ಅಡುಗೆ ಮಾಡಿ ಪ್ರತಿಭಟಿಸಿದ್ರು!


Team Udayavani, Jun 12, 2018, 4:06 PM IST

cta-2.jpg

ಮೊಳಕಾಲ್ಮೂರು: ವೇತನ ಬಿಡುಗಡೆಗೆ ಆಗ್ರಹಿಸಿ ಪಟ್ಟಣ ಪಂಚಾಯತ್‌ ಹೊರಗುತ್ತಿಗೆ ಪಛರಕಾರ್ಮಿಕರು ಪಪಂ ಕಾರ್ಯಾಲಯದ ಆವರಣದಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸೋಮವಾರ ಒಂಭತ್ತು ದಿನ ಪೂರೈಸಿತು. ಪ್ರತಿಭಟನಾಕಾರರು ಧರಣಿ ಸ್ಥಳದಲ್ಲೇ ಅಡುಗೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ಧರಣಿಗೆ ಬೆಂಬಲ ವ್ಯಕ್ತಪಡಿಸಿದ ಭಾರತ್‌ ಕಮ್ಯೂನಿಸ್ಟ್‌ ಪಕ್ಷದ ತಾಲೂಕು ಪ್ರಧಾನ ಕಾರ್ಯದರ್ಶಿ ಜಾಫರ್‌ ಶರೀಫ್‌
ಮಾತನಾಡಿ, ಪೌರಕಾರ್ಮಿಕರು ಪಟ್ಟಣದ ನಾಗರಿಕರ ಆರೋಗ್ಯ ಕಾಪಾಡಲು ಚರಂಡಿಗಳಲ್ಲಿನ ಗಲೀಜು, ಬಸ್‌ ನಿಲ್ದಾಣ ಮತ್ತು ಪಟ್ಟಣದ ಬೀದಿಗಳಲ್ಲಿನ ಕಸ ಮತ್ತು ಕೊಳಚೆ ಪ್ರದೇಶದಲ್ಲಿರುವ ಕೊಳಚೆಯನ್ನು ಸ್ವತ್ಛಗೊಳಿಸುತ್ತಿದ್ದಾರೆ. ಯಾವುದೇ ಸಾಂಕ್ರಾಮಿಕ ರೋಗಗಳು ಹರಡದಂತೆ ಸತತ 22 ವರ್ಷಗಳ ಕಾಲ ಸೇವೆ ಸಲ್ಲಿಸಿದ ಗುತ್ತಿಗೆ ಪೌರಕಾರ್ಮಿಕರಿಗೆ 12 ತಿಂಗಳುಗಳ ಕಾಲ ವೇತನ ನೀಡದಿರುವುದು ನಾಚಿಕೆಗೇಡಿನ ಸಂಗತಿ ಎಂದು ಆರೋಪಿಸಿದರು.

ಪಟ್ಟಣದ 15 ವಾರ್ಡ್‌ಗಳಲ್ಲಿ ಕಸದ ರಾಶಿ ಬಿದ್ದಿದೆ. ಚರಂಡಿಗಳಲ್ಲಿ ಕೊಳಚೆ ತುಂಬಿ ಗಬ್ಬು ನಾರುತ್ತಿದೆ.
ಕೊಳಚೆಯನ್ನು ಸ್ವತ್ಛಗೊಳಿಸದೆ ಕೇವಲ ನಾಲ್ಕು ಕಾಯಂ ಪೌರಕಾರ್ಮಿಕರಿಂದ ಬಸ್‌ ನಿಲ್ದಾಣದ ಆವರಣದ ಕಸವನ್ನು
ಮಾತ್ರ ಸ್ವತ್ಛಗೊಳಿಸಲಾಗುತ್ತಿದೆ. ಮೇಲಾಧಿಕಾರಿಗಳಿಗೆ ಸ್ವತ್ಛತಾ ಕಾರ್ಯ ಮಾಡಲಾಗಿದೆ ಎಂದು ಸುಳ್ಳು ಮಾಹಿತಿ ನೀಡಲಾಗುತ್ತಿದೆ. 

ಆದ್ದರಿಂದ ಪಟ್ಟಣದ ನಾಗರಿಕರೂ ಎಚ್ಚೆತ್ತುಕೊಂಡು ಪಪಂ ಅಧಿಕಾರಿಗಳು ಮತ್ತು ಸರ್ಕಾರದ ಅವೈಜ್ಞಾನಿಕ ಆದೇಶದ
ವಿರುದ್ಧ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ಪೌರಕಾರ್ಮಿಕ ವೃತ್ತಿಯನ್ನೇ ನಂಬಿರುವ ಈ ನೌಕರರಿಗೆ 12 ತಿಂಗಳುಗಳ ವೇತನ ನೀಡಿಲ್ಲ. ಇದರಿಂದ ಕುಟುಂಬಗಳ
ಜೀವನ ನಿರ್ವಹಣೆ ಕಷ್ಟವಾಗಿದೆ.ಪಟ್ಟಣ ಪಂಚಾಯತ್‌ ಕೌನ್ಸಿಲ್‌ ತೀರ್ಮಾನವನ್ನೇ ಧಿಕ್ಕರಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳುವಲ್ಲಿ ಸಂಪೂರ್ಣವಾಗಿ ವಿಫಲವಾಗಿರುವ ಪಪಂ ಮುಖ್ಯಾಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು. 

ಧರಣಿಯಲ್ಲಿ ಸಿಪಿಐನ ಈರಣ್ಣ, ಬೋರಯ್ಯ, ಸಂದೀಪ್‌ಕುಮಾರ್‌, ಓಬಣ್ಣ, ಲಕ್ಷ್ಮಣ್ಣ, ಈಶ್ವರ, ಪಾಪಣ್ಣ, ಮಲ್ಲಯ್ಯ, ದುರುಗೇಶ್‌, ಉಮೇಶ್‌, ಸುಬಾನಿ, ಗುತ್ತಿಗೆ ಪೌರಕಾರ್ಮಿಕರಾದ ಕೃಷ್ಣಮೂರ್ತಿ, ಕೆ. ರಾಮಣ್ಣ, ಎಚ್‌. ನಾಗರಾಜ್‌, ಬಿ. ಸಿದ್ದಪ್ಪ, ತುಪ್ಪದಮ್ಮ, ಓಬಕ್ಕ, ಮಲ್ಲಮ್ಮ, ಗೋಪಿ, ಟಿ. ದಾಸಪ್ಪ, ಬಡಪ್ಪ, ಕುಮಾರಸ್ವಾಮಿ, ಡಿ. ಸಿದ್ದಪ್ಪ, ಎಚ್‌. ಮರಿಸ್ವಾಮಿ, ಎಂ .ಹನುಮಂತಪ್ಪ, ಗಂಗಮ್ಮ, ತಿಮ್ಮಕ್ಕ, ತಿಮ್ಮಣ್ಣ, ಜಯಣ್ಣ ಭಾಗವಹಿಸಿದ್ದರು

ಪಪಂ ಗುತ್ತಿಗೆ ಪೌರಕಾರ್ಮಿಕರು ಅನಿರ್ದಿಷ್ಟಾವಧಿ ಧರಣಿ ಕೈಗೊಂಡು ಒಂಭತ್ತು ದಿನ ಕಳೆದರೂ ತಹಶೀಲ್ದಾರ್‌, ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪೌರಕಾರ್ಮಿಕರ ಅಹವಾಲು ಆಲಿಸಿಲ್ಲ. ಪಪಂ ಮುಖ್ಯಾಧಿಕಾರಿಗಳು ನೀಡುವ
ಸುಳ್ಳು ವರದಿಯನ್ನು ನಂಬಿ ಎಲ್ಲಾ ಸರಿ ಇದೆ ಎಂದು ನಿರ್ಲಕ್ಷ್ಯ ಮಾಡದೆ ವಸ್ತುಸ್ಥಿತಿಯ ಪರಿಶೀಲನೆ ನಡೆಸಬೇಕು.
 ಜಾಫರ್‌ ಶರೀಫ್‌, ಸಿಪಿಐ ತಾಲೂಕು ಪ್ರಧಾನ ಕಾರ್ಯದರ್ಶಿ

ಟಾಪ್ ನ್ಯೂಸ್

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

18

Road mishap: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.