ದ್ಯಾಮಲಾಂಬಾ ದೇವಿ ಸಿಡಿ ಮಹೋತ್ಸವ


Team Udayavani, Apr 8, 2018, 12:21 PM IST

cta-1.jpg

ಚಿತ್ರದುರ್ಗ: ತಾಲೂಕಿನ ಹಿರೇಗುಂಟನೂರು ಗ್ರಾಮದ ಶಕ್ತಿದೇವತೆ ದ್ಯಾಮಲಾಂಬಾ ದೇವಿಯ ಸಿಡಿ ಮಹೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

ಸಿಡಿ ಮಹೋತ್ಸವ ಆರಂಭಕ್ಕೂ ಮುನ್ನ ಸಿಡಿ ಕಂಬದ ಸುತ್ತ ಗ್ರಾಮದೇವತೆಗಳಾದ ದ್ಯಾಮಲಾಂಬಾ, ದುರ್ಗಮ್ಮ, ದುರ್ಗಾಂಬಿಕಾ ದೇವತೆಗಳ ಮೂರ್ತಿಗಳನ್ನು ಮೂರು ಸುತ್ತು ಪ್ರದಕ್ಷಿಣೆ ಹಾಕಿಸಲಾಯಿತು. ಕಳೆದ ಬಾರಿಗಿಂತ ಈ ಸಲ ಸಿಡಿ ಮಹೋತ್ಸವ ತಡವಾಗಿದ್ದರಿಂದ ಭಕ್ತರು ಸಿಡಿ ಆಡುವುದನ್ನು ಬಹು ನಿರೀಕ್ಷೆಯಿಂದ ಎದುರು ನೋಡುತ್ತಿದ್ದರು.

ಸಿಡಿ ಮಹೋತ್ಸವ ಪ್ರಾರಂಭವಾಗುತ್ತಿದ್ದಂತೆ ಭಕ್ತರಿಂದ ಹಷೋರ್ದ್ಘಾರವೇ ಮೊಳಗಿತು. ಹಿರೇಗುಂಟನೂರು ಹೋಬಳಿಯ ಸುತ್ತಮುತ್ತ ವಿವಿಧ ಗ್ರಾಮಗಳಿಂದ ಸುಮಾರು 80ಕ್ಕೂ ಹೆಚ್ಚು ಭಕ್ತರು ಸಿಡಿ ಆಡಿ ತಮ್ಮ ಹರಕೆ ತೀರಿಸಿಕೊಂಡರು. 

ವಿವಿಧೆಡೆ ಸಿಡಿ ಮಹೋತ್ಸವಕ್ಕಾಗಿ ಭೂಮಿಗೆ ನೇರವಾಗಿ ಕಂಬ ನೆಡಲಾಗುತ್ತದೆ. ಅದಕ್ಕೆ ಮಲ್ಲಕಂಬ ಎನ್ನುವ ಹೆಸರಿದೆ. ಕಂಬದ ಮೇಲೆ ತಿರುಗಣಿ ಇಡಲಾಗುತ್ತದೆ. ಅದರ ಮೇಲೆ ಸಮಾನಾಂತರವಾಗಿ ಪ್ರತಿಷ್ಠಾಪಿಸುವ ಸಿಡಿಕಂಬ ಸುಲಭವಾಗಿ ತಿರುಗುವಂತೆ ವ್ಯವಸ್ಥೆ ಮಾಡಲಾಗುತ್ತದೆ. ಕಂಬದ ಒಂದು ತುದಿಗೆ ಮನುಷ್ಯನನ್ನು ಬಟ್ಟೆಯಿಂದ ಕಟ್ಟಿ ಮೂರು ಸಲ ತಿರುಗಿಸುವುದು ಈ ಉತ್ಸವದ ಸಂಪ್ರದಾಯ.

ಬಹಳ ದಿನಗಳ ಹಿಂದೆ ಸಿಡಿಕಂಬಕ್ಕೆ ಮನುಷ್ಯನನ್ನು ಕಟ್ಟುವ ಬದಲು ಬೆನ್ನಿಗೆ ಕೊಂಡಿ ಹಾಕಿ ತಿರುಗಿಸಲಾಗುತ್ತಿತ್ತು. ಅದು ಇಂದಿಗೂ ಕೆಲವು ಪ್ರದೇಶಗಳಲ್ಲಿ ಪ್ರಚಲಿತದಲ್ಲಿದೆ. ಆದರೆ ಇಲ್ಲಿನ ಸಿಡಿ ಮಹೋತ್ಸವದ ವಿಶೇಷತೆಯೇ ವಿಭಿನ್ನವಾಗಿದೆ. ಸಿಡಿ ಉತ್ಸವದ ಕಂಬದ ಕೆಳಗೆ ಎರಡು ಚಕ್ರವುಳ್ಳ ಗಾಡಿಯನ್ನು ಮಾಡಿ ಅದರ ಮೇಲೆ ಹರಕೆ ಹೊತ್ತ ಭಕ್ತರನ್ನು ಕಟ್ಟಿ ಸಿಡಿ ಆಡಿಸುತ್ತಾರೆ. ಇಲ್ಲಿ ಮೂರು ಸುತ್ತು ಸುತ್ತುವ ಪದ್ಧತಿ ಇಲ್ಲ.

ಸಿಡಿ ಮಹೋತ್ಸವ ಮುಗಿದ ಬಳಿಕ ಹೂವಿನ ಪಲ್ಲಕ್ಕಿ ಉತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಅವಭೃತೋತ್ಸವದ ನಂತರ ದ್ಯಾಮಲಾಂಬಾ ದೇವತೆಯ ಗುಡಿದುಂಬುವ ಕಾರ್ಯ ಜರುಗಿತು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.