ಮಹಾರಾಷ್ಟ್ರದಿಂದ ಬಂದಐವರಿಗೆ ಸಾಂಸ್ಥಿಕ ಕ್ವಾರಂಟೈನ್
Team Udayavani, Jun 16, 2020, 1:02 PM IST
ಮೊಳಕಾಲ್ಮೂರು: ಮಹಾರಾಷ್ಟ್ರದ ಪೂನಾದಿಂದ ತಾಲೂಕಿಗೆ ಆಗಮಿಸಿರುವ ಐವರನ್ನು ಪಟ್ಟಣದ ಹೊರವಲಯದಲ್ಲಿರುವ ಆರ್.ಎಂ.ಎಸ್.ಎ ಬಾಲಕಿಯರ ವಸತಿ ಶಾಲೆಯಲ್ಲಿ ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇಡಲಾಗಿದೆ. ತಾಲೂಕಿನ ರಾಂಪುರ ಗ್ರಾಮದ 36 ವರ್ಷದ ಪುರುಷ, 35 ವರ್ಷದ ಮಹಿಳೆ , 15 ವರ್ಷದ ಬಾಲಕಿ ಮತ್ತು 2 ವರ್ಷದ ಗಂಡುಮಗು ಒಂದೇ ಕುಟುಂಬದವರಾಗಿದ್ದಾರೆ. ಈ ನಾಲ್ವರು ಬೈನಲ್ಲಿರುವ ಸಂಬಂಧಿಕರನ್ನು ನೋಡಲು ಹೋಗಿದ್ದರು. ಜೂ. 12 ರಂದು ಸಂಜೆ ರಾಂಪುರಕ್ಕೆ ಆಗಮಿಸಿದ್ದರು. ಹಾಗೆಯೇ ಜೂ. 14 ರಂದು ಮೊಳಕಾಲ್ಮೂರು ಪಟ್ಟಣದ 19 ವರ್ಷದ ಯುವಕ ಪೂನಾದಿಂದ ಬಂದಿದ್ದು, ಆತನನ್ನೂ ಸೇರಿ ಒಟ್ಟು 5 ಜನರನ್ನು ಸಾಂಸ್ಥಿಕ ಕ್ವಾರಂಟೈನ್ ನಲ್ಲಿಡಲಾಗಿದೆ.
ಈ ಐದು ಜನರ ಗಂಟಲು ದ್ರವವನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಉಪ ತಹಶೀಲ್ದಾರ್ ಏಳುಕೋಟಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಹಾಗೂ ಕೋವಿಡ್-19 ತಾಲೂಕು ನೋಡಲ್ ಅಧಿಕಾರಿ ಡಿ. ಚಿದಾನಂದಪ್ಪ , ಆರ್.ಆರ್. ತಂಡದ ಒ. ಶ್ರೀನಿವಾಸ್, ವೈ. ತಿಪ್ಪೇಸ್ವಾಮಿ, ಗ್ರಾಮಲೆಕ್ಕಾಧಿಕಾರಿ ವಾಲೇಕರ್, ಆಶಾ ಕಾರ್ಯಕರ್ತೆ, ತಹಶೀಲ್ದಾರ್ ಎಂ. ಬಸವರಾಜ್ ಮತ್ತು ತಾಲೂಕು ಆರೋಗ್ಯಾಧಿಕಾರಿ ಡಾ| ಪದ್ಮಾವತಿ ಆರ್.ಎಂ.ಎಸ್.ಎ ಬಾಲಕಿಯರ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ