ದೌರ್ಜನ್ಯ ಸಂತ್ರಸ್ತರಿಗೆ ಪರಿಹಾರ ವಿತರಣೆ


Team Udayavani, Mar 23, 2018, 11:25 AM IST

cta-1.jpg

ಚಿತ್ರದುರ್ಗ: ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ದೌರ್ಜನ್ಯ ತಡೆ ನಿಯಂತ್ರಣ ಕಾಯ್ದೆಯಡಿ ದಾಖಲಾದ 17 ಪ್ರಕರಣಗಳಲ್ಲಿ ನೊಂದ ಸಂತ್ರಸ್ತರಿಗೆ ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸಲು 23.10 ಲಕ್ಷ ರೂ. ವಿತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ನಾ ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ 2018ನೇ ಸಾಲಿನ ಮೊದಲ ತ್ತೈಮಾಸಿಕ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಿಹಾರ ನೀಡಿದ ಪ್ರಕರಣಗಳಲ್ಲಿ ತಲಾ ಒಂದು ಕೊಲೆ ಮತ್ತು ಅತ್ಯಾಚಾರ, 15 ಜಾತಿ ನಿಂದನೆ ಪ್ರಕರಣಗಳು ಸೇರಿವೆ ಎಂದರು.

2017ರ ಜನವರಿಯಿಂದ ಫೆಬ್ರವರಿ 2018 ರವರೆಗೆ 48 ವಿವಿಧ ಪ್ರಕರಣಗಳು ದಾಖಲಾಗಿದ್ದು, 2017ರ ಜೂನ್‌ ತಿಂಗಳಲ್ಲಿಯೇ ಅಧಿಕ 15 ಪ್ರಕರಣಗಳು ದಾಖಲಾಗಿವೆ. ಒಂದು ತಿಂಗಳಲ್ಲಿ ಇಷ್ಟೊಂದು ಪ್ರಕರಣಗಳು ಏತಕ್ಕಾಗಿ ದಾಖಲಾಗಿವೆ ಎಂಬ ವಿವರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ದಾಖಲಾದ ಒಟ್ಟು ಪ್ರಕರಣಗಳಲ್ಲಿ ಇಲ್ಲಿಯವರೆಗೆ 47 ಪ್ರಕರಣಗಳ ವಿಲೇ ಆಗಿವೆ. ಇದರಲ್ಲಿ ಮೂರು ಪ್ರಕರಣಗಳಿಗೆ ಶಿಕ್ಷೆಯಾಗಿದೆ. 25 ಪ್ರಕರಣಗಳು ಮಾತ್ರ ನ್ಯಾಯಾಲಯದಲ್ಲಿ ಇತ್ಯರ್ಥಕ್ಕಾಗಿ ಬಾಕಿ ಇವೆ ಎಂದರು. ಸಮಾಜ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿದ್ದ
ಹೊಲಿಗೆ ತರಬೇತಿ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ 30 ಜನ ಕೂಲಿಕಾರರಲ್ಲಿ ಏಳು ಜನರಿಗೆ ನಿವೇಶನ ನೀಡಲಾಗಿದೆ. ನಗರದಲ್ಲಿ ವಾಸಿಸುವ 11 ನಿವೇಶನ ರಹಿತರಿಗೆ ನೀಡಲು ಕಳೆದ ಹಲವು ಸಭೆಯಲ್ಲಿ ಚರ್ಚಿಸಲಾಗಿದ್ದರೂ ನೀಡಲಾಗಿಲ್ಲ ಎಂದು ಸಮಿತಿ ಸದಸ್ಯರು ಪ್ರಸ್ತಾಪಿಸಿದರು.

ಶಾಸಕರ ಅಧ್ಯಕ್ಷತೆಯಲ್ಲಿ ನಡೆಯುವ ಆಶ್ರಯ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಸೇರ್ಪಡೆ ಮಾಡಿ ನಿವೇಶನ ಒದಗಿಸಲಾಗುತ್ತದೆ ಎಂದು ಪೌರಾಯುಕ್ತರು ಸಭೆಗೆ ತಿಳಿಸಿದರು. ಹಿಂದಿನ ಹಲವು ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದ್ದು ಮುಂದಿನ ಸಭೆಯೊಳಗೆ ಇತ್ಯರ್ಥ
ಮಾಡಲು ಪೌರಾಯುಕ್ತರಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಚಳ್ಳಕೆರೆ ತಾಲೂಕಿನ ನೇರ್ಲಗುಂಟೆಯಲ್ಲಿ 2015 ರಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡಿದ್ದರೂ ನೀರು ಪೂರೈಕೆ ಮಾಡದ ಕಾರಣ ಜನರಿಗೆ ತೊಂದರೆಯಾಗಿದೆ. ಈ ಬಗ್ಗೆ ಗ್ರಾಮ ಪಂಚಾಯತ್‌ದ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳಿಂದ ಮಾಹಿತಿ ಪಡೆದು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪಂಚಾಯತ್‌ ಯೋಜನಾ ನಿರ್ದೇಶಕ ಪ್ರಭುಸ್ವಾಮಿ ತಿಳಿಸಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ರಾಮ ಎಲ್‌. ಅರೆಸಿದ್ದಿ, ಉಪವಿಭಾಗಾಧಿಕಾರಿ ವಿಜಯಕುಮಾರ್‌, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಂಜುಳಮ್ಮ, ಸದಸ್ಯರಾದ ನಿರಂಜನಮೂರ್ತಿ, ನೇ.ಹ. ಮಲ್ಲೇಶ್‌, ಬೈಲಮ್ಮ ಹಾಗೂ ವಿವಿಧ ಇಲಾಖೆಗಳ
ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ISRO Success: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

ISRO ಸಾಧನೆ: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.