ರೈತರ ಖಾತೆಗೆ ಬೆಳೆ ವಿಮೆ ಜಮಾ: ಕೆ.ಪಿ. ಭೂತಯ್ಯ
Team Udayavani, Aug 6, 2019, 2:44 PM IST
ಚಳ್ಳಕೆರೆ: ನಗರದ ರೈತ ಸಂಘದ ಕಚೇರಿಯಲ್ಲಿ ಚಿತ್ರನಾಯಕನಹಳ್ಳಿ ಗ್ರಾಮದ ರೈತ ಮಹಿಳೆಯರು ರೈತ ಸಂಘಕ್ಕೆ ಸೇರ್ಪಡೆಯಾದರು.
ಚಳ್ಳಕೆರೆ: ಬೆಳೆ ವಿಮಾ ಕಂಪನಿಗಳು 2018ರಲ್ಲಿ ಬೆಳೆ ವಿಮಾ ಕಂತನ್ನು ರೈತರಿಂದ ಪಡೆದಿದ್ದವು. ಆದರೆ ವಿಮಾ ಹಣ ಪಾವತಿಸದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಅಂದಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭರವಸೆ ಹಿನ್ನೆಲೆಯಲ್ಲಿ ಧರಣಿಯನ್ನು ವಾಪಸ್ ಪಡೆಯಲಾಗಿತ್ತು ಎಂದು ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ. ಭೂತಯ್ಯ ಹೇಳಿದರು.
ರೈತ ಸಂಘದ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಪ್ರತಿಭಟನೆಯ ಫಲವಾಗಿ ಕಳೆದ ವಾರ ವಿಮಾ ಕಂಪನಿಯವರು ಅಂದಾಜು 3 ಕೋಟಿ ರೂ. ಬೆಳೆ ವಿಮಾ ಹಣವನ್ನು ರೈತರ ಖಾತೆಗೆ ಜಮಾ ಮಾಡಿದ್ದಾರೆ. ಇದು ರೈತರ ಹೋರಾಟ ಪ್ರತಿಫಲ ಎಂದರು.
ಇದೇ ಸಂದರ್ಭದಲ್ಲಿ ತಾಲೂಕಿನ ಚಿತ್ರನಾಯಕನಹಳ್ಳಿ ಗ್ರಾಮದ ರೈತ ಮಹಿಳೆಯರು ರೈತ ಸಂಘಕ್ಕೆ ಸೇರ್ಪಡೆಯಾದರು. ನಂತರ ಮಾತನಾಡಿದ ರೈತ ಮಹಿಳೆಯರಾದ ತಿಮ್ಮಕ್ಕ, ದೇವೀರಮ್ಮ, ನಮ್ಮ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟವನ್ನು ತಡೆಯುವ ನಿಟ್ಟಿನಲ್ಲಿ ರೈತ ಸಂಘದ ಸಹಕಾರದೊಂದಿಗೆ ಹೋರಾಟ ನಡೆಸಲಾಗಿತ್ತು. ಇದರಿಂದಾಗಿ ಇಂದಿಗೂ ಯಾವುದೇ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿಲ್ಲ. ರೈತ ಸಂಘದ ಕಾರ್ಯಚಟುವಟಿಕೆಗಳಿಂದ ಪ್ರೇರಣೆಗೊಂಡು ಸ್ವಯಂಪ್ರೇರಿತವಾಗಿ ರೈತ ಸಂಘಕ್ಕೆ ಸೇರ್ಪಡೆಯಾಗಿರುವುದಾಗಿ ತಿಳಿಸಿದರು.
ರೈತ ಮುಖಂಡರಾದ ಜಿ.ಎಚ್. ತಿಪ್ಪೇಸ್ವಾಮಿ, ಜಿ.ಟಿ. ಮಂಜುನಾಥ, ಎನ್.ತಿಪ್ಪೇಸ್ವಾಮಿ, ದಯಾನಂದಮೂರ್ತಿ, ಹನುಮಣ್ಣ, ಬಿ.ಟಿ. ನಿಂಗಪ್ಪ, ಚಂದ್ರಶೇಖರ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ