ಕಂಟೇನರ್‌ ಅವ್ಯವಹಾರ ತನಿಖೆ ಎಸಿಬಿಗ


Team Udayavani, Jul 24, 2018, 5:05 PM IST

cta-1.jpg

ಚಿತ್ರದುರ್ಗ: ಅಕ್ಷರ ದಾಸೋಹ ಯೋಜನೆಯಡಿ ಶಾಲೆಗಳಿಗೆ ನೀಡಲು 50 ಮತ್ತು 100 ಕೆಜಿ ಕಂಟೇನರ್‌ಗಳ ಖರೀ ದಿಯಲ್ಲಿ ಲಕ್ಷಾಂತರ ರೂ. ಅವ್ಯವಹಾರ ನಡೆದಿದೆ. ಇದರ ತನಿಖೆಯನ್ನು ಎಸಿಬಿಗೆ ಒಪ್ಪಿಸಲಾಗುವುದು ಎಂದ ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ, ತನಿಖೆ ಪೂರ್ಣಗೊಳ್ಳುವವರೆಗೆ ಯಾರಿಗೂ ಬಿಲ್‌ ಪಾವತಿ ಮಾಡಬಾರದು ಎಂದು ತಾಲೂಕು ಪಂಚಾಯತ್‌ ಕಾರ್ಯನಿರ್ವಹಣಾಧಿ ಕಾರಿಗೆ ಸೂಚಿಸಿದರು.

ಇಲ್ಲಿನ ತಾಪಂ ಸಭಾಂಗಣದಲ್ಲಿ ಸೋಮವಾರ ನಡೆದ 2018-19ನೇ ಸಾಲಿನ ತ್ತೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಕ್ಷರ ದಾಸೋಹ ಯೋಜನೆ ಅಡಿ ತಾಲೂಕಿನ 32 ಗ್ರಾಮ ಪಂಚಾಯತ್‌ಗಳಿಗೆ ನೀಡಲು ಖರೀದಿ ಮಾಡಲಾಗಿರುವ ಕಂಟೇನರ್‌ಗಳ ಗುಣಮಟ್ಟವನ್ನು ಪರೀಕ್ಷಿಸಿದ್ದೀರಾ, ಯಾರನ್ನು ಕೇಳಿ ವ್ಯವಹಾರ ಮಾಡಿದ್ದೀರಿ, ಖರೀದಿಸಲು ನಿಮಗೆ ಅನುಮತಿ ಕೊಟ್ಟವರ್ಯಾರು ಎಂದು ಅಧಿಕಾರಿಗಳು ಹಾಗೂ ಪಿಡಿಒಗಳನ್ನು ತರಾಟೆಗೆ ತೆಗೆದುಕೊಂಡರು. ಕೂಡಲೇ ಈ ಪ್ರಕರಣವನ್ನು ಎಸಿಬಿಗೆ ವಹಿಸಬೇಕು ಎಂದು ಇಒಗೆ ತಾಕೀತು ಮಾಡಿದರು.

ಒಂದು ಕಂಟೇನರ್‌ ಬೆಲೆ ಹೆಚ್ಚೆಂದರೆ ಒಂದು ಸಾವಿರ ರೂ. ಇಬಹುದು. ಆದರೆ ನೀವು ಒಂದು ಲಕ್ಷ ರೂ. ಪಾವತಿಸಿದ್ದೀರಿ. ದರದಲ್ಲಿ ಅಜಗಜಾಂತರ ವ್ಯತ್ಯಾಸವಿದೆ. ಈ ಅವ್ಯವಹಾರದಲ್ಲಿ ಭಾಗಿಯಾಗಿರುವವರನ್ನು ಸುಮ್ಮನೆ ಬಿಡುವುದಿಲ್ಲ. ಅಂಗವಿಕಲರಿಗೆ ನೀಡಿರುವ ತ್ರಿಚಕ್ರ ಸೈಕಲ್‌ ಹಾಗೂ ಶ್ರವಣ ಸಾಧನ ಖರೀದಿ ಮಾಡಲು ನಿಮಗೆ ಹೇಳಿದವರ್ಯಾರು, ಗ್ರಾಪಂ ಪಿಡಿಒಗಳಿಗೆ ಲಂಗುಲಗಾಮು ಇಲ್ಲದಂತಾಗಿದೆ ಎಂದು ಸಿಡಿಮಿಡಿಗೊಂಡರು. ಸಭೆಗೆ ಗೈರುಹಾಜರಾಗಿದ್ದ ಅನ್ನೆಹಾಳ್‌ ಗ್ರಾಪಂ ಪಿಡಿಒ ಯತಿರಾಜ್‌ ಅವರನ್ನು ಅಮಾನತು ಮಾಡುವಂತೆ ಸೂಚನೆ ನೀಡಿದರು. ಎನ್‌ಆರ್‌ಇಜಿ ಅತ್ಯುತ್ತಮ ಕಾರ್ಯಕ್ರಮವಾಗಿದ್ದು, ತಾಪಂ ಹಾಗೂ ಜಿಪಂ ಸದಸ್ಯರೊಂದಿಗೆ ಚರ್ಚಿಸಿ ಅಭಿವೃಧಿ ಕಾರ್ಯ ಕೈಗೊಳ್ಳಬೇಕು.

ವಿನಾಕಾರಣ ವಾದ ವಿವಾದ ಮಾಡುವುದು ಬೇಡ. ಬೆಟ್ಟದನಾಗೇನಹಳ್ಳಿ, ಕಲ್ಲಹಳ್ಳಿ, ಡಿ.ಎಸ್‌. ಹಳ್ಳಿಯಲ್ಲಿ ರಸ್ತೆಗಳು ಹದಗೆಟ್ಟಿದ್ದು, ಕೂಡಲೆ ರಸ್ತೆಗಳನ್ನು ದುರಸ್ತಿ ಮಾಡಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಿ.  ಡಿಚಿಕ್ಕೇನಹಳ್ಳಿಯಲ್ಲಿ ಪರಿಶಿಷ್ಟ ಜಾತಿಯವರಿಗಾಗಿ ನಿರ್ಮಿಸಿರುವ ಸಮುದಾಯ ಭವನದಲ್ಲಿ ನ್ಯಾಯಬೆಲೆ ಅಂಗಡಿ ಇಟ್ಟುಕೊಂಡಿರುವ ವ್ಯಕ್ತಿಯನ್ನು ಅಲ್ಲಿಂದ ಖಾಲಿ ಮಾಡಿಸಬೇಕು ಎಂದು ತಿಳಿಸಿದರು.

ಮಳೆ-ಬೆಳೆ ಇಲ್ಲದೆ ಕಂಗಾಲಾಗಿರುವ ರೈತರ ಟ್ರಾನ್ಸ ಫಾರ್ಮರ್‌ಗಳನ್ನು ಬದಲಿಸಲು 40-50 ಸಾವಿರ ರೂ. ಲಂಚ ಕೇಳಲಾಗುತ್ತಿದೆ ಎಂಬ ಆರೋಪವಿದೆ. ರೈತರ ಸಮಸ್ಯೆಗಳನ್ನು ಆಲಿಸುವುದಕ್ಕಾಗಿಯೇ ಪ್ರತ್ಯೇಕ ಸಭೆ ನಡೆಸುತ್ತೇನೆ, ರೈತರನ್ನು ಸತಾಯಿಸಬೇಡಿ ಎಂದು ಬೆಸ್ಕಾಂ ಇಂಜಿನಿಯರ್‌ಗೆ ಎಚ್ಚರಿಕೆ ನೀಡಿದರು. ಸಭೆಯಲ್ಲಿ ತಾಪಂ ಅಧ್ಯಕ್ಷ ವೇಣುಗೋಪಾಲ್‌, ಜಿಪಂ ಸದಸ್ಯ ಗುರುಮೂರ್ತಿ, ತಹಶೀಲ್ದಾರ್‌ ಮಲ್ಲಿಕಾರ್ಜುನ್‌, ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಪಿಡಿಒಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.