ರೈತನೇ ಸರ್ಟಿಫಿಕೇಟ್‌ ಕೊಡುವ ಕಾಲ ಬಂದಿದೆ


Team Udayavani, Aug 15, 2020, 7:37 PM IST

ರೈತನೇ ಸರ್ಟಿಫಿಕೇಟ್‌ ಕೊಡುವ ಕಾಲ ಬಂದಿದೆ

ಚಿತ್ರದುರ್ಗ: ತನ್ನ ಹೊಲಕ್ಕೆ ತಾನೇ ಸರ್ಟಿಫಿಕೇಟ್‌ ಕೊಡುವ ಸಂಪೂರ್ಣ ಸ್ವಾತಂತ್ರ್ಯ ರೈತನಿಗೆ ಬೆಳೆ ಸಮೀಕ್ಷೆ ಆ್ಯಪ್‌ ಮೂಲಕ ಸಿಕ್ಕಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಹೇಳಿದರು.

ಹಿರಿಯೂರು ತಾಲೂಕು ಕಸ್ತೂರಿ ರಂಗಪ್ಪನಹಳ್ಳಿ ಗ್ರಾಮದಲ್ಲಿ ಶುಕ್ರವಾರ ರೈತರ ಬೆಳೆ ಸಮೀಕ್ಷೆ ಉತ್ಸವದ ಮೊಬೈಲ್‌ ಆ್ಯಪ್‌ ಬಳಕೆಯ ಪ್ರಾತ್ಯಕ್ಷಿಕೆಯಲ್ಲಿ ಮಾತನಾಡಿದ ಅವರು, ರೈತರು ತೆಗೆದ ಫೋಟೋಗೆ ಗೌರವವಿದೆ. ರೈತರು ತಮ್ಮ ಭೂಮಿಗೆ ಒಡೆಯರಾಗಿದ್ದು, ನನ್ನ ಬೆಳೆ ನನ್ನ ಹಕ್ಕು ಎಂಬುದನ್ನು ರೈತರು ಸಾಬೀತುಪಡಿಸಿದ್ದಾರೆ ಎಂದು ಹೇಳಿದರು.

ರೈತರ ಬೆಳೆ ಸಮೀಕ್ಷೆಯನ್ನು ಈ ಮೊದಲು ಖಾಸಗಿ ನಿವಾಸಿಗಳಿಂದ ಬೆಳೆ ಸಮೀಕ್ಷೆ ಮಾಡಲಾಗುತ್ತಿತ್ತು. ಇದರಿಂದ ನಿಖರವಾಗಿ ಬೆಳೆ ವಿವರವನ್ನು ದಾಖಲಿಸಲು ಸಾಧ್ಯವಾಗುತ್ತಿರಲಿಲ್ಲ. ಹಾಗಾಗಿ ಬೆಳೆ ವಿಮೆ, ಬೆಂಬಲ ಬೆಲೆ ಯೋಜನೆಯ ಲಾಭ, ಪ್ರವಾಹ ಮತ್ತು ಬರಗಾಲದ ಸಂದರ್ಭಲ್ಲಿ ನೀಡುವ ನಷ್ಟ ಪರಿಹಾರ ವಿತರಿಸಲು ಕಷ್ಟವಾಗುತ್ತಿತ್ತು. ಆದ್ದರಿಂದ ಈ ವರ್ಷ ಬೆಳೆ ಸಮೀಕ್ಷೆ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದರು.

ಪ್ರತಿಯೊಬ್ಬ ರೈತ ತನ್ನ ಹೊಲದಲ್ಲಿ ಆ್ಯಪ್‌ ಮೂಲಕ ತಾನು ಬೆಳೆದ ಬೆಳೆಯ ವಿವರವನ್ನು ಸ್ವತಃ ತಾವೇ ಫೋಟೋ ತೆಗೆದು ಅಪ್‌ಲೋಡ್‌ ಮಾಡಬೇಕು. ಇದು ರೈತರಿಗೆ ನೀಡಿದ ದೊಡ್ಡ ಸ್ವಾತಂತ್ರ್ಯವಾಗಿದೆ. ಪ್ರತಿಯೊಬ್ಬ ರೈತ ತನ್ನ ಹಿಸ್ಸೆಯಲ್ಲಿ ಅವರು ಬೆಳೆ ವಿವರವನ್ನು ದಾಖಲಿಸಬೇಕು. ಆ.24ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಯೂರಿಯಾ ಪೂರೈಕೆಗೆ ಕ್ರಮ:ಜಿಲ್ಲೆಯಲ್ಲಿ ಜುಲೈವರೆಗೆ 39,190 ಮೆಟ್ರಿಕ್‌ ಟನ್‌ ಯೂರಿಯಾ ಬೇಡಿಕೆ ಇತ್ತು. ಜುಲೈವರೆಗೆ 40,303 ಯೂರಿಯಾವನ್ನು ಸರಬರಾಜು ಮಾಡಲಾಗಿದ್ದು, ಇನ್ನೂ ನಾಲ್ಕೈದು ದಿನಗಳಲ್ಲಿ 1000 ಮೆಟ್ರಿಕ್‌ ಟನ್‌ ಯೂರಿಯಾ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದ್ದು, ಯೂರಿಯಾ ಸಮಸ್ಯೆ ಬಗೆಹರಿಸಲಾಗುವುದು ಎಂದು ಹೇಳಿದರು.

ಕೃಷಿ ಯಂತ್ರಧಾರೆಗಳ ನೆರವು: ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ರೈತರಿಗೆ ಬೇಕಾಗಿರುವ ಸಣ್ಣ ಮತ್ತು ದೊಡ್ಡ ಟ್ರ್ಯಾಕ್ಟರ್‌ಗಳನ್ನು ಖರೀದಿಸಲು ಈ ವರ್ಷದಿಂದ ರೈತ ಸಹಕಾರಿ ಸಂಘಗಳಿಗೆ 8 ಲಕ್ಷಗಳವರೆಗೆ ಸಹಾಯಧನ ನೀಡಲಾಗುತ್ತಿದೆ. ಕನಿಷ್ಟ 10 ರೈತರು ಸಂಘ ರಚಿಸಿ ಸಹಕಾರ ಸಂಘಗಳ ನಿಯಮದಡಿ ನೋಂದಣಿಯಾಗಿ ಶೇ.20ರಷ್ಟು ಭರಿಸಿದಲ್ಲಿ ಶೇ 80 ರಷ್ಟು ಸರ್ಕಾರದಿಂದ ಸಹಾಯಧನ ನೀಡಲಾಗುತ್ತಿದೆ. ಈ ಯೋಜನೆಯು ಈ ವರ್ಷದಿಂದಲೇ ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದರು.

ಶಾಸಕಿ ಪೂರ್ಣಿಮಾ ಶ್ರೀನಿವಾಸ್‌, ಶಶಿಕಲಾ ಸುರೇಶ್‌ ಬಾಬು, ಸದಾಶಿವ ಹಾಗೂ ಕೃಷಿ ಇಲಾಖೆ ಸಿಬ್ಬಂದಿ, ರೈತ ಮುಖಂಡರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.