ಧರ್ಮಸ್ಥಳ ಸಂಸ್ಥೆ ಸೇವೆ ಸ್ತುತ್ಯರ್ಹ


Team Udayavani, Jan 20, 2021, 7:44 PM IST

Dharmasthala Organization Service

ಮೊಳಕಾಲ್ಮೂರು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ “ನಮ್ಮೂರು ನಮ್ಮ ಕೆರೆ’ ಕಾರ್ಯಕ್ರಮದಡಿ ತಾಲೂಕಿನ ತುಮಕೂರ‌್ಲಹಳ್ಳಿ ಗ್ರಾಮದಲ್ಲಿ ಕೆರೆ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಸಿದ್ದಯ್ಯನಕೋಟೆ ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಶಾಖಾ ಮಠದ ಶ್ರೀ ಬಸವಲಿಂಗ ಸ್ವಾಮೀಜಿ ಕೆರೆ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ತುಮಕೂರ‌್ಲಹಳ್ಳಿ ಗ್ರಾಮದ ಸುಮಾರು 24.16 ಎಕರೆ ವಿಸ್ತೀರ್ಣದ ಕೆರೆಯನ್ನು 14.26 ಲಕ್ಷ ರೂ. ವೆಚ್ಚದಲ್ಲಿ ಹೂಳೆತ್ತುವ ಕಾಮಗಾರಿ ಕೈಗೊಳ್ಳಲಾಗಿದೆ. ಗ್ರಾಮೀಣ ಜನತೆಯ ಬದುಕನ್ನು ಹಸನು ಮಾಡುವ ಗುರಿಯನ್ನು ಧರ್ಮಸ್ಥಳ ಸಂಸ್ಥೆ ಹೊಂದಿದೆ. ಧರ್ಮಸ್ಥಳ ಧರ್ಮಾಧಿ ಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಕನಸಿನ ಕೂಸಾದ “ನಮ್ಮೂರು ನಮ್ಮ ಕೆರೆ’ ಕಾರ್ಯಕ್ರಮದ ಅಡಿಯಲ್ಲಿ ಕರ್ನಾಟಕದಾದ್ಯಂತ ಹೂಳು ತುಂಬಿದ ಕೆರೆಗಳನ್ನು ಪುನಶ್ಚೇತನಗೊಳಿಸಲು ಉದ್ದೇಶಿಸಲಾಗಿದೆ.

ಇದನ್ನೂ ಓದಿ:ಸರ್ವಿಸ್‌ ಆನ್‌ ವೀಲ್ಸ್‌ : ಮನೆ ಬಾಗಿಲಿಗೆ ಸರಕಾರಿ ಸೇವೆ

ತುಮಕೂರ‌್ಲಹಳ್ಳಿ ಕೆರೆಯನ್ನು 295ನೇ ಕೆರೆಯಾಗಿ ಡಾ| ವೀರೇಂದ್ರ ಹೆಗ್ಗಡೆಯವರು ಆಯ್ಕೆ ಮಾಡುವ ಮೂಲಕ ಗ್ರಾಮಾಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಶ್ಲಾಘಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಗಳೂರು ಜಿಲ್ಲಾ ಕಚೇರಿ ನಿರ್ದೇಶಕ ಜನಾರ್ದನ ಮಾತನಾಡಿ, ಮನುಷ್ಯರು ಹಾಗೂ ಜೀವರಾಶಿಗಳು ಉಸಿರಾಡಲು ಆಮ್ಲಜನಕ ಎಷ್ಟು ಮುಖ್ಯವೋ ಒಂದು ಗ್ರಾಮಕ್ಕೆ ಕೆರೆ ಕೂಡ ಅಷ್ಟೇ ಮುಖ್ಯ. ನಮ್ಮ ಮನೆಗಳಲ್ಲಿ ಸಿಂಟೆಕ್ಸ್‌, ತೊಟ್ಟಿ, ಡ್ರಮ್‌, ಕೊಡಗಳಲ್ಲಿ ಹೇಗೆ ನೀರನ್ನು ಶೇಖರಿಸಿ ಬಳಕೆ ಮಾಡಲಾಗುತ್ತಿದೆಯೋ ಅದೇ ರೀತಿ ನಮ್ಮ ಊರಿನ ಕೆರೆಯಲ್ಲಿ ನೀರು ಶೇಖರಣೆಯಾದಲ್ಲಿ ವ್ಯವಸಾಯ ಮಾಡಲು ರೈತರಿಗೆ, ಬಳಕೆ ಮಾಡಲು ಊರಿನ ಜನರಿಗೆ, ಕುಡಿಯಲು ಜಾನುವಾರು ಪಶು-ಪಕ್ಷಿಗಳಿಗೆ ತುಂಬಾ ಸಹಾಯವಾಗಲಿದೆ. ಗ್ರಾಮ ಪಂಚಾಯತ್‌ ಮತ್ತು ಗ್ರಾಮಸ್ಥರ ಸಹಕಾರದೊಂದಿಗೆ ಧರ್ಮಸ್ಥಳ ಸಂಸ್ಥೆಯು ಕಾಮಗಾರಿ ಆರಂಭಿಸಲಿದೆ ಎಂದರು.

ಕಾರ್ಯಕ್ರಮದಲ್ಲಿ ತಾಪಂ ಅಧ್ಯಕ್ಷೆ ಬೋರಮ್ಮ, ಇಂಜಿನಿಯರ್‌. ಮಂಜುನಾಥ, ಧರ್ಮಸ್ಥಳ ಸಂಸ್ಥೆ ಯೋಜನಾಧಿಕಾರಿ ಕೊರಗಪ್ಪ ಪೂಜಾರಿ, ಗ್ರಾಪಂ ಸದಸ್ಯ ಬಸಣ್ಣ, ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜಣ್ಣ, ಪಿಡಿಒ ಹೊನ್ನೂರಪ್ಪ ಭಾಗವಹಿಸಿದ್ದರು

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.