ಗುಣಮಟ್ಟದ ಬಿತ್ತನೆ ಬೀಜ ವಿತರಿಸಿ
Team Udayavani, Jun 21, 2018, 2:50 PM IST
ಮೊಳಕಾಲ್ಮೂರು: ತಾಲೂಕಿನಲ್ಲಿನ ಕೃಷಿ ರೈತರಿಗೆ ಬಿತ್ತನೆ ಮಾಡಲು ಗುಣಮಟ್ಟದ ಕೃಷಿ ಪರಿಕರಗಳನ್ನು ವಿತರಿಸಬೇಕು ಎಂದು ಕೃಷಿ ಅಧಿಕಾರಿ ವೆಂಕಟೇಶ್ ತಿಳಿಸಿದರು..
ತಾಲೂಕಿನ ರಾಂಪುರ ಗ್ರಾಮದಲ್ಲಿ ರೈತರಿಗೆ ಮಾರಾಟ ಮಾಡುವ ಬೀಜ ಮತ್ತು ಗೊಬ್ಬರ ಅಂಗಡಿಗಳ ದಾಸ್ತಾನನ್ನು ಪರಿಶೀಲಿಸಿ ಅವರು ಮಾತನಾಡಿದರು. ಮುಂಗಾರು ಹಂಗಾಮು ಆರಂಭವಾಗಿದ್ದು, ಮಾರಾಟ ಅಂಗಡಿಗಳಲ್ಲಿ ಕೃಷಿಕರು ಬಿತ್ತನೆ ಮಾಡುವ ಗುಣಮಟ್ಟದ ಬಿತ್ತನೆ ಬೀಜಗಳನ್ನು ವಿತರಿಸಬೇಕು. ಕಳಪೆ ಗುಣಮಟ್ಟದ ಬಿತ್ತನೆ ಬೀಜಗಳನ್ನು ಮಾರಾಟ ಮಾಡಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಕಳಪೆ ಗುಣಮಟ್ಟದ ಬಿತ್ತನೆ ಬೀಜಗಳನ್ನು ಮಾರಾಟ ಮಾಡುವುದರಿಂದ ಇಳುವರಿ ಕಡಿಮೆಯಾಗಿ ರೈತರಿಗೆ ಹೆಚ್ಚಿನ ನಷ್ಟ ಸಂಭವಿಸಲಿದೆ. ರೈತರು ಸಾಲಬಾಧೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುವ ದುಸ್ಥಿತಿ ನಿರ್ಮಾಣವಾಗಲಿದೆ. ರೈತರ ಉತ್ತಮ ಭವಿಷ್ಯ ನಿರ್ಮಾಣಕ್ಕಾಗಿ ಕೃಷಿ ಪರಿಕರ ವ್ಯಾಪಾರಸ್ಥರು ಗುಣಮಟ್ಟದ ಬೀಜಗಳು ಮತ್ತು ಕೃಷಿ ಪರಿಕರಗಳನ್ನು ವಿತರಿಸಬೇಕು ಎಂದು ಹೇಳಿದರು.
ಸಾವಯವ ಭಾಗ್ಯ ಯೋಜನೆ ರಾಜಣ್ಣ ಮಾತನಾಡಿ, ಮುಂಗಾರು ಹಂಗಾಮಿನಲ್ಲಿ ಈ ಬಾರಿ ತಾಲೂಕಿನಲ್ಲಿ ಉತ್ತಮ ಮಳೆಯಾಗಿದ್ದು, ಕೂಡಲೇ ಜಮೀನುಗಳನ್ನು ಸಿದ್ಧತೆ ಮಾಡಿಕೊಂಡು ಸಕಾಲಕ್ಕೆ ಬಿತ್ತನೆ ಮಾಡಬೇಕು. ಬಿತ್ತನೆಯ
ಪೂರ್ವದಲ್ಲಿ ಹೆಚ್ಚಾಗಿ ರಾಸಾಯನಿಕ ಗೊಬ್ಬರಗಳನ್ನು ಬಳಸದೆ ಸಾವಯವ ಗೊಬ್ಬರವನ್ನು ಬಳಸಿ ಹೆಚ್ಚಿನ ಇಳುವರಿ ಪಡೆಯಬೇಕು. ಕೃಷಿ ಪರಿಕರಣಗಳನ್ನು ಮಾರಾಟ ಮಾಡುವ ವ್ಯಾಪಾರಸ್ಥರು ಗುಣಮಟ್ಟದ ಕೃಷಿಪರಿಕರಳನ್ನು ವಿತರಿಸಿ ಅವರ ಉತ್ತಮ ಬದುಕಿಗೆ ಸಹಕಾರ ನೀಡಬೇಕೆಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ದೇವಸಮುದ್ರ ಹೋಬಳಿಯ ರಾಂಪುರ ಹಾಗೂ ಇನ್ನಿತರ ಗ್ರಾಮಗಳಲ್ಲಿ ರೈತರಿಗೆ ಮಾರಾಟ ಮಾಡುವ ಬೀಜ ಮತ್ತು ಗೊಬ್ಬರ ಅಂಗಡಿಗಳ ದಾಸ್ತಾನನ್ನು ಪರಿಶೀಲಿಸಿ ಗುಣಮಟ್ಟದ ಕೃಷಿ ಪರಿಕರಗಳನ್ನು ವಿತರಿಸಬೇಕು. ತಪ್ಪಿದ್ದಲ್ಲಿ ಅಂಗಡಿ ಪರವಾನಿಗೆ ರದ್ದುಪಡಿಸಲು ನೋಟೀಸ್ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಆತ್ಮ ಯೋಜನೆಯ ಶಿವಣ್ಣ ಹಾಗೂ ರೈತ ಅನುವುಗಾರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ
Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
MUST WATCH
ಹೊಸ ಸೇರ್ಪಡೆ
Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್ ಮಾಡಿದ್ರಾ ಸಮಂತಾ?: ಟ್ರೆಂಡ್ ಆದ ಸ್ಯಾಮ್
Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್ ಬೇಲಿ!
Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ