ಕಣ್ಣನ್ನು ರಾಷ್ಟ್ರೀಯ ಸಂಪತ್ತೆಂದು ಘೋಷಿಸಿ
Team Udayavani, Jan 25, 2019, 10:26 AM IST
ಚಿತ್ರದುರ್ಗ: ನೇತ್ರ (ಕಣ್ಣು) ಮತ್ತು ಮಾನವನ ಅಂಗಾಂಗಗಳನ್ನು ರಾಷ್ಟ್ರೀಯ ಸಂಪತ್ತು ಎಂದು ಘೋಷಣೆ ಮಾಡಬೇಕೆಂದು ಡಾ| ಶಿವಮೂರ್ತಿ ಮುರುಘಾ ಶರಣರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಇಲ್ಲಿನ ಪತ್ರಕರ್ತರ ಭವನದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೇನೆ ವತಿಯಿಂದ ಸಂಗೊಳ್ಳಿ ರಾಯಣ್ಣನ ಹುತಾತ್ಮ ದಿನಾಚರಣೆ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ನೇತ್ರದಾನ ಶಿಬಿರವನ್ನು ಉದ್ಘಾಟಿಸಿ ಶರಣರು ಮಾತನಾಡಿದರು.
ದೇಶದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಅಂಧರಿದ್ದಾರೆ. ಕಣ್ಣುಗಳನ್ನು ರಾಷ್ಟ್ರೀಯ ಸಂಪತ್ತು ಎಂದು ಘೋಷಣೆ ಮಾಡಿದರೆ ಇಡೀ ದೇಶದ ಎಲ್ಲ ಅಂಧರ ಬಾಳಿಗೆ ಬೆಳಕು ನೀಡಬಹುದಾಗಿದೆ. ಈ ಕಾರ್ಯ ಮಾಡುವುದರಿಂದ ದೇಶವನ್ನು ಅಂಧ ಮುಕ್ತರನ್ನಾಗಿಸಬಹುದಾಗಿದೆ. ಅದೇ ರೀತಿ ಮಾನವನ ಅಂಗಾಂಗಗಳನ್ನೂ ರಾಷ್ಟ್ರೀಯ ಸಂಪತ್ತು ಎಂದು ಘೋಷಣೆ ಮಾಡುವುದರಿಂದ ಸಾಕಷ್ಟು ಸಂಶೋಧನೆಗಳಿಗೆ ಅವಕಾಶ ಕಲ್ಪಿಸಿದಂತಾಗುವುದಲ್ಲದೆ ಅನೇಕ ರೋಗ, ರುಜಿನಗಳಿಗೆ ಕಡಿವಾಣ ಹಾಕಲು ಸಹಕಾರಿಯಾಗಲಿದೆ . ನೆರೆಯ ಶ್ರೀಲಂಕಾ ದೇಶ ನೇತ್ರಗಳನ್ನು ರಾಷ್ಟ್ರೀಯ ಸಂಪತ್ತು ಎಂದು ಘೋಷಿಸಿರುವುದರಿಂದ ಆ ದೇಶವು ಅಂಧ ಮುಕ್ತ ದೇಶವಾಗಿದೆ. ಅಲ್ಲದೆ ಹೆಚ್ಚಾದ ಕಣ್ಣುಗಳನ್ನು ವಿದೇಶಗಳಿಗೆ ಕಳುಹಿಸಿಕೊಡಲಾಗುತ್ತಿದೆ. ಆದ್ದರಿಂದ ಕೇಂದ್ರ ಸರ್ಕಾರ ಈ ಎಲ್ಲ ಕಾರಣಗಳಿಂದಾಗಿ ಕಣ್ಣು ಮತ್ತು ದೇಹದ ಅಂಗಾಂಗಗಳನ್ನು ರಾಷ್ಟ್ರೀಯ ಸಂಪತ್ತು ಎಂದು ಘೋಷಣೆ ಮಾಡಿ ಸಂರಕ್ಷಿಸಬೇಕಾಗಿದೆ. ಆ ಮೂಲಕ ಭಾರತ ದೇಶ ಅಂಧ ಮುಕ್ತವಾಗಿ ಹೊರ ಹೊಮ್ಮಬೇಕಾಗಿದೆ ಎಂದು ತಿಳಿಸಿದರು.
ಚನ್ನಮ್ಮ ನಾಡಿನಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಬಲಗೈ ಭಂಟನಾಗಿದ್ದ. ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ್ದನ್ನು ನೆನೆದರೆ ರೋಮಾಂಚನವಾಗುತ್ತದೆ. ರಾಯಣ್ಣ ಒಬ್ಬ ದೇಶದ ಅಪ್ರತಿಮ ದೇಶಭಕ್ತ ಹಾಗೂ ಕನ್ನಡ ನಾಡಿನ ಮೊದಲ ಸ್ವಾತಂತ್ರ್ಯ ಹೋರಾಟಗಾರನಾಗಿದ್ದಾನೆ ಎಂದು ಬಣ್ಣಿಸಿದರು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೇನೆ ಅಧ್ಯಕ್ಷ ಟಿ. ಆನಂದ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಗೊಳ್ಳಿ ರಾಯಣ್ಣನ ಹುತಾತ್ಮ ದಿನಾಚರಣೆಯನ್ನು ಎರಡು ದಿನಗಳ ಕಾಲ ವಿಶೇಷವಾಗಿ ಆಚರಿಸಲಾಗುತ್ತಿದೆ. ಜ. 24 ಮತ್ತು 26 ರಂದು ನೇತ್ರದಾನ ಶಿಬಿರ, ಹತ್ತು ಮಂದಿ ನಿವೃತ್ತ ಯೋಧರಿಂದ ಮರಣಾ ನಂತರ ಕಣ್ಣುಗಳನ್ನು ದಾನವಾಗಿ ಪಡೆಯಲು ವಾಗ್ಧಾನ ಮಾಡಲಾಗುವುದು. ಇದು ನೇತ್ರದಾನದ ಮಹತ್ವ ಸಾರಲಿದೆ. ಜ. 26 ರಂದು ಸಂಜೆ 6:30ಕ್ಕೆ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ನಿಖೀತ್ ರಾಜ್ ಮೌರ್ಯ ಪಾಲ್ಗೊಳ್ಳಲಿದ್ದಾರೆ. ಈ ಎಲ್ಲ ಕಾರ್ಯಕ್ರಮಗಳಿಗೆ ನಿವೃತ್ತ ಯೋಧರ ಸಂಘದ ಪದಾಧಿಕಾರಿಗಳು ಕೈಜೋಡಿಸಲಿದ್ದಾರೆ ಎಂದರು.
ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಕೆ.ಆರ್. ಮಂಜುನಾಥ್, ಗಾಯತ್ರಿ ಶಿವರಾಂ, ಕ್ಯಾಪ್ಟನ್ ಮಹೇಶ್ವರಪ್ಪ, ನಗರಸಭಾ ಸದಸ್ಯ ಶಶಿಧರ, ಪದ್ಮನಾಭಬಾಬು, ಗೋವಿಂದರಾಜು ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ