ಬಾಕಿ ಅರ್ಜಿ ವಿಲೇವಾರಿಗೆ ತಾಕೀತು

ಸಮನ್ವಯ ಸಮಿತಿ ರಚನೆಗೆ ಸರ್ಕಾರ ಸೂಚನೆ­ಕಚೇರಿಗಳಿಗೆ ಭೇಟಿ ನೀಡಿ

Team Udayavani, Mar 3, 2021, 6:33 PM IST

DC Balakrishna

ಚಿತ್ರದುರ್ಗ: ಸಕಾಲ ಯೋಜನೆಯಡಿ ಫೆಬ್ರವರಿ ತಿಂಗಳ ಅಂತ್ಯಕ್ಕೆ ಬಾಕಿ ಉಳಿದಿರುವ 3990 ಅರ್ಜಿಗಳನ್ನು ಇನ್ನೆರಡು ದಿನಗಳಲ್ಲಿ ವಿಲೇವಾರಿ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಈ.ಬಾಲಕೃಷ್ಣ ಅ ಧಿಕಾರಿಗಳಿಗೆ ತಾಕೀತು ಮಾಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಸಕಾಲ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಕಾಲಮಿತಿಯಲ್ಲಿ ಸೇವೆ ಒದಗಿಸಲು ಸಕಾಲ ಸೇವೆಗಳ ಅಧಿ ನಿಯಮ ಜಾರಿಯಾಗಿದೆ. ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದಿರುವ ಸಕಾಲ ಅರ್ಜಿ ಶೀಘ್ರ ವಿಲೇವಾರಿಗೆ ಅಗತ್ಯ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಸಕಾಲ ಯೋಜನೆ 2011ರಲ್ಲಿ ಜಾರಿಗೆ ಬಂದಿದ್ದು, ಈ ಯೋಜನೆಯಡಿ ನಾಗರಿಕರಿಗೆ ಒದಗಿಸಲಾಗುತ್ತಿರುವ ಸೇವೆಗಳ ಅರ್ಜಿಗಳನ್ನು ನಿಗದಿತ ಸಮಯದಲ್ಲಿ ಸಂಬಂಧಪಟ್ಟ ಇಲಾಖೆಗಳು ವಿಲೇವಾರಿ ಮಾಡುವುದರ ಮೂಲಕ ನಾಗರಿಕರಿಗೆ ಸೇವೆ ಒದಗಿಸಬೇಕು ಎಂದರು.

ಸಕಾಲ ಯೋಜನೆಯನ್ನು ಪರಿಣಾಮಕಾರಿ ಆಗಿ ಅನುಷ್ಠಾನಗೊಳಿಸಲು ಜಿಲ್ಲೆಯಲ್ಲಿ ಸಮನ್ವಯ ಸಮಿತಿ ರಚನೆಗೆ ಸರ್ಕಾರ ಸೂಚನೆ ನೀಡಿದೆ. ಈ ಸಮಿತಿಯಲ್ಲಿ ಅಪರ ಜಿಲ್ಲಾ ಧಿಕಾರಿಗಳು ಅಧ್ಯಕ್ಷರಾಗಿದ್ದು, ವಿವಿಧ ಇಲಾಖೆಯ ಗ್ರೂಪ್‌ ಎ ವೃಂದದ ಅ ಧಿಕಾರಿಗಳು ಸದಸ್ಯರಾಗಿರುತ್ತಾರೆ. ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರು ಸಂಚಾಲಕರಾಗಿರುತ್ತಾರೆ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿಗಳು ಪ್ರತಿ ಸೋಮವಾರ ತಮ್ಮ ಹಂತದಲ್ಲಿ ಅಧಿಕಾರಿಗಳ ಸಭೆ ಕರೆದು, ಇ-ಮೇಲ್‌ ಮೂಲಕ ಸಕಾಲ ಮಿಷನ್‌ಗೆ ವರದಿ ಕಳುಹಿಸಬೇಕು. ಪರಿಶೀಲನಾ ತಂಡವು ಪ್ರತಿ ಶನಿವಾರ ತಮ್ಮ ವ್ಯಾಪ್ತಿಯ ವಿವಿಧ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ, ತಪಾಸಣೆ ನಡೆಸಬೇಕು ಎಂದರು.

ಇಲಾಖಾವಾರು ಬಾಕಿ ಉಳಿದಿರುವ ಅರ್ಜಿಗಳು: ಕೆಎಸ್‌ಆರ್‌ಟಿಸಿ ನಿಗಮದಲ್ಲಿ ಒಟ್ಟು 2421 ಅರ್ಜಿಗಳು, ಕಾರ್ಮಿಕ ಇಲಾಖೆಯಲ್ಲಿ ಒಟ್ಟು 1054, ಕಂದಾಯ ಇಲಾಖೆಯಲ್ಲಿ 241, ಸಮಾಜ ಕಲ್ಯಾಣ ಇಲಾಖೆಯಲ್ಲಿ 124, ಬೆಸ್ಕಾಂನಲ್ಲಿ 46, ಸಾರಿಗೆ ಇಲಾಖೆಯಲ್ಲಿ 33, ನಗರಸಭೆಗಳಲ್ಲಿ 13 ಅರ್ಜಿ, ಆರೋಗ್ಯ ಇಲಾಖೆಯಲ್ಲಿ ಒಟ್ಟು 10 ಅರ್ಜಿಗಳು ಬಾಕಿ ಉಳಿದಿವೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಒಟ್ಟು 10 ಅರ್ಜಿಗಳಿದ್ದು, ಚಿತ್ರದುರ್ಗದಲ್ಲಿ 09, ಹೊಳಲ್ಕೆರೆಯಲ್ಲಿ 01 ಅರ್ಜಿ ಬಾಕಿ ಇದೆ.

ಪಟ್ಟಣ ಪಂಚಾಯತ್‌ನಲ್ಲಿ ಒಟ್ಟು 09 ಅರ್ಜಿಗಳು ಮೊಳಕಾಲ್ಮೂರು ತಾಲೂಕಿನಲ್ಲಿ ಬಾಕಿ ಉಳಿದಿವೆ. ಪರಿಶಿಷ್ಟ ಪಂಗಡ ಅಭಿವೃದ್ಧಿ ಇಲಾಖೆಯಲ್ಲಿ 05 ಅರ್ಜಿಗಳು ಬಾಕಿಯಿದ್ದು, ಚಿತ್ರದುರ್ಗದಲ್ಲಿ 03, ಹಿರಿಯೂರು 01, ಹೊಸದುರ್ಗ 01 ಅರ್ಜಿ ಬಾಕಿ ಇದೆ. ಕಾನೂನು ಮಾಪನ ಶಾಸ್ತ್ರ ಇಲಾಖೆಯಲ್ಲಿ ಒಟ್ಟು 4 ಅರ್ಜಿಗಳು ಚಿತ್ರದುರ್ಗದಲ್ಲಿ ಬಾಕಿ ಇವೆ. ವಿಕಲಚೇತನ ಮತ್ತು ಹಿರಿಯ ನಾಗರಿಕ ಇಲಾಖೆಯಲ್ಲಿ ಒಟ್ಟು 2 ಅರ್ಜಿಗಳು ಚಿತ್ರದುರ್ಗದಲ್ಲಿ ಬಾಕಿ ಇವೆ. ಕೃಷಿ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಭೂಮಾಪನ ಇಲಾಖೆಯಲ್ಲಿ ತಲಾ ಒಂದು ಅರ್ಜಿ ಬಾಕು ಉಳಿದಿವೆ. ಸಕಾಲ ಯೋಜನೆಯಡಿ ಶೇ. 7.68ರಷ್ಟು ಅರ್ಜಿಗಳು ತಿರಸ್ಕೃತಗೊಂಡಿವೆ. ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.