ಕೃಷಿಯೊಂದಿಗೆ ಹೈನುಗಾರಿಕೆ ಮಾಡಿ: ಶಶಿಕಲಾ


Team Udayavani, Sep 26, 2020, 7:55 PM IST

cb-tdy-2

ಸಾಂದರ್ಭಿಕ ಚಿತ್ರ

ಚಿತ್ರದುರ್ಗ: ರೈತರು ಕೃಷಿಯ ಜತೆಗೆ ಉಪಕಸುಬಾಗಿ ಹೈನುಗಾರಿಕೆಯಂತಹ ಮಾಡಿದರೆ ಹೆಚ್ಚುಲಾಭವಾಗುತ್ತದೆ ಎಂದು ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶಬಾಬು ಸಲಹೆ ನೀಡಿದರು.

ಜಿಪಂ ಮಿನಿ ಸಭಾಂಗಣದಲ್ಲಿ ನಡೆದ ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆ ಸೌಲಭ್ಯಗಳ ಕುರಿತು ಅರಿವು ನೆರವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೃಷಿ ಕೆಲಸದ ಜತೆಗೆ ಹೈನುಗಾರಿಕೆ, ಕುರಿ ಕೋಳಿ ಸಾಗಾಣಿಕೆ ಮತ್ತಿತರ ಉಪಕಸುಬು ಅನುಸರಿಸಬೇಕು. ಇದರಿಂದ ಕುಟುಂಬಕ್ಕೆ ಮತ್ತಷ್ಟು ಆರ್ಥಿಕ ಲಾಭ ಸಿಗುವುದರಿಂದ ಉತ್ತಮ ಬದುಕು ಕಟ್ಟಿಕೊಳ್ಳಬಹುದು. ಒಂದು ವೇಳೆ ಒಂದು ಬೆಳೆಯಲ್ಲಿ ನಷ್ಟ ಅನುಭವಿಸಿದರೆ ಮತ್ತೂಂದರಲ್ಲಿ ಲಾಭ ಸಿಗುತ್ತದೆ ಎಂದು ತಿಳಿಸಿದರು.

ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಉಪನಿರ್ದೇಶಕ ಡಾ.ಕೃಷ್ಣಪ್ಪ ಮಾತನಾಡಿ, ರೈತರು ಕೃಷಿ ಜತೆಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ ಮಾಡಬೇಕು. ಇತ್ತೀಚೆಗೆ ಕುರಿ ಸಾಗಾಣಿಕೆ ಉಪ ಕಸುಬಿಗಿಂತ ಉದ್ಯಮವಾಗಿ ಬದಲಾಗುತ್ತಿರುವುನ್ನು ಗಮನಿಸಬಹುದು ಎಂದರು.

ಕೋವಿಡ್‌-19 ಬಂದಂಹ ಸಂದರ್ಭದಲ್ಲಿ ವಲಸೆ ಹೋದವರು ಮತ್ತೆ ತಮ್ಮ ತಮ್ಮ ಗ್ರಾಮಗಳಿಗೆ ಆಗಮಿಸಿ ಸಾಕಷ್ಟು ಜನರು ಹೈನುಗಾರಿಕೆಯಲ್ಲಿ ತೊಡಗಿರುವುದನ್ನು ಕಾಣಬಹುದಾಗಿದೆ. ಇದು ನಿರುದ್ಯೋಗ ಸಮಸ್ಯೆಗೆ ಪರ್ಯಾಯವಾಗಿದೆ ಎಂದು ಹೇಳಿದರು.

ಭಾರತ ಹಾಲು ಉತ್ಪಾದನೆಯಲ್ಲಿ ಜಗತ್ತಿನಲ್ಲೇ ಮೊದಲ ಸ್ಥಾನದಲ್ಲಿದೆ. ವಿಶ್ವ ಆರೋಗ್ಯ ಸಂಸ್ಥೆಯ ಶಿಫಾರಸಿನಂತೆ ಒಬ್ಬ ಮನುಷ್ಯ ಆರೋಗ್ಯವಾಗಿರಲು ದಿನಕ್ಕೆ 300 ಗ್ರಾಂ ನಷ್ಟು ಹಾಲು, ವರ್ಷಕ್ಕೆ 11 ಕೆಜಿ ಮಾಂಸ, 190 ಮೊಟ್ಟೆ ಸೇವನೆ ಮಾಡಬೇಕು ಎಂದು ಹೇಳಿದೆ ಎಂದರು.

ಜಿಲ್ಲೆಯಲ್ಲಿ ಒಟ್ಟು 2,15,566 ಜಾನುವಾರುಗಳಿದ್ದು, ಇದರಲ್ಲಿ 3.39 ಲಕ್ಷ ದನ, ಎಮ್ಮೆಗಳಿವೆ. 17.5 ಲಕ್ಷ ಕುರಿ, ಮೇಕೆಗಳಿವೆ. 20,70,000 ಕೋಳಿಗಳಿದ್ದು, ಇವುಗಳ ಆರೋಗ್ಯ ಸಂರಕ್ಷಣೆಗೆ ರೋಗಗಳ ನಿಯಂತ್ರಣಕ್ಕೆ ಇಲಾಖೆಯು ಜಿಲ್ಲೆಯಾದ್ಯಂತ ಪಶುಚಿಕಿತ್ಸಾ ಕೇಂದ್ರಗಳು, ಪಶು ಆಸ್ಪತ್ರೆ, ಪಶು ಚಿಕಿತ್ಸಾಲಯಗಳು, ಜಿಲ್ಲಾ ಮಟ್ಟದಲ್ಲಿ ಸಂಚಾರಿ ಪಶು ಚಿಕಿತ್ಸಾಲಯಗಳು, ಪಾಲಿ ಕ್ಲಿನಿಕ್‌ನಲ್ಲಿ ತಜ್ಞ ವೈದ್ಯರು ಇಲಾಖೆಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.

2020-21ನೇ ಸಾಲಿನಲ್ಲಿ ಏಪ್ರಿಲ್‌ನಿಂದ ಈವರೆಗೆ ಗಳಲೆ ರೋಗದ ವಿರುದ್ಧ 2.8 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕಿದ್ದೇವೆ. ಚಪ್ಪೆ ರೋಗದ ವಿರುದ್ಧ ದನಗಳಿಗೆ 46 ಸಾವಿರ ಜಾನುವಾರುಗಳಿಗೆ, ಕುರಿಸಿಡುಬು ವಿರುದ್ಧ 48,919 ಕುರಿಗಳಿಗೆ ಲಸಿಕೆ, ಪಿಪಿಆರ್‌ ವಿರುದ್ಧ 7.29 ಲಕ್ಷ ಕುರಿ ಮತ್ತು ಮೇಕೆಗೆ ಲಸಿಕೆ ಹಾಕಲಾಗಿದೆ ಎಂದು ಮಾಹಿತಿ ನೀಡಿದರು. ಪಶುಪಾಲನಾ ಇಲಾಖೆ ಹಾಗೂ ಜಿಪಂ ಅಧಿಕಾರಿ,ಸಿಬ್ಬಂದಿಗಳಿದ್ದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.