ದೇಶದ ಮೊದಲ ಮಾನವ ರಹಿತ ವಿಮಾನ ಹಾರಾಟ ಚಿತ್ರದುರ್ಗದಲ್ಲಿ ಯಶಸ್ವಿ

ನಾಯಕನಹಟ್ಟಿ ಸಮೀಪದ ವೈಮಾನಿಕ ಪರೀಕ್ಷಾ ಕ್ಷೇತ್ರದಲ್ಲಿ ಹಾರಾಟ : ಸ್ವಾವಲಂಬನೆಯತ್ತ ಮೊದಲ ಹೆಜ್ಜೆ

Team Udayavani, Jul 1, 2022, 11:52 PM IST

thumb 5 artificial

ನಾಯಕನಹಟ್ಟಿ: ರಕ್ಷಣ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ)ಯು ಇಲ್ಲಿಗೆ ಸನಿಹದ ವೈಮಾನಿಕ ಪರೀಕ್ಷಾ ಕ್ಷೇತ್ರ (ಎಟಿಆರ್‌)ದಲ್ಲಿ ನಡೆಸಿದ ದೇಶದ ಮೊದಲ ಸ್ವಾಯತ್ತ ಮಾನವರಹಿತ ವಿಮಾನ (ಯುಎವಿ)ದ ಹಾರಾಟ ಶುಕ್ರವಾರ ಯಶಸ್ವಿಯಾಗಿ ನಡೆಯಿತು.

ಬೆಳಗ್ಗೆ 6.15ಕ್ಕೆ ಆರಂಭವಾದ ಈ ವಿಶಿಷ್ಟ ಪರೀಕ್ಷೆ 15 ನಿಮಿಷಗಳ ಕಾಲ ಜರಗಿತು. ದೊಡ್ಡ ಪ್ರಮಾಣದ ಚಾಲಕ ರಹಿತ ವಿಮಾನ ಹಾರಾಟದತ್ತ ಪ್ರಥಮ ಹೆಜ್ಜೆಯಾದ ಈ ವಿಮಾನ ಹಾರಾಟ ಪರೀಕ್ಷೆಯಿಂದ ದೇಶವು ಚಾಲಕ ರಹಿತ ವಿಮಾನ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾ ಧಿಸು ವತ್ತ ಪ್ರಥಮ ಯಶಸ್ವೀ ಹೆಜ್ಜೆ ಇರಿಸಿದಂತಾಗಿದೆ. ಇದಕ್ಕೆ ಮುನ್ನ ಗುರುವಾರ ರನ್‌ವೇಯಲ್ಲಿ ವಿಮಾನವನ್ನು ಪೂರ್ಣ ಪ್ರಮಾಣದ ಪ್ರಯೋಗಕ್ಕೆ ಒಳಪಡಿಸಲಾಗಿತ್ತು.
ಶುಕ್ರವಾರ ಬೆಳಗ್ಗೆ 3 ಕಿ.ಮೀ. ಉದ್ದದ ರನ್‌ ವೇಯಿಂದ ಪೈಲಟ್‌ ಇಲ್ಲದೆ ಹಾರಿದ ವಿಮಾನ ಸರಾಗವಾಗಿ ಸತತ 15 ನಿಮಿಷ ಕಾಲ ಹಾರಾಟ ನಡೆಸಿತು. ರನ್‌ ವೇಯಿಂದ ಹೊರಟ ವಿಮಾನ ವಿವಿಧ ದಿಕ್ಕುಗಳೆಡೆ ಚಲನೆ, ಹಾರಾಟ ಮತ್ತು ಇಳಿಯುವಿಕೆಯಲ್ಲಿ ನಿಖರತೆ ಪ್ರದರ್ಶಿಸಿತು.

ಆತ್ಮನಿರ್ಭರ ಪ್ರಯತ್ನಕ್ಕೆ ಪೂರಕ
ಪ್ರಧಾನಿ ಮೋದಿ ಅವರ ಕನಸಾದ ರಕ್ಷಣ ಕ್ಷೇತ್ರದಲ್ಲಿ ಆತ್ಮನಿರ್ಭರ ಪ್ರಯತ್ನಕ್ಕೆ ಈ ಪರೀಕ್ಷೆ ಪೂರಕವಾಗಿದೆ. ಮೊದಲ ಹಂತದಲ್ಲಿ 15 ನಿಮಿಷ, ಅನಂತರ 30 ನಿಮಿಷ, ಬಳಿಕ ಸತತ 24 ತಾಸು ಹಾರುವ ಕ್ಷಮತೆಯ ಪರೀಕ್ಷೆ ನಡೆಸಲಾಗುತ್ತದೆ. ಅನಂತರದ ಹಂತದಲ್ಲಿ ವಿಮಾನದ ಗಾತ್ರವನ್ನು ಹೆಚ್ಚಿಸಲಾಗುತ್ತದೆ. ಇದೇ ಕೇಂದ್ರದಲ್ಲಿ ರುಸ್ತುಂ 1 ಮತ್ತು ರುಸ್ತುಂ 2 ಚಾಲಕ ವಿಮಾನ ಹಾರಾಟಗಳು ಯಶಸ್ವಿಯಾಗಿದ್ದವು. ಈ ತಂತ್ರಜ್ಞಾನವನ್ನು ಡಿಆರ್‌ಡಿಒದ ಅಂಗ ಸಂಸ್ಥೆ ಏರೋನಾಟಿಕಲ್‌ ಡೆವಲಪ್‌ಮೆಂಟ್‌ ಎಸ್ಟಾಬ್ಲಿಷ್‌ಮೆಂಟ್‌ (ಎಡಿಇ) ಅಭಿವೃದ್ಧಿಪಡಿಸಿದೆ.
ಚಾಲಕ ರಹಿತ ವಿಮಾನ ಯಶಸ್ವಿಯಾಗಿ ಹಾರಾಡಿ ಮರಳುತ್ತಿದ್ದಂತೆ ಎಟಿಆರ್‌ ಸಿಬಂದಿ ಮತ್ತು ತಾಂತ್ರಿಕ ಸಿಬಂದಿ ಹರ್ಷದಿಂದ ಕುಣಿದು ಕುಪ್ಪಳಿಸಿದರು, ಪರಸ್ಪರ ಸಿಹಿ ಹಂಚಿಕೊಂಡು ಸಂಭ್ರಮಿಸಿದರು.

ರಾಜನಾಥ ಸಿಂಗ್‌ ಅಭಿನಂದನೆ
ಪ್ರಯೋಗ ಯಶಸ್ವಿ ಆಗುತ್ತಿದ್ದಂತೆ ರಕ್ಷಣ ಸಚಿವ ರಾಜನಾಥ ಸಿಂಗ್‌ ಅವರು ತಂತ್ರಜ್ಞರನ್ನು ಅಭಿನಂದಿಸಿದ್ದಾರೆ. ಚಾಲಕ ರಹಿತ ವಿಮಾನ ಅಭಿವೃದ್ಧಿಗೆ ಇದು ದಾರಿ ಮಾಡಿ ಕೊಡಲಿದೆ. ಅತ್ಯಂತ ಕಠಿನ ಮಿಲಿಟರಿ ಪರಿಸ್ಥಿತಿಗಳಲ್ಲಿ ಆತ್ಮನಿರ್ಭರ ಭಾರತಕ್ಕೆ ಇದು ಸಹಾಯಕಾರಿ ಆಗಲಿದೆ ಎಂದು ಟ್ವೀಟ್‌ ಮಾಡಿದ್ದಾರೆ. ಡಿಆರ್‌ಡಿಒ ಚೇರ್ಮನ್‌, ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಕಾರ್ಯದರ್ಶಿ ಡಾ| ಜಿ. ಸತೀಶ್‌ ರೆಡ್ಡಿ ಕೂಡ ತಂತ್ರಜ್ಞಾನದ ಯೋಜನೆಯ ರೂಪಿಸುವಿಕೆ, ಅಭಿವೃದ್ಧಿ ಮತ್ತು ಪ್ರಯೋಗದಲ್ಲಿ ಭಾಗಿಯಾದ ಸಿಬಂದಿಯನ್ನು ಅಭಿನಂದಿಸಿದ್ದಾರೆ.

 

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.