ಕುರುಬ ಪದ ಎಸ್ಟಿಗೆ ಸೇರಿಸಲು ಹೋರಾಟ
ಫೆ. 7ರ ಬೆಂಗಳೂರು ಸಮಾವೇಶದಲ್ಲಿ 10 ಲಕ್ಷ ಮಂದಿ ಪಾಲ್ಗೊಳ್ಳುವ ನಿರೀಕ್ಷೆ: ಕನಕಶ್ರೀ
Team Udayavani, Jan 24, 2021, 3:38 PM IST
ಚಿತ್ರದುರ್ಗ: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಹೊಸದಾಗಿ ಸೇರಿಸಬೇಕಿಲ್ಲ. ಈಗಾಗಲೇ ಆ ಸೌಲಭ್ಯ ಸಿಕ್ಕಿದೆ. ಆದರೆ ಬಿಟ್ಟು
ಹೋಗಿರುವ ಆರು ಪದಗಳನ್ನಷ್ಟೇ ಸೇರಿಸಬೇಕಿದೆ ಎಂದು ಕಾಗಿನೆಲೆ ಮಹಾಸಂಸ್ಥಾನದ ಶ್ರೀ ನಿರಂಜನನಾಂದಪುರಿ ಸ್ವಾಮೀಜಿ ಹೇಳಿದರು.
ಕುರುಬರನ್ನು ಎಸ್ಟಿಗೆ ಸೇರಿಸಲು ಕಾಗಿನೆಲೆಯಿಂದ ಆರಂಭವಾಗಿರುವ ಪಾದಯಾತ್ರೆ ಶನಿವಾರ ನಗರಕ್ಕೆ ಆಗಮಿಸಿದ ವೇಳೆ
ಸುದ್ದಿಗೋಷ್ಠಿ ಯಲ್ಲಿ ಶ್ರೀಗಳು ಮಾತನಾಡಿದರು. ಜೇನುಕುರುಬ, ಕಾಡುಕುರುಬ, ಗೊಂಡ, ರಾಜಗೊಂಡ, ಕಾಟನಾಯಕನ್, ಕುರುಮನ್, ಪದಗಳು ಎಸ್. ಟಿ. ಪಟ್ಟಿಯಲ್ಲಿವೆ. ಆದರೆ ಕುರುಬ ಎನ್ನುವ ಪದ ಮಾತ್ರ ಬಿಟ್ಟು ಹೋಗಿದೆ. ಇದು ಕೂಡ ಸೇರ್ಪಡೆ ಮಾಡಬೇಕು ಎನ್ನುವುದು ನಮ್ಮ ಒತ್ತಾಯ. ಅದಕ್ಕಾಗಿ ಐತಿಹಾಸಿಕ ಬೃಹತ್ ಪಾದಯಾತ್ರೆ ಆರಂಭಿಸಲಾಗಿದೆ ಎಂದರು.
ಕೊಡಗು, ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಯ ಕೆಲವರು ಪರಿಶಿಷ್ಟ ಪಂಗಡದ ಸೌಲಭ್ಯ ಪಡೆಯುತ್ತಿದ್ದಾರೆ. ಕೊಡಗು ಜಿಲ್ಲೆಯ
ವ್ಯಾಪ್ತಿಗೆ ಮಾತ್ರ ಕುರುಬ ಸಮುದಾಯಕ್ಕೆ ಸೌಲಭ್ಯ ಕಲ್ಪಿಸಲಾಗಿದೆ. ಇದನ್ನು ರಾಜ್ಯದ ಎಲ್ಲೆಡೆ ವಿಸ್ತರಿಸಬೇಕು. ಹಾಲುಮತ ಸೇರಿದಂತೆ ಇತರ 6 ಪದಗಳಿಂದ ಗುರುತಿಸುವ ಕುರುಬ ಸಮು ದಾಯದ ಪರ್ಯಾಯ ಹೆಸರುಗಳನ್ನು ಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ : ಸೋಡಿಗದ್ದೆ ಮಹಾಸತಿ ಜಾತ್ರೋತ್ಸವ ಆರಂಭ
ಫೆ. 7 ರಂದು ಬೆಂಗಳೂರಿನಲ್ಲಿ ನಡೆಯುವ ಸಮಾವೇಶದಲ್ಲಿ 10 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸಮಾವೇಶಕ್ಕೆ ಸಕಲ ಸಿದ್ಧತೆ
ಮಾಡಿಕೊಳ್ಳಲಾಗುತ್ತಿದೆ. ಪಾದಯಾತ್ರೆಗೆ ಅಭೂತ ಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಭಕ್ತರನ್ನು ಕಣ್ತುಂಬಿಕೊಂಡಾಗ ನಡಿಗೆಯ ದಣಿವು
ಮಾಯವಾಗುತ್ತದೆ ಎಂದರು.
ಹೊಸದುರ್ಗ ಶಾಖಾ ಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಪಾದಯಾತ್ರೆ ನಡೆಸಲಾಗುತ್ತಿದೆ. ಹಲವು ಪದಗಳಿಂದ ಗುರುತಿಸುವ ಸಮುದಾಯ ಮೀಸಲಾತಿ ಸೌಲಭ್ಯದಿಂದ
ವಂಚಿತವಾಗಿದೆ. ಸರ್ಕಾರ ಸರಿಯಾಗಿ ಸ್ಪಂದಿಸದೇ ಇದ್ದರೆ ಹೋರಾಟವನ್ನು ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು. ಫೆ. 7 ರಂದು ಪಾದಯಾತ್ರೆ ಬೆಂಗಳೂರು ತಲುಪಲಿದ್ದು, ಅಲ್ಲಿ ಬೃಹತ್ ಸಮಾವೇಶ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಿದ್ದೇವೆ. ಅಷ್ಟಕ್ಕೂ ಸ್ಪಂದಿಸದಿದ್ದರೆ 1 ತಿಂಗಳು ಗಡುವು ನೀಡಿ ನಂತರ ದೆಹಲಿಯ ಸಂಸತ್ ಭವನಕ್ಕೆ ನಮ್ಮ ಹೋರಾಟ ತೆಗೆದುಕೊಂಡು ಹೋಗುತ್ತೇವೆ. ಅಲ್ಲಿ ಧರಣಿ ನಡೆಸುತ್ತೇವೆ ಎಂದರು.
ಇದನ್ನೂ ಓದಿ : ರೈತರ ಟ್ರ್ಯಾಕ್ಟರ್ ರ್ಯಾಲಿಗೆ ಮಾರ್ಗಗಳನ್ನು ಸೂಚಿಸಿದ ದೆಹಲಿ ಪೊಲೀಸರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್