಮಿ ಮೇಲೆ ಜೀವನ ಮಾಡಲು ಮುಖ್ಯವಾಗಿ ಗಾಳಿ, ಬೆಳಕು, ಆಹಾರ, ಬಟ್ಟೆ ಸೇರಿದಂತೆ ಬಹು ಮುಖ್ಯವಾದ ನೀರು ತುಂಬಾ ಅವಶ್ಯಕ. ಇವುಗಳಿಲ್ಲದೆ ಜೀವನ ಮಾಡುವುದು ಕಷ್ಟ ಸಾಧ್ಯವಾಗಿದೆ. ಮನುಷ್ಯ ಬೆಟ್ಟ, ಗುಡ್ಡಗಳಲ್ಲಿ ಜೀವನ ಮಾಡುವುದು ಅಸಾಧ್ಯವಾಗಿದ್ದು, ಗಿಡ, ಮರ ಇನ್ನಿತರ ಪ್ರಕೃತಿ ಸಂಪತ್ತನ್ನು ಅವಲಂಬಿಸಿದ್ದಾನೆ. ಗಾಳಿ, ನೀರು ಇಲ್ಲದಿದ್ದಲ್ಲಿ ಬದುಕಲು ಅಸಾಧ್ಯವಾಗಿರುವುದರಿಂದ ನೀರನ್ನು ಜೀವ ಜಲ ಎನ್ನುತ್ತಾರೆ. ಭೂಮಿ ಮೇಲೆ ಶೇ. 75 ರಷ್ಟು ನೀರಿದ್ದರೂ, ಅದರಲ್ಲಿ ಶೇ. 2 ರಷ್ಟು ನೀರನ್ನು ಮಾತ್ರ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಭೂಮಿ ಮೇಲೆ ಜನಸಂಖ್ಯಾ ಸ್ಫೋಟವಾಗಿ ಜನಸಂಖ್ಯೆ ಹೆಚ್ಚಾಗಿದೆ. ವ್ಯವಸಾಯ ಇನ್ನಿತರ ಕೆಲಸಗಳಿಗೆ ನೀರಿನ ಅಭಾವ ಹೆಚ್ಚಾಗಿರುವುದರಿಂದ ಮುಂದಿನ ಪೀಳಿಗೆಗಾಗಿ ಮಿತವಾಗಿ ಬಳಸಿ ಸಂರಕ್ಷಿಸಬೇಕಾಗಿದೆ. ಜೊತೆಗೆ ಗಿಡ ಮರಗಳನ್ನು ಬೆಳೆಸಿ ಅಂತರ್ಜಲವನ್ನು ವೃದ್ಧಿಸಬೇಕೆಂದರು.

ವಕೀಲರ ಸಂಘದ ಕಾರ್ಯದರ್ಶಿ ವಿ.ಡಿ. ರಾಘವೇಂದ್ರ ಮಾತನಾಡಿ, ಭೂಮಿ ಮೇಲೆ 1335 ಘನ ಮೀಟರ್‌ ಪ್ರಮಾಣದ ನೀರು ಇದೆ. ಬಳಕೆಗೆ ಕೇವಲ ಶೇ. 2 ರಷ್ಟು ಮಾತ್ರ ನೀರನ್ನು ಸರೋವರ, ಹಳ್ಳ, ಕೊಳ್ಳ, ಕೆರೆ ಇನ್ನಿತರ ಮೂಲಗಳಿಂದ ಬಳಸಿಕೊಳ್ಳಬಹುದಾಗಿದೆ. ಶುದ್ಧ ಕುಡಿಯುವ ನೀರಿನಿಂದ ಮನುಷ್ಯನಿಗೆ ಜ್ಞಾಪಕ ಶಕ್ತಿ ವೃದ್ಧಿಸುತ್ತದೆ. ಬಾಯಿಯ ಸ್ವತ್ಛತೆ ಕಾಪಾಡಬಹುದಾಗಿದೆ.

ಹೃದಯದ ಕಾರ್ಯಕ್ಷಮತೆಯನ್ನು ವೃದ್ಧಿಸುತ್ತದೆ. ಮೂತ್ರ ಕೋಶದ ಸಮಸ್ಯೆ, ಚರ್ಮದ ಆರೋಗ್ಯ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳನ್ನು ನಿವಾರಿಸಲಾಗುವುದು. ಪರಿಸರ ನಾಶದಿಂದ ಅಂತರ್ಜಲ ಕುಸಿತವುಂಟಾಗಿ ನೀರಿನ ಅಭಾವ ಉಂಟಾಗುವುತ್ತದೆ. ಪರಿಸರವನ್ನು ಬೆಳೆಸಿ ಉಳಿಸುವ ಮೂಲಕ ಅಂತರ್ಜಲವನ್ನು ಸಂರಕ್ಷಿಸಬೇಕೆಂದು ತಿಳಿಸಿದರು.

ವಕೀಲರ ಸಂಘದ ಅಧ್ಯಕ್ಷ ಆರ್‌. ಆನಂದ ಮಾತನಾಡಿದರು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಉಪಾಧ್ಯಕ್ಷ ಡಿ. ಬಸವರಾಜ್‌, ವಕೀಲರಾದ ಎಂ.ಎನ್‌. ವಿಜಯಲಕ್ಷ್ಮೀ, ರಾಮಾಂಜನೇಯ, ಪಾಪಯ್ಯ, ಯರ್ರಿಸ್ವಾಮಿ, ವೆಂಕಟೇಶ್‌, ಕೆ. ನಾಗೇಶ್‌, ಎಂ. ಚಂದ್ರಣ್ಣ, ಜೆ. ಬಸಪ್ಪ, ವೀರೇಶ್‌ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.