ಉಪ್ಪಾರ ಭವನ-ರಸ್ತೆ ನಿರ್ಮಾಣಕ್ಕೆ ಸಹಕರಿಸುವೆ
Team Udayavani, Nov 23, 2020, 8:56 PM IST
ಹಿರಿಯೂರು: ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ತಾಲೂಕು ಉಪ್ಪಾರ ಭವನ ರಸ್ತೆ ನಿರ್ಮಾಣ ಕಾರ್ಯ ವಿಳಂಬವಾಗಿದೆ. ಈ ಸಮಸ್ಯೆಬಗೆಹರಿಸಿ ರಸ್ತೆ ನಿರ್ಮಿಸಲು ಸಂಪೂರ್ಣ ಸಹಕಾರ ನೀಡುವುದಾಗಿ ಬಿಜೆಪಿ ಮುಖಂಡ ಹಾಗೂ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಎನ್.ಆರ್.ಲಕ್ಷ್ಮೀಕಾಂತ್ ಭರವಸೆ ನೀಡಿದರು.
ನಗರದ ವೇದಾವತಿ ಬಡಾವಣೆಯಲ್ಲಿರುವ ತಾಲೂಕು ಉಪ್ಪಾರ ಸಮುದಾಯ ಭವನದಲ್ಲಿಉಪ್ಪಾರ ಸಮುದಾಯದವರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಸಮಾಜದವರ ಪ್ರಮುಖಬೇಡಿಕೆಗಳಾದ ರಸ್ತೆ ನಿರ್ಮಾಣ, ರಾಜಕೀಯ ಪ್ರಾತಿನಿಧ್ಯತೆ, ಭಗೀರಥ ಪ್ರತಿಮೆ ನಿರ್ಮಾಣ ಮುಂತಾದವುಗಳ ಈಡೇರಿಕೆಗೆ ಸಂಪೂರ್ಣ ಸಹಕಾರನೀಡುತ್ತೇನೆ. ಜತೆಗೆ ಅವರ ಸಮಸ್ಯೆಗಳಿಗೆ ಸದಾಕಾಲಸ್ಪಂದಿಸುತ್ತೇನೆ. ಭವನಕ್ಕೆ ಸುಮಾರು ಐದು ನೂರುಚೇರ್ಗಳನ್ನು ದಾನವಾಗಿ ನೀಡುತ್ತೇನೆ ಎಂದರು.
ಏಷ್ಯಾದಲ್ಲಿಯೇ ಪ್ರಸಿದ್ಧಿ ಪಡೆದಿದ್ದ ವಾಣಿ ಸಕ್ಕರೆ ಕಾರ್ಖಾನೆ ನನೆಗುದಿಗೆ ಬಿದ್ದಿದ್ದು, ಸರಕಾರಹಾಗೂ ಜನಪ್ರತಿನಿಧಿ ಗಳು ಇಚ್ಛಾಶಕ್ತಿ ತೋರಿದ್ದಲ್ಲಿ, ಪುನಶ್ಚೇತನಗೊಳಿಸುವ ಮೂಲಕ ಸಾವಿರಾರು ಜನರಿಗೆ ಉದ್ಯೋಗ ನೀಡುವುದರ ಜತೆಗೆ ರೈತರಿಗೆ ಅನುಕೂಲಆಗುತ್ತದೆ. ಸಮೃದ್ಧಿಯ ಬದುಕು ಕಟ್ಟಿಕೊಳ್ಳಲು ಸಾಧ್ಯವಾಯಿತು ಎಂದರು. ತಾಲೂಕು ಉಪ್ಪಾರಸಮುದಾಯ ಅಧ್ಯಕ್ಷ ರಾಮಣ್ಣ, ಉಪಾಧ್ಯಕ್ಷ ಮಸ್ಕಲ್ವಿ.ಎಲ್.ಗೌಡ್ರು ಸಮುದಾಯದವರ ಸಮಸ್ಯೆಗಳ ಮಾಹಿತಿ ತಿಳಿಸಿದರು. ನಗರಸಭೆ ಸದಸ್ಯ ಚಿತ್ರಜಿತ್ಯಾದವ್, ಬಿಜೆಪಿ ಮಂಡಲ ಅಧ್ಯಕ್ಷ ವಿಶ್ವನಾಥ್,ಟ್ರಸ್ಟ್ ಅಧ್ಯಕ್ಷ ನೀಲಕಂಠಪ್ಪ, ಸಂಘದ ಪ್ರಧಾನಕಾರ್ಯದರ್ಶಿ ಹಳದಪ್ಪ, ಯುವ ಮುಖಂಡರಾದಕನಕದಾಸ್, ನಿಂಗರಾಜ್, ಕೆ.ತಿಪ್ಪೇಸ್ವಾಮಿ, ಕರಿಯಪ್ಪ, ಏಕಾಂತ ಇತರರಿದ್ದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ
ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್
ತಲೆಕೂದಲು, ಮೀಸೆ ಬೋಳಿಸುವಂತೆ ರಾಗಿಂಗ್: ಮಂಗಳೂರಿನಲ್ಲಿ 9 ವಿದ್ಯಾರ್ಥಿಗಳ ಬಂಧನ
ನೇತಾಜಿಯವರ ಜನ್ಮ ದಿನದಂದು ಅವರ ಆಪ್ತರ ಪುತ್ರಿಯಾದ ಜೊತೆ ಉಡುಪಿಯಲ್ಲಿ ಮಾತುಕತೆ,
ಹೊಸ ಸೇರ್ಪಡೆ
ಎಂಬುಲ್ದೇನಿಯ-ರೂಟ್ ಗ್ರೇಟ್ ಫೈಟ್
ಮಂಗಳೂರು ಪ್ಲಾಸ್ಟಿಕ್ ಪಾರ್ಕ್ಗೆ ಕೇಂದ್ರದಿಂದ 40 ಕೋ.ರೂ. : ಡಿವಿಎಸ್
ನಮ್ಮ ರಾಜ್ಯದ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಐಎಎಸ್ ಓದಬೇಕು : ಬಿ.ಸಿ.ಪಾಟೀಲ್
ಸಕಾಲಕ್ಕೆ ಬಾರದ ತುರ್ತುವಾಹನ : ಸಾರ್ವಜನಿಕ ಆಸ್ಪತ್ರೆಗೆ ನುಗ್ಗಿ ದಾಂಧಲೆ ನಡೆಸಿದ ಗ್ರಾಮಸ್ಥರು
ಭಾರೀ ಚರ್ಚೆಗೆ ಗ್ರಾಸವಾದ ಬಿಜೆಪಿ-ಜೆಡಿಎಸ್ ಬೆಂಬಲಿತ ಸದಸ್ಯರ ಮೈತ್ರಿ ಧರ್ಮಪಾಲನೆ ಆಣೆ ಪ್ರಮಾಣ